<p><strong>ಚಿತ್ರದುರ್ಗ: </strong>ಆಂಧ್ರ ಪ್ರದೇಶದ ಗಡಿ ಗ್ರಾಮಗಳಿಂದ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಪ್ರಕರಣವನ್ನು ಚಳ್ಳಕೆರೆ ಪೊಲೀಸರು ಭೇದಿಸಿದ್ದಾರೆ. ಇದನ್ನು ಮೈಸೂರಿನ ಕಾಲೇಜುಗಳ ಬಳಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಸಾಗಿಸಲಾಗುತ್ತಿತ್ತು.<br /> <br /> ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಬೊಮ್ಮನಹಾಳ್ ರಸ್ತೆಯ ರಾಣಿ ತೋಟದಲ್ಲಿ ವಾಸವಿರುವ ವೆಲ್ಡಿಂಗ್ ಕೆಲಸಗಾರ ಮೌಲಾಸಾಬ್ (27), ಆಟೋ ಚಾಲಕರಾದ ದಾದಾಪೀರ್ (19), ದಾದಾ ಖಲಂದರ್ (20), ವೆಲ್ಡಿಂಗ್ ಕೆಲಸಗಾರ ವಾಹೀದ್ (26) ಅವರನ್ನು ಬಂಧಿಸಲಾಗಿದೆ. <br /> <br /> ಆರೋಪಿಗಳಿಂದ ಮೂರು ಲಗೇಜ್ ಬ್ಯಾಗ್ಗಳಲ್ಲಿದ್ದ ರೂ.54 ಸಾವಿರ ಮೌಲ್ಯದ 27 ಕೆ.ಜಿ. ತೂಕದ ಒಣಗಿದ ಗಾಂಜಾ ಸೊಪ್ಪು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಭಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಜಿ. ಕ್ಯಾತನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಗುರುವಾರ ಬೆಳಗಿನ ಜಾವ ಬಳ್ಳಾರಿಯಿಂದ ಕೆಎಸ್ಆರ್ಟಿಸಿ ಬಸ್ನಲ್ಲಿ ಚಳ್ಳಕೆರೆಗೆ ಆಗಮಿಸಿದ್ದ ಆರೋಪಿಗಳನ್ನು ನೆಹರು ವೃತ್ತದಲ್ಲಿ ಮೈಸೂರು ಬಸ್ಗೆ ಕಾಯುತ್ತಿದ್ದ ಸಂದರ್ಭದಲ್ಲಿ ಬಂಧಿಸಲಾಗಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಆಂಧ್ರ ಪ್ರದೇಶದ ಗಡಿ ಗ್ರಾಮಗಳಿಂದ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಪ್ರಕರಣವನ್ನು ಚಳ್ಳಕೆರೆ ಪೊಲೀಸರು ಭೇದಿಸಿದ್ದಾರೆ. ಇದನ್ನು ಮೈಸೂರಿನ ಕಾಲೇಜುಗಳ ಬಳಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಸಾಗಿಸಲಾಗುತ್ತಿತ್ತು.<br /> <br /> ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಬೊಮ್ಮನಹಾಳ್ ರಸ್ತೆಯ ರಾಣಿ ತೋಟದಲ್ಲಿ ವಾಸವಿರುವ ವೆಲ್ಡಿಂಗ್ ಕೆಲಸಗಾರ ಮೌಲಾಸಾಬ್ (27), ಆಟೋ ಚಾಲಕರಾದ ದಾದಾಪೀರ್ (19), ದಾದಾ ಖಲಂದರ್ (20), ವೆಲ್ಡಿಂಗ್ ಕೆಲಸಗಾರ ವಾಹೀದ್ (26) ಅವರನ್ನು ಬಂಧಿಸಲಾಗಿದೆ. <br /> <br /> ಆರೋಪಿಗಳಿಂದ ಮೂರು ಲಗೇಜ್ ಬ್ಯಾಗ್ಗಳಲ್ಲಿದ್ದ ರೂ.54 ಸಾವಿರ ಮೌಲ್ಯದ 27 ಕೆ.ಜಿ. ತೂಕದ ಒಣಗಿದ ಗಾಂಜಾ ಸೊಪ್ಪು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಭಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಜಿ. ಕ್ಯಾತನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಗುರುವಾರ ಬೆಳಗಿನ ಜಾವ ಬಳ್ಳಾರಿಯಿಂದ ಕೆಎಸ್ಆರ್ಟಿಸಿ ಬಸ್ನಲ್ಲಿ ಚಳ್ಳಕೆರೆಗೆ ಆಗಮಿಸಿದ್ದ ಆರೋಪಿಗಳನ್ನು ನೆಹರು ವೃತ್ತದಲ್ಲಿ ಮೈಸೂರು ಬಸ್ಗೆ ಕಾಯುತ್ತಿದ್ದ ಸಂದರ್ಭದಲ್ಲಿ ಬಂಧಿಸಲಾಗಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>