<p><strong>ಆನೇಕಲ್:</strong> ತೋಟಗಾರಿಕೆಯಲ್ಲಿ ಆಧುನಿಕ ಸಂಶೋಧನೆಗಳನ್ನು ಬಳಸಿಕೊಂಡು ಉತ್ತಮ ಇಳುವರಿ ಪಡೆಯುವತ್ತ ರೈತರು ಮುಂದಾಗಬೇಕು. ತಂತ್ರಜ್ಞಾನ ಹಾಗೂ ಸಂಶೋಧನೆಯ ಫಲ ಎಲ್ಲರಿಗೂ ದೊರೆ ಯುವಂತಾಗಬೇಕು ಎಂದು ಭಾರತೀಯ ತೋಟಗಾರಿಕೆ ಸಂಸ್ಥೆಯ ಸಂಶೋಧನಾ ಸಲಹಾ ಸಮಿತಿ ಅಧ್ಯಕ್ಷ ಡಾ.ಗೌತಮ್ ಕಲ್ಹೂ ತಿಳಿಸಿದರು.<br /> <br /> ಅವರು ತಾಲ್ಲೂಕಿನ ಹೆನ್ನಾಗರದ ಪ್ರಗತಿಪರ ರೈತ ಎಂ.ಬಾಬುರೆಡ್ಡಿ ಅವರ ತೋಟದಲ್ಲಿ ಭಾರತೀಯ ತೋಟಗಾರಿಕೆ ಸಂಸ್ಥೆಯ ವಿಜ್ಞಾನಿಗಳು ಸಂಶೋಧಿಸಿ ಅಭಿವೃದ್ದಿ ಪಡಿಸಿರುವ ಅರ್ಕಾರಕ್ಷಕ್ ಟೊಮೊಟೊ ಬೆಳೆಯನ್ನು ವೀಕ್ಷಿಸಿ ಮಾತನಾಡಿದರು.<br /> <br /> ಅರ್ಕಾರಕ್ಷಕ್ ಟೊಮೊಟೊ ತಳಿಯು ಬೇರೆಲ್ಲಾ ತಳಿಗಳಿಗಿಂತ ವಿಶಿಷ್ಟವಾಗಿದೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿ, ಅಧಿಕ ಇಳುವರಿ ಹಾಗೂ ಅಧಿಕ ಬಾಳಿಕೆ ಹಾಗೂ ಸಾಗಾಣಿಕೆಗೆ ಸಹಕಾರಿಯಾಗಿದೆ. ಹಾಗಾಗಿ ರೈತರು ಹೆಚ್ಚಿನ ಆದಾಯ ಪಡೆಯಬಹುದು. ಈ ತಳಿಯನ್ನು ಭಾರತೀಯ ತೋಟಗಾರಿಕಾ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ.ಎ.ಟಿ.ಸದಾಶಿವ ಮತ್ತು ತಂಡದವರು ಅಭಿವೃದ್ದಿ ಪಡಿಸಿದ್ದು ಈ ತಳಿಯಿಂದ ಸಹಸ್ರಾರು ರೈತರಿಗೆ ಉಪಯುಕ್ತವಾಗಿದೆ. ಹಣ್ಣು ಗಟ್ಟಿಯಾಗಿದ್ದು ರಫ್ತಿಗೆ ಸಹಕಾರಿಯಾಗಿದೆ. ಉತ್ತಮ ಬಣ್ಣ ಮತ್ತು ರುಚಿಯಿದೆ ಎಂದರು.<br /> <br /> ಪ್ರಗತಿಪರ ರೈತ ಎಂ.ಬಾಬುರೆಡ್ಡಿ ಮಾತನಾಡಿ ರೈತರಿಗೆ ಅಧಿಕ ಲಾಭದ ಜತೆ ರೋಗ ನಿರೋಧಕ ತಳಿಯನ್ನು ಅಭಿವೃದ್ಧಿಪಡಿಸಿದ ವಿಜ್ಞಾನಿಗಳನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ತೋಟಗಾರಿಕೆಯಲ್ಲಿ ಆಧುನಿಕ ಸಂಶೋಧನೆಗಳನ್ನು ಬಳಸಿಕೊಂಡು ಉತ್ತಮ ಇಳುವರಿ ಪಡೆಯುವತ್ತ ರೈತರು ಮುಂದಾಗಬೇಕು. ತಂತ್ರಜ್ಞಾನ ಹಾಗೂ ಸಂಶೋಧನೆಯ ಫಲ ಎಲ್ಲರಿಗೂ ದೊರೆ ಯುವಂತಾಗಬೇಕು ಎಂದು ಭಾರತೀಯ ತೋಟಗಾರಿಕೆ ಸಂಸ್ಥೆಯ ಸಂಶೋಧನಾ ಸಲಹಾ ಸಮಿತಿ ಅಧ್ಯಕ್ಷ ಡಾ.ಗೌತಮ್ ಕಲ್ಹೂ ತಿಳಿಸಿದರು.<br /> <br /> ಅವರು ತಾಲ್ಲೂಕಿನ ಹೆನ್ನಾಗರದ ಪ್ರಗತಿಪರ ರೈತ ಎಂ.ಬಾಬುರೆಡ್ಡಿ ಅವರ ತೋಟದಲ್ಲಿ ಭಾರತೀಯ ತೋಟಗಾರಿಕೆ ಸಂಸ್ಥೆಯ ವಿಜ್ಞಾನಿಗಳು ಸಂಶೋಧಿಸಿ ಅಭಿವೃದ್ದಿ ಪಡಿಸಿರುವ ಅರ್ಕಾರಕ್ಷಕ್ ಟೊಮೊಟೊ ಬೆಳೆಯನ್ನು ವೀಕ್ಷಿಸಿ ಮಾತನಾಡಿದರು.<br /> <br /> ಅರ್ಕಾರಕ್ಷಕ್ ಟೊಮೊಟೊ ತಳಿಯು ಬೇರೆಲ್ಲಾ ತಳಿಗಳಿಗಿಂತ ವಿಶಿಷ್ಟವಾಗಿದೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿ, ಅಧಿಕ ಇಳುವರಿ ಹಾಗೂ ಅಧಿಕ ಬಾಳಿಕೆ ಹಾಗೂ ಸಾಗಾಣಿಕೆಗೆ ಸಹಕಾರಿಯಾಗಿದೆ. ಹಾಗಾಗಿ ರೈತರು ಹೆಚ್ಚಿನ ಆದಾಯ ಪಡೆಯಬಹುದು. ಈ ತಳಿಯನ್ನು ಭಾರತೀಯ ತೋಟಗಾರಿಕಾ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ.ಎ.ಟಿ.ಸದಾಶಿವ ಮತ್ತು ತಂಡದವರು ಅಭಿವೃದ್ದಿ ಪಡಿಸಿದ್ದು ಈ ತಳಿಯಿಂದ ಸಹಸ್ರಾರು ರೈತರಿಗೆ ಉಪಯುಕ್ತವಾಗಿದೆ. ಹಣ್ಣು ಗಟ್ಟಿಯಾಗಿದ್ದು ರಫ್ತಿಗೆ ಸಹಕಾರಿಯಾಗಿದೆ. ಉತ್ತಮ ಬಣ್ಣ ಮತ್ತು ರುಚಿಯಿದೆ ಎಂದರು.<br /> <br /> ಪ್ರಗತಿಪರ ರೈತ ಎಂ.ಬಾಬುರೆಡ್ಡಿ ಮಾತನಾಡಿ ರೈತರಿಗೆ ಅಧಿಕ ಲಾಭದ ಜತೆ ರೋಗ ನಿರೋಧಕ ತಳಿಯನ್ನು ಅಭಿವೃದ್ಧಿಪಡಿಸಿದ ವಿಜ್ಞಾನಿಗಳನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>