<p><strong>ಮಂಡ್ಯ: </strong>ಭಾರತದ ಮಾಜಿ ಉಪ ಪ್ರಧಾನಿ, ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 105ನೇ ಜನ್ಮ ದಿನವಾದ ಗುರುವಾರ ಜಿಲ್ಲಾಡಳಿತ ಮತ್ತು ವಿವಿಧ ಸಂಘಟನೆಗಳು ಬಾಬೂಜಿಯವರ ಸೇವೆಯನ್ನು ಸ್ಮರಿಸಿ, ವ್ಯಕ್ತಿತ್ವದ ಗುಣಗಾನ ಮಾಡಿದವು.<br /> <br /> ಇದಕ್ಕೂ ಮೊದಲು ಕಾವೇರಿ ವನದಲ್ಲಿ ಜಗಜೀವನರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. `ಭಾರತ ಕಂಡ ಧೀಮಂತ ನಾಯಕರ ಸಾಲಿನಲ್ಲಿ ಅಗ್ರಗಣ್ಯರಾಗಿ ನಿಲ್ಲುವ ಡಾ.ಬಾಬು ಜಗಜೀವನರಾಂ ಅವರು ದಲಿತರು ಹಾಗೂ ರೈತರ ಏಳಿಗೆಗಾಗಿ ಅಪಾರ ಕೊಡುಗೆ ನೀಡಿದ್ದಾರೆ. ಸಮಕಾಲೀನ ರಾಜಕಾರಣದಲ್ಲಿ ಮುಂಚೂಣಿಯಲ್ಲಿ ಇದ್ದರೂ ಅವರು ಪ್ರಧಾನ ಮಂತ್ರಿಯಾಗಲಿಲ್ಲ. <br /> <br /> ದಲಿತ ವರ್ಗಕ್ಕೆ ಸೇರಿದ್ದರಿಂದಲೇ ಈ ಅವಕಾಶ ತಪ್ಪಿಹೋಗಿದೆ ಎಂದು ಅನಿಸುತ್ತದೆ~ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಶಿವಣ್ಣ ಅವರು ವಿಷಾದ ವ್ಯಕ್ತಪಡಿಸಿದರು.ಮೈಷುಗರ್ ಅಧ್ಯಕ್ಷ ನಾಗರಾಜಪ್ಪ ಕಿರುಹೊತ್ತಿಗೆ ಬಿಡುಗಡೆ ಮಾಡಿದರು. ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಜಯರಾಂ ಮಾತನಾಡಿದರು.<br /> <br /> ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಮುಡಾ ಅಧ್ಯಕ್ಷ ಬಸವೇಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಸಿ.ಜಯಣ್ಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ರಾಜಣ್ಣ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವೆಂಕಟರಮಣ ರೆಡ್ಡಿ, ನಗರಸಭೆ ಆಯುಕ್ತ ಪ್ರಕಾಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಭಾರತದ ಮಾಜಿ ಉಪ ಪ್ರಧಾನಿ, ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 105ನೇ ಜನ್ಮ ದಿನವಾದ ಗುರುವಾರ ಜಿಲ್ಲಾಡಳಿತ ಮತ್ತು ವಿವಿಧ ಸಂಘಟನೆಗಳು ಬಾಬೂಜಿಯವರ ಸೇವೆಯನ್ನು ಸ್ಮರಿಸಿ, ವ್ಯಕ್ತಿತ್ವದ ಗುಣಗಾನ ಮಾಡಿದವು.<br /> <br /> ಇದಕ್ಕೂ ಮೊದಲು ಕಾವೇರಿ ವನದಲ್ಲಿ ಜಗಜೀವನರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. `ಭಾರತ ಕಂಡ ಧೀಮಂತ ನಾಯಕರ ಸಾಲಿನಲ್ಲಿ ಅಗ್ರಗಣ್ಯರಾಗಿ ನಿಲ್ಲುವ ಡಾ.ಬಾಬು ಜಗಜೀವನರಾಂ ಅವರು ದಲಿತರು ಹಾಗೂ ರೈತರ ಏಳಿಗೆಗಾಗಿ ಅಪಾರ ಕೊಡುಗೆ ನೀಡಿದ್ದಾರೆ. ಸಮಕಾಲೀನ ರಾಜಕಾರಣದಲ್ಲಿ ಮುಂಚೂಣಿಯಲ್ಲಿ ಇದ್ದರೂ ಅವರು ಪ್ರಧಾನ ಮಂತ್ರಿಯಾಗಲಿಲ್ಲ. <br /> <br /> ದಲಿತ ವರ್ಗಕ್ಕೆ ಸೇರಿದ್ದರಿಂದಲೇ ಈ ಅವಕಾಶ ತಪ್ಪಿಹೋಗಿದೆ ಎಂದು ಅನಿಸುತ್ತದೆ~ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಶಿವಣ್ಣ ಅವರು ವಿಷಾದ ವ್ಯಕ್ತಪಡಿಸಿದರು.ಮೈಷುಗರ್ ಅಧ್ಯಕ್ಷ ನಾಗರಾಜಪ್ಪ ಕಿರುಹೊತ್ತಿಗೆ ಬಿಡುಗಡೆ ಮಾಡಿದರು. ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಜಯರಾಂ ಮಾತನಾಡಿದರು.<br /> <br /> ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಮುಡಾ ಅಧ್ಯಕ್ಷ ಬಸವೇಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಸಿ.ಜಯಣ್ಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ರಾಜಣ್ಣ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವೆಂಕಟರಮಣ ರೆಡ್ಡಿ, ನಗರಸಭೆ ಆಯುಕ್ತ ಪ್ರಕಾಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>