<p><strong>ರಾಯಚೂರು:</strong> ಈ ವರ್ಷ ಗಣೇಶ ಚತುರ್ಥಿಯ ಗಣೇಶ ಪ್ರತಿಷ್ಠಾಪನೆಯ 5ನೇ ದಿನವಾದ ಸೋಮವಾರ ರಾತ್ರಿ ನಗರದ ವಿವಿಧ ಬಡಾವಣೆಗಳಲ್ಲಿ ಸಾರ್ವಜನಿಕ ಗಜಾನನೋತ್ಸವ ಸಮಿತಿಗಳು, ಯುವಕ ಸಂಘಟನೆಗಳು ಪ್ರತಿಷ್ಠಾಪಿಸಿದ 97 ಗಣೇಶಮೂರ್ತಿಗಳನ್ನು ಇಲ್ಲಿನ ಐತಿಹಾಸಿಕ ಖಾಸಬಾವಿಯಲ್ಲಿ ವಿಸರ್ಜನೆ ಮಾಡಲಾಯಿತು.<br /> <br /> ಎಲ್ವಿಡಿ ಕಾಲೇಜಿನ ಹತ್ತಿರ ಬಜರಂಗದಳ ಸಂಘಟನೆಯು ಪ್ರತಿಷ್ಠಾಪಿಸಿದ್ದ ಗಣೇಶಮೂರ್ತಿಯ ವಿಸರ್ಜನೆ ಮಂಗಳವಾರ ಮುಂಜಾನೆ ನಡೆಯಿತು.<br /> <br /> ಗಣೇಶಮೂರ್ತಿ ವಿಸರ್ಜನೆ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು. ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳಲ್ಲಿ 26, ನೇತಾಜಿ ನಗರ ಠಾಣೆ ವ್ಯಾಪ್ತಿಯಲ್ಲಿನ 30, ಸದರ ಬಜಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 32, ಮಾರ್ಕೆಟ್ ಯಾರ್ಡ್ ಠಾಣೆ ವ್ಯಾಪ್ತಿಯಲ್ಲಿನ 9 ಸೇರಿದಂತೆ ಒಟ್ಟು 97 ಸಾರ್ವಜನಿಕ ಗಣೇಶಮೂರ್ತಿಗಳ ವಿಸರ್ಜನೆ ನಡೆಯಿತು.<br /> <br /> ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆಯುದ್ಧಕ್ಕೂ ಯುವಕರು, ಸಂಘಟನೆಗಳ ಪ್ರತಿನಿಧಿಗಳು ವಿವಿಧ ವಾದ್ಯವೃಂದ, ಜಾಂಜ್, ಕಿವಿಗಡಚಿಕ್ಕುವ ಸೌಂಡ್ಸಿಸ್ಟಮ್ನೊಂದಿಗೆ ಕುಣಿದರು. ಗುಲಾಲು ಎರಚಿ ಸಂಭ್ರಮಿಸಿದರು. <br /> <br /> ಗಣೇಶಮೂರ್ತಿ ವಿಸರ್ಜನೆಗೆ ನಗರದ ಐತಿಹಾಸಿಕ ಖಾಸಬಾವಿಯಲ್ಲಿ ನಗರಸಭೆಯು ವಿಶೇಷ ವ್ಯವಸ್ಥೆ ಮಾಡಿತ್ತು. ಬೃಹತ್ ಕ್ರೇನ್, ಸಿಬ್ಬಂದಿಯನ್ನು ನಿಯೋಜಿಸಿತ್ತು. ಖಾಸಬಾವಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಈ ವರ್ಷ ಗಣೇಶ ಚತುರ್ಥಿಯ ಗಣೇಶ ಪ್ರತಿಷ್ಠಾಪನೆಯ 5ನೇ ದಿನವಾದ ಸೋಮವಾರ ರಾತ್ರಿ ನಗರದ ವಿವಿಧ ಬಡಾವಣೆಗಳಲ್ಲಿ ಸಾರ್ವಜನಿಕ ಗಜಾನನೋತ್ಸವ ಸಮಿತಿಗಳು, ಯುವಕ ಸಂಘಟನೆಗಳು ಪ್ರತಿಷ್ಠಾಪಿಸಿದ 97 ಗಣೇಶಮೂರ್ತಿಗಳನ್ನು ಇಲ್ಲಿನ ಐತಿಹಾಸಿಕ ಖಾಸಬಾವಿಯಲ್ಲಿ ವಿಸರ್ಜನೆ ಮಾಡಲಾಯಿತು.<br /> <br /> ಎಲ್ವಿಡಿ ಕಾಲೇಜಿನ ಹತ್ತಿರ ಬಜರಂಗದಳ ಸಂಘಟನೆಯು ಪ್ರತಿಷ್ಠಾಪಿಸಿದ್ದ ಗಣೇಶಮೂರ್ತಿಯ ವಿಸರ್ಜನೆ ಮಂಗಳವಾರ ಮುಂಜಾನೆ ನಡೆಯಿತು.<br /> <br /> ಗಣೇಶಮೂರ್ತಿ ವಿಸರ್ಜನೆ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು. ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳಲ್ಲಿ 26, ನೇತಾಜಿ ನಗರ ಠಾಣೆ ವ್ಯಾಪ್ತಿಯಲ್ಲಿನ 30, ಸದರ ಬಜಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 32, ಮಾರ್ಕೆಟ್ ಯಾರ್ಡ್ ಠಾಣೆ ವ್ಯಾಪ್ತಿಯಲ್ಲಿನ 9 ಸೇರಿದಂತೆ ಒಟ್ಟು 97 ಸಾರ್ವಜನಿಕ ಗಣೇಶಮೂರ್ತಿಗಳ ವಿಸರ್ಜನೆ ನಡೆಯಿತು.<br /> <br /> ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆಯುದ್ಧಕ್ಕೂ ಯುವಕರು, ಸಂಘಟನೆಗಳ ಪ್ರತಿನಿಧಿಗಳು ವಿವಿಧ ವಾದ್ಯವೃಂದ, ಜಾಂಜ್, ಕಿವಿಗಡಚಿಕ್ಕುವ ಸೌಂಡ್ಸಿಸ್ಟಮ್ನೊಂದಿಗೆ ಕುಣಿದರು. ಗುಲಾಲು ಎರಚಿ ಸಂಭ್ರಮಿಸಿದರು. <br /> <br /> ಗಣೇಶಮೂರ್ತಿ ವಿಸರ್ಜನೆಗೆ ನಗರದ ಐತಿಹಾಸಿಕ ಖಾಸಬಾವಿಯಲ್ಲಿ ನಗರಸಭೆಯು ವಿಶೇಷ ವ್ಯವಸ್ಥೆ ಮಾಡಿತ್ತು. ಬೃಹತ್ ಕ್ರೇನ್, ಸಿಬ್ಬಂದಿಯನ್ನು ನಿಯೋಜಿಸಿತ್ತು. ಖಾಸಬಾವಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>