<p><strong>ಬೆಂಗಳೂರು: </strong>ಶಿವಶಕ್ತಿ ಸೇವಾ ಮಂಡಲ್ ವತಿಯಿಂದ ನಗರದಲ್ಲಿ ಭಾನುವಾರ ಅಮರನಾಥ ಕ್ಷೇತ್ರದ ಕುರಿತು ಛಾಯಾಚಿತ್ರ ಪ್ರದರ್ಶನ ಹಾಗೂ ಅಮರನಾಥ ಯಾತ್ರಿಗಳಿಗೆ ಉಚಿತ ಮಾಹಿತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.<br /> <br /> ಕಾರ್ಯಕ್ರಮದಲ್ಲಿ ಅಮರನಾಥ ಕ್ಷೇತ್ರದ ಕುರಿತ 60 ಛಾಯಾಚಿತ್ರಗಳನ್ನು ಪ್ರದರ್ಶಿಸಲಾಯಿತು. ಪ್ರದರ್ಶನ ಉದ್ಘಾಟಿಸಿದ ಸಚಿವ ದಿನೇಶ್ ಗುಂಡೂರಾವ್, ‘ಛಾಯಾಚಿತ್ರಗಳು ಅತ್ಯಂತ ಆಕರ್ಷಣೀಯವಾಗಿವೆ. ಛಾಯಾಚಿತ್ರಗಳನ್ನು ವೀಕ್ಷಿಸಿದರೆ ಅಮರನಾಥ ಕ್ಷೇತ್ರದ ಯಾತ್ರೆ ಕೈಗೊಂಡ ಅನುಭವವಾಗುತ್ತದೆ’ ಎಂದರು.<br /> <br /> ಸಚಿವ ಆರ್.ರೋಷನ್ ಬೇಗ್ ಮಾತನಾಡಿ, ‘ಮುಸ್ಲಿಮರಿಗೆ ಹಜ್ ಯಾತ್ರೆಯಂತೆ ಹಿಂದೂಗಳಿಗೆ ಅಮರನಾಥ ಯಾತ್ರೆ ಪವಿತ್ರವಾದುದ್ದು. ಅಮರನಾಥ ಯಾತ್ರೆ ಕೈಗೊಳ್ಳುವವರಿಗೆ ಮಾಹಿತಿ ನೀಡಲು ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮ ಕೆಲಸ’ ಎಂದು ಹೇಳಿದರು.<br /> <br /> ಮಂಡಲ್ನ ನಗರ ಶಾಖೆ ಅಧ್ಯಕ್ಷ ಎಣ್ಣೆಗೆರೆ ಆರ್.ವೆಂಕಟರಾಮಯ್ಯ ಮಾತನಾಡಿ, ‘ಮೊದಲ ಬಾರಿಗೆ ಅಮರನಾಥ ಯಾತ್ರೆ ಕೈಗೊಳ್ಳುವವರಿಗೆ ಯಾವ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಗೊತ್ತಿರುವುದಿಲ್ಲ. ಹೀಗಾಗಿ ಯಾತ್ರಿಗಳಿಗೆ ಮಾಹಿತಿ ನೀಡಲು ಪ್ರತಿ ವರ್ಷ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಶಿವಶಕ್ತಿ ಸೇವಾ ಮಂಡಲ್ ವತಿಯಿಂದ ನಗರದಲ್ಲಿ ಭಾನುವಾರ ಅಮರನಾಥ ಕ್ಷೇತ್ರದ ಕುರಿತು ಛಾಯಾಚಿತ್ರ ಪ್ರದರ್ಶನ ಹಾಗೂ ಅಮರನಾಥ ಯಾತ್ರಿಗಳಿಗೆ ಉಚಿತ ಮಾಹಿತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.<br /> <br /> ಕಾರ್ಯಕ್ರಮದಲ್ಲಿ ಅಮರನಾಥ ಕ್ಷೇತ್ರದ ಕುರಿತ 60 ಛಾಯಾಚಿತ್ರಗಳನ್ನು ಪ್ರದರ್ಶಿಸಲಾಯಿತು. ಪ್ರದರ್ಶನ ಉದ್ಘಾಟಿಸಿದ ಸಚಿವ ದಿನೇಶ್ ಗುಂಡೂರಾವ್, ‘ಛಾಯಾಚಿತ್ರಗಳು ಅತ್ಯಂತ ಆಕರ್ಷಣೀಯವಾಗಿವೆ. ಛಾಯಾಚಿತ್ರಗಳನ್ನು ವೀಕ್ಷಿಸಿದರೆ ಅಮರನಾಥ ಕ್ಷೇತ್ರದ ಯಾತ್ರೆ ಕೈಗೊಂಡ ಅನುಭವವಾಗುತ್ತದೆ’ ಎಂದರು.<br /> <br /> ಸಚಿವ ಆರ್.ರೋಷನ್ ಬೇಗ್ ಮಾತನಾಡಿ, ‘ಮುಸ್ಲಿಮರಿಗೆ ಹಜ್ ಯಾತ್ರೆಯಂತೆ ಹಿಂದೂಗಳಿಗೆ ಅಮರನಾಥ ಯಾತ್ರೆ ಪವಿತ್ರವಾದುದ್ದು. ಅಮರನಾಥ ಯಾತ್ರೆ ಕೈಗೊಳ್ಳುವವರಿಗೆ ಮಾಹಿತಿ ನೀಡಲು ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮ ಕೆಲಸ’ ಎಂದು ಹೇಳಿದರು.<br /> <br /> ಮಂಡಲ್ನ ನಗರ ಶಾಖೆ ಅಧ್ಯಕ್ಷ ಎಣ್ಣೆಗೆರೆ ಆರ್.ವೆಂಕಟರಾಮಯ್ಯ ಮಾತನಾಡಿ, ‘ಮೊದಲ ಬಾರಿಗೆ ಅಮರನಾಥ ಯಾತ್ರೆ ಕೈಗೊಳ್ಳುವವರಿಗೆ ಯಾವ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಗೊತ್ತಿರುವುದಿಲ್ಲ. ಹೀಗಾಗಿ ಯಾತ್ರಿಗಳಿಗೆ ಮಾಹಿತಿ ನೀಡಲು ಪ್ರತಿ ವರ್ಷ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>