<p><strong>ಭಟ್ಕಳ: </strong>ತಾಲ್ಲೂಕಿನ ವಿವಿಧೆಡೆ ಐದು ದಿನ ಪ್ರತಿಷ್ಠಾಪಿಸಿ ಪೂಜಿಸಿದ ಗಣೇಶನ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಸೋಮವಾರ ಸಂಜೆಯಿಂದ ರಾತ್ರಿವರೆಗೆ ನಡೆಯಿತು.<br /> <br /> ಇಲ್ಲಿನ ರಿಕ್ಷಾ ಚಾಲಕ ಮಾಲಕ ಸಂಘ, ಕೆ.ಎಸ್. ಆರ್.ಟಿ.ಸಿ ನೌಕರರ ಸಂಘ, ಮಣಕುಳಿ ಯುವಕ ಸಂಘ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವೆಡೆ ಪ್ರತಿಷ್ಠಾಪಿಸಿದ್ದ ಗಣೇಶನ ಮೂರ್ತಿಗಳನ್ನು ಬಾಜಾ ಭಜಂತ್ರಿಗಳೊಂದಿಗೆ ಮೆರವಣಿಗೆ ಮಾಡಿ, ತಾಲ್ಲೂಕಿನ ಚೌಥನಿಯ ಹೊಳೆಯಲ್ಲಿ ವಿಸರ್ಜಿಸಲಾಯಿತು.<br /> ಪಟಾಕಿಗಳನ್ನು ಸಿಡಿಸಿ, ಬಣ್ಣ ಎರಚಿಕೊಳ್ಳುತ್ತ ಸೋಮವಾರ ರಾತ್ರಿಯಿಡೀ ಅದ್ದೂರಿ ಮೆರವಣಿಗೆ ಮಾಡಿ ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡಲಾಯಿತು. <br /> <br /> ಪಟ್ಟಣದಲ್ಲಿ ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿಗಳ ಜತೆಯಲ್ಲೇ, ಗ್ರಾಮೀಣ ಭಾಗಗಳಾದ ಮುಂಡಳ್ಳಿ, ಶಿರಾಲಿ, ನೀರಕಂಠ, ಮುರ್ಡೇಶ್ವರದ ನ್ಯಾಶನಲ್ ಕಾಲೊನಿ, ಬೈಲೂರು ಮಡಿಕೇರಿ, ಮಠದಹಿತ್ಲು, ಯಕ್ಷೆಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿಗಳನ್ನು ಸಮೀಪದ, ಕೆರೆ, ಹೊಳೆ, ಸಮುದ್ರದಲ್ಲಿ ವಿಸರ್ಜಿಸಲಾಯಿತು.<br /> <br /> ಡಿಎಸ್ಪಿ ಎಂ.ನಾರಾಯಣ ಮಾರ್ಗದರ್ಶನದಲ್ಲಿ ಸಿ.ಪಿ.ಐ ಶಿವಪ್ರಕಾಶ ನಾಯ್ಕ, ಎಸ್ಐಗಳಾದ ಪ್ರಕಾಶ ದೇವಾಡಿಗ, ಸುರೇಶ ನಾಯಕ, ಉಮೇಶ ಕಾಂಬಳೆ ಮತ್ತು ಸಿಬ್ಬಂದಿ ಬಂದೋಬಸ್ತ್ ಏರ್ಪಡಿಸಿದ್ದರು.<br /> <br /> ಬುಧವಾರ ಮುರ್ಡೇಶ್ವರದ ಓಲಗ ಮಂಟಪದಲ್ಲಿ ಪ್ರತಿಷ್ಠಾಪಿಸಿರುವ ಸಾರ್ವಜನಿಕ ಗಣೇಶನ ಮೂರ್ತಿ ವಿಸರ್ಜನೆ ನಡೆಯುವ ಮೂಲಕ ತಾಲ್ಲೂಕಿನ ಎಲ್ಲಾ ಗಣೇಶನ ಮೂರ್ತಿಗಳ ವಿಸರ್ಜನಾ ಕಾರ್ಯ ಸಂಪನ್ನಗೊಳ್ಳಲಿದೆ.<br /> <br /> ಗವ್ಯ ಉತ್ಪನ್ನಗಳ ಪ್ರದರ್ಶನ: ತಾಲ್ಲೂಕಿನ ಮುರ್ಡೇಶ್ವರದ ಓಲಗ ಮಂಟಪದಲ್ಲಿ ನಡೆಯುತ್ತಿರುವ ಗಣೇಶೋತ್ಸವ ಸಮಾರಂಭದಲ್ಲಿ ರಾಮಚಂದ್ರಾಪುರ ಮಠದ ಗವ್ಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ ಎಲ್ಲರ ಗಮನ ಸೆಳೆಯುತ್ತಿದೆ.<br /> <br /> ಮುರ್ಡೇಶ್ವರದ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು 35ನೇ ವರ್ಷದ ಉತ್ಸವವನ್ನು ಅದ್ದೂರಿಯಿಂದ 7 ದಿನ ನಡೆಸುತ್ತಿದ್ದಾರೆ.ಈ ಉತ್ಸವದಲ್ಲಿ ಸುರಿಯುವ ಮಳೆಯ ನಡುವೆಯೂ ನಡೆಯುತ್ತಿರುವ ವಿವಿಧ ಸಾಂಸ್ಕೃತಿಕ,ಮನರಂಜನಾ ಕಾರ್ಯಕ್ರಮಗಳು ಎಲ್ಲರನ್ನೂ ಆಕರ್ಷಿಸುತ್ತಿದೆ.<br /> <br /> ಇದರ ಜತೆಗೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಹೊನ್ನಾವರ ಹವ್ಯಕ ಮಂಡಳದವರು ಮಹನಂದಿ ವರ್ಷದ ಅಂಗವಾಗಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದವರ ಗವ್ಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯು ಎಲ್ಲರನ್ನೂ ಆಕರ್ಷಿಸುತ್ತಿದೆ.<br /> <br /> ಗವ್ಯದ ಉತ್ಪನ್ನಗಳ ಉಪಯುಕ್ತತೆಯ ಬಗ್ಗೆ ವಿವರ ನೀಡುವ ಸಮಿತಿಯ ಅಧ್ಯಕ್ಷ ಶಂಕರ ಎನ್ ಭಟ್ರಹಿತ್ಲು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿನಂತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ: </strong>ತಾಲ್ಲೂಕಿನ ವಿವಿಧೆಡೆ ಐದು ದಿನ ಪ್ರತಿಷ್ಠಾಪಿಸಿ ಪೂಜಿಸಿದ ಗಣೇಶನ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಸೋಮವಾರ ಸಂಜೆಯಿಂದ ರಾತ್ರಿವರೆಗೆ ನಡೆಯಿತು.<br /> <br /> ಇಲ್ಲಿನ ರಿಕ್ಷಾ ಚಾಲಕ ಮಾಲಕ ಸಂಘ, ಕೆ.ಎಸ್. ಆರ್.ಟಿ.ಸಿ ನೌಕರರ ಸಂಘ, ಮಣಕುಳಿ ಯುವಕ ಸಂಘ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವೆಡೆ ಪ್ರತಿಷ್ಠಾಪಿಸಿದ್ದ ಗಣೇಶನ ಮೂರ್ತಿಗಳನ್ನು ಬಾಜಾ ಭಜಂತ್ರಿಗಳೊಂದಿಗೆ ಮೆರವಣಿಗೆ ಮಾಡಿ, ತಾಲ್ಲೂಕಿನ ಚೌಥನಿಯ ಹೊಳೆಯಲ್ಲಿ ವಿಸರ್ಜಿಸಲಾಯಿತು.<br /> ಪಟಾಕಿಗಳನ್ನು ಸಿಡಿಸಿ, ಬಣ್ಣ ಎರಚಿಕೊಳ್ಳುತ್ತ ಸೋಮವಾರ ರಾತ್ರಿಯಿಡೀ ಅದ್ದೂರಿ ಮೆರವಣಿಗೆ ಮಾಡಿ ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡಲಾಯಿತು. <br /> <br /> ಪಟ್ಟಣದಲ್ಲಿ ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿಗಳ ಜತೆಯಲ್ಲೇ, ಗ್ರಾಮೀಣ ಭಾಗಗಳಾದ ಮುಂಡಳ್ಳಿ, ಶಿರಾಲಿ, ನೀರಕಂಠ, ಮುರ್ಡೇಶ್ವರದ ನ್ಯಾಶನಲ್ ಕಾಲೊನಿ, ಬೈಲೂರು ಮಡಿಕೇರಿ, ಮಠದಹಿತ್ಲು, ಯಕ್ಷೆಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿಗಳನ್ನು ಸಮೀಪದ, ಕೆರೆ, ಹೊಳೆ, ಸಮುದ್ರದಲ್ಲಿ ವಿಸರ್ಜಿಸಲಾಯಿತು.<br /> <br /> ಡಿಎಸ್ಪಿ ಎಂ.ನಾರಾಯಣ ಮಾರ್ಗದರ್ಶನದಲ್ಲಿ ಸಿ.ಪಿ.ಐ ಶಿವಪ್ರಕಾಶ ನಾಯ್ಕ, ಎಸ್ಐಗಳಾದ ಪ್ರಕಾಶ ದೇವಾಡಿಗ, ಸುರೇಶ ನಾಯಕ, ಉಮೇಶ ಕಾಂಬಳೆ ಮತ್ತು ಸಿಬ್ಬಂದಿ ಬಂದೋಬಸ್ತ್ ಏರ್ಪಡಿಸಿದ್ದರು.<br /> <br /> ಬುಧವಾರ ಮುರ್ಡೇಶ್ವರದ ಓಲಗ ಮಂಟಪದಲ್ಲಿ ಪ್ರತಿಷ್ಠಾಪಿಸಿರುವ ಸಾರ್ವಜನಿಕ ಗಣೇಶನ ಮೂರ್ತಿ ವಿಸರ್ಜನೆ ನಡೆಯುವ ಮೂಲಕ ತಾಲ್ಲೂಕಿನ ಎಲ್ಲಾ ಗಣೇಶನ ಮೂರ್ತಿಗಳ ವಿಸರ್ಜನಾ ಕಾರ್ಯ ಸಂಪನ್ನಗೊಳ್ಳಲಿದೆ.<br /> <br /> ಗವ್ಯ ಉತ್ಪನ್ನಗಳ ಪ್ರದರ್ಶನ: ತಾಲ್ಲೂಕಿನ ಮುರ್ಡೇಶ್ವರದ ಓಲಗ ಮಂಟಪದಲ್ಲಿ ನಡೆಯುತ್ತಿರುವ ಗಣೇಶೋತ್ಸವ ಸಮಾರಂಭದಲ್ಲಿ ರಾಮಚಂದ್ರಾಪುರ ಮಠದ ಗವ್ಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ ಎಲ್ಲರ ಗಮನ ಸೆಳೆಯುತ್ತಿದೆ.<br /> <br /> ಮುರ್ಡೇಶ್ವರದ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು 35ನೇ ವರ್ಷದ ಉತ್ಸವವನ್ನು ಅದ್ದೂರಿಯಿಂದ 7 ದಿನ ನಡೆಸುತ್ತಿದ್ದಾರೆ.ಈ ಉತ್ಸವದಲ್ಲಿ ಸುರಿಯುವ ಮಳೆಯ ನಡುವೆಯೂ ನಡೆಯುತ್ತಿರುವ ವಿವಿಧ ಸಾಂಸ್ಕೃತಿಕ,ಮನರಂಜನಾ ಕಾರ್ಯಕ್ರಮಗಳು ಎಲ್ಲರನ್ನೂ ಆಕರ್ಷಿಸುತ್ತಿದೆ.<br /> <br /> ಇದರ ಜತೆಗೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಹೊನ್ನಾವರ ಹವ್ಯಕ ಮಂಡಳದವರು ಮಹನಂದಿ ವರ್ಷದ ಅಂಗವಾಗಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದವರ ಗವ್ಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯು ಎಲ್ಲರನ್ನೂ ಆಕರ್ಷಿಸುತ್ತಿದೆ.<br /> <br /> ಗವ್ಯದ ಉತ್ಪನ್ನಗಳ ಉಪಯುಕ್ತತೆಯ ಬಗ್ಗೆ ವಿವರ ನೀಡುವ ಸಮಿತಿಯ ಅಧ್ಯಕ್ಷ ಶಂಕರ ಎನ್ ಭಟ್ರಹಿತ್ಲು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿನಂತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>