<p>ಮಳವಳ್ಳಿ: ಸತ್ಯ, ಅಹಿಂಸಾ ತತ್ವದಿಂದ ಗುಲಾಮಗಿರಿ ತೊಲಗಿಸಿದ ಮಹಾನ್ ವ್ಯಕ್ತಿ ಮಹಾತ್ಮ ಗಾಂಧಿ. ಅಂತಹ ವರನ್ನು ವಿದೇಶಗಳಲ್ಲಿ ಇಂದಿಗೂ ಸ್ಮರಿಸುತ್ತಿದ್ದು, ದೇಶದಲ್ಲಿ ಮರೆಯುವ ಸ್ಥಿತಿಗೆ ಹೋಗಿದ್ದೇವೆ ಎಂದು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕನಿಧಿ ಅಧ್ಯಕ್ಷ ಡಾ.ಎಚ್.ಶ್ರೀನಿವಾಸಯ್ಯ ವಿಷಾದ ವ್ಯಕ್ತಪಡಿಸಿದರು.<br /> <br /> ಪಟ್ಟಣದ ಶಾಂತಿಭವನದಲ್ಲಿ ಶಾಂತಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು, ಯುಜಿಸಿ, ಬೆಂಗಳೂರಿನ ಗಾಂಧಿ ಸ್ಮಾರಕನಿಧಿ ಹಾಗೂ ಮೈಸೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ವಿಭಾಗದ ಅಧ್ಯಾಪಕರ ಅಕಾಡೆಮಿ ಸಹಕಾರದಲ್ಲಿ ಮಂಗಳ ವಾರ ~ಗಾಂಧಿವಾದದ ಪ್ರಸ್ತುತತೆ~ ಎಂಬ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.<br /> <br /> ಸರಳವಾಗಿ ಬದುಕಲು ಮಾರ್ಗ ದರ್ಶನ ನೀಡಿದ ವ್ಯಕ್ತಿ ಗಾಂಧಿ. ಅಮೇರಿಕಾದ ಅಧ್ಯಕ್ಷ ಒಬಾಮ ಸೇರಿದಂತೆ ಹಲವು ದೇಶದ ಅಧ್ಯಕ್ಷರು ಗಾಂಧಿ ಸ್ಮರಿಸುತ್ತಾರೆ ಎಂದರು. <br /> <br /> ಕರ್ನಾಟಕ ಗಾಂಧಿ ಸ್ಮಾರಕನಿಧಿ ಜಂಟಿ ಕಾರ್ಯದರ್ಶಿ ಪ್ರೊ.ಜಿ.ಬಿ.ಶಿವರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು. ಬೆಂಗಳೂರು ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಜೀರಿಗೆ ಲೋಕೇಶ್ ಮಾತನಾಡಿದರು.<br /> <br /> ಶಾಂತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎಚ್.ಕೆಂಪಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಚಾರ ಸಂಕಿರಣದ ಸಂಚಾಲಕ ಪ್ರೊ.ನಾಗರಾಜೇಗೌಡ, ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಳವಳ್ಳಿ: ಸತ್ಯ, ಅಹಿಂಸಾ ತತ್ವದಿಂದ ಗುಲಾಮಗಿರಿ ತೊಲಗಿಸಿದ ಮಹಾನ್ ವ್ಯಕ್ತಿ ಮಹಾತ್ಮ ಗಾಂಧಿ. ಅಂತಹ ವರನ್ನು ವಿದೇಶಗಳಲ್ಲಿ ಇಂದಿಗೂ ಸ್ಮರಿಸುತ್ತಿದ್ದು, ದೇಶದಲ್ಲಿ ಮರೆಯುವ ಸ್ಥಿತಿಗೆ ಹೋಗಿದ್ದೇವೆ ಎಂದು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕನಿಧಿ ಅಧ್ಯಕ್ಷ ಡಾ.ಎಚ್.ಶ್ರೀನಿವಾಸಯ್ಯ ವಿಷಾದ ವ್ಯಕ್ತಪಡಿಸಿದರು.<br /> <br /> ಪಟ್ಟಣದ ಶಾಂತಿಭವನದಲ್ಲಿ ಶಾಂತಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು, ಯುಜಿಸಿ, ಬೆಂಗಳೂರಿನ ಗಾಂಧಿ ಸ್ಮಾರಕನಿಧಿ ಹಾಗೂ ಮೈಸೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ವಿಭಾಗದ ಅಧ್ಯಾಪಕರ ಅಕಾಡೆಮಿ ಸಹಕಾರದಲ್ಲಿ ಮಂಗಳ ವಾರ ~ಗಾಂಧಿವಾದದ ಪ್ರಸ್ತುತತೆ~ ಎಂಬ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.<br /> <br /> ಸರಳವಾಗಿ ಬದುಕಲು ಮಾರ್ಗ ದರ್ಶನ ನೀಡಿದ ವ್ಯಕ್ತಿ ಗಾಂಧಿ. ಅಮೇರಿಕಾದ ಅಧ್ಯಕ್ಷ ಒಬಾಮ ಸೇರಿದಂತೆ ಹಲವು ದೇಶದ ಅಧ್ಯಕ್ಷರು ಗಾಂಧಿ ಸ್ಮರಿಸುತ್ತಾರೆ ಎಂದರು. <br /> <br /> ಕರ್ನಾಟಕ ಗಾಂಧಿ ಸ್ಮಾರಕನಿಧಿ ಜಂಟಿ ಕಾರ್ಯದರ್ಶಿ ಪ್ರೊ.ಜಿ.ಬಿ.ಶಿವರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು. ಬೆಂಗಳೂರು ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಜೀರಿಗೆ ಲೋಕೇಶ್ ಮಾತನಾಡಿದರು.<br /> <br /> ಶಾಂತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎಚ್.ಕೆಂಪಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಚಾರ ಸಂಕಿರಣದ ಸಂಚಾಲಕ ಪ್ರೊ.ನಾಗರಾಜೇಗೌಡ, ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>