<p><strong>ನವದೆಹಲಿ (ಪಿಟಿಐ): </strong>ಕರ್ನಾಟಕ ಮತ್ತು ಒಡಿಶಾದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿರುವ ಗಣಿ ಹಗರಣಗಳು ದೇಶದ ಉಕ್ಕು ಉದ್ಯಮದ ಭವಿಷ್ಯವನ್ನು ಮಸುಕಾಗಿಸಿವೆ ಎಂದು ವಿಶ್ವಬ್ಯಾಂಕ್ ವಿಶ್ಲೇಷಿಸಿದೆ.<br /> <br /> ಗಣಿಗಾರಿಕೆ ಅದರಲ್ಲೂ ವಿಶೇಷವಾಗಿ ಕಬ್ಬಿಣ ಅದಿರು ಗಣಿಗಾರಿಕೆಗೆ ಸಂಬಂಧಿಸಿದಂತೆ ಈ ಎರಡೂ ರಾಜ್ಯಗಳಲ್ಲಿ ನಡೆದಿರುವ ಹಗರಣಗಳು ಉಕ್ಕು ಉದ್ಯಮದ ಭವಿಷ್ಯದ ಬೆಳವಣಿಗೆಗೆ ಅಡ್ಡಿಯಾಗಿವೆ ಎಂದು ವಿಶ್ವಬ್ಯಾಂಕ್ ಅಭಿಪ್ರಾಯಪಟ್ಟಿದೆ.<br /> <br /> ಬಂಡವಾಳ ಹೂಡಿಕೆಯಲ್ಲಿ ಇಳಿಕೆ, ಉದ್ಯಮದಿಂದ ಬಂಡವಾಳ ವಾಪಸಾತಿ ಮತ್ತು ಷೇರುಪೇಟೆಯಲ್ಲಿ ವಹಿವಾಟು ಇಳಿಕೆಯು ಈ ಉದ್ಯಮದ ಸಮಸ್ಯೆಗಳನ್ನು ಇನ್ನಷ್ಟು ತೀವ್ರಗೊಳಿಸಿದೆ ಎಂದು ವಿಶ್ವಬ್ಯಾಂಕ್, ಭಾರತದ ಆರ್ಥಿಕತೆಗೆ ಸಂಬಂಧಿಸಿದ ವರದಿಯಲ್ಲಿ ತಿಳಿಸಿದೆ.<br /> <br /> ಗಣಿಗಾರಿಕೆಗೆ ಅನುಮತಿ ದೊರೆಯದಿರುವುದರಿಂದ ಹೂಡಿಕೆದಾರರು ಬಂಡವಾಳ ತೊಡಗಿಸಲು ಹಿಂದೇಟು ಹಾಕುತ್ತಿದ್ದಾರೆ. ಭೂಮಿ ಸ್ವಾಧೀನ ವಿವಾದಗಳು ಹೂಡಿಕೆದಾರರನ್ನು ನಿರುತ್ಸಾಹಗೊಳಿಸಿವೆ.ವಿದೇಶಿ ನೇರ ಹೂಡಿಕೆಗೆ ಸಂಬಂಧಿಸಿದಂತೆ ಸುಧಾರಣಾ ಕ್ರಮಗಳನ್ನು ಕೈಗೊಂಡರೆ ಅದರಿಂದ ಭಾರತದ ಅರ್ಥವ್ಯವಸ್ಥೆಗೆ ಚೇತರಿಕೆ ದೊರೆಯಲಿದೆ ಎಂದೂ ವಿಶ್ವಬ್ಯಾಂಕ್ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಕರ್ನಾಟಕ ಮತ್ತು ಒಡಿಶಾದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿರುವ ಗಣಿ ಹಗರಣಗಳು ದೇಶದ ಉಕ್ಕು ಉದ್ಯಮದ ಭವಿಷ್ಯವನ್ನು ಮಸುಕಾಗಿಸಿವೆ ಎಂದು ವಿಶ್ವಬ್ಯಾಂಕ್ ವಿಶ್ಲೇಷಿಸಿದೆ.<br /> <br /> ಗಣಿಗಾರಿಕೆ ಅದರಲ್ಲೂ ವಿಶೇಷವಾಗಿ ಕಬ್ಬಿಣ ಅದಿರು ಗಣಿಗಾರಿಕೆಗೆ ಸಂಬಂಧಿಸಿದಂತೆ ಈ ಎರಡೂ ರಾಜ್ಯಗಳಲ್ಲಿ ನಡೆದಿರುವ ಹಗರಣಗಳು ಉಕ್ಕು ಉದ್ಯಮದ ಭವಿಷ್ಯದ ಬೆಳವಣಿಗೆಗೆ ಅಡ್ಡಿಯಾಗಿವೆ ಎಂದು ವಿಶ್ವಬ್ಯಾಂಕ್ ಅಭಿಪ್ರಾಯಪಟ್ಟಿದೆ.<br /> <br /> ಬಂಡವಾಳ ಹೂಡಿಕೆಯಲ್ಲಿ ಇಳಿಕೆ, ಉದ್ಯಮದಿಂದ ಬಂಡವಾಳ ವಾಪಸಾತಿ ಮತ್ತು ಷೇರುಪೇಟೆಯಲ್ಲಿ ವಹಿವಾಟು ಇಳಿಕೆಯು ಈ ಉದ್ಯಮದ ಸಮಸ್ಯೆಗಳನ್ನು ಇನ್ನಷ್ಟು ತೀವ್ರಗೊಳಿಸಿದೆ ಎಂದು ವಿಶ್ವಬ್ಯಾಂಕ್, ಭಾರತದ ಆರ್ಥಿಕತೆಗೆ ಸಂಬಂಧಿಸಿದ ವರದಿಯಲ್ಲಿ ತಿಳಿಸಿದೆ.<br /> <br /> ಗಣಿಗಾರಿಕೆಗೆ ಅನುಮತಿ ದೊರೆಯದಿರುವುದರಿಂದ ಹೂಡಿಕೆದಾರರು ಬಂಡವಾಳ ತೊಡಗಿಸಲು ಹಿಂದೇಟು ಹಾಕುತ್ತಿದ್ದಾರೆ. ಭೂಮಿ ಸ್ವಾಧೀನ ವಿವಾದಗಳು ಹೂಡಿಕೆದಾರರನ್ನು ನಿರುತ್ಸಾಹಗೊಳಿಸಿವೆ.ವಿದೇಶಿ ನೇರ ಹೂಡಿಕೆಗೆ ಸಂಬಂಧಿಸಿದಂತೆ ಸುಧಾರಣಾ ಕ್ರಮಗಳನ್ನು ಕೈಗೊಂಡರೆ ಅದರಿಂದ ಭಾರತದ ಅರ್ಥವ್ಯವಸ್ಥೆಗೆ ಚೇತರಿಕೆ ದೊರೆಯಲಿದೆ ಎಂದೂ ವಿಶ್ವಬ್ಯಾಂಕ್ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>