<p><strong>ಹಿರಿಯೂರು: </strong> ಹಲವು ವರ್ಷಗಳಿಂದ ಈ ಭಾಗದ ಜನರ ಬೇಡಿಕೆಯಾಗಿದ್ದ ಜವನಗೊಂಡನಹಳ್ಳಿ-ಜೂಲಯ್ಯನ ಹಟ್ಟಿ-ಹುರುಳಿ ದಿಬ್ದಾರಹಟ್ಟಿ- ಓಬಳಾಪುರ-ಕಿಲ್ಲಾರದಹಳ್ಳಿ- ಮಾವಿನಮಡು-ಪಿಲ್ಲಾಲಿ ಗ್ರಾಮಗಳ ೧೦.೫೬ ಕಿ.ಮೀ. ವಿಸ್ತೀರ್ಣದ ರಸ್ತೆಯನ್ನು ೯ ತಿಂಗಳಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಶಾಸಕ ಡಿ.ಸುಧಾಕರ್ ಹೇಳಿದರು.<br /> <br /> ತಾಲ್ಲೂಕಿನ ಜವನಗೊಂಡನಹಳ್ಳಿಯಲ್ಲಿ ಭಾನುವಾರ ಪ್ರಧಾನ ಮಂತ್ರಿ ಗ್ರಾಮಸಡಕ್ ಯೋಜನೆ ಯಡಿ ₨ 5 ಕೋಟಿ ೫೬ ಲಕ್ಷ ವೆಚ್ಚದಲ್ಲಿ ೧೦.೫೬ ಕಿ.ಮೀ. ದೂರದ ಡಾಂಬರು ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br /> <br /> ಗುತ್ತಿಗೆದಾರರು ಸದರಿ ರಸ್ತೆಯನ್ನು ಐದು ವರ್ಷ ನಿರ್ವಹಣೆ ಮಾಡುವುದಲ್ಲದೆ ೬ನೇ ವರ್ಷ ಪುನಃ ಡಾಂಬರೀಕರಣ ಮಾಡಿ ಸರ್ಕಾರಕ್ಕೆ ಒಪ್ಪಿಸಬೇಕು. ಚುನಾವಣೆಗೆ ಮುಂಚೆ ನೀಡಿದ್ದ ಭರವಸೆಯಂತೆ ಜವನಗೊಂಡನಹಳ್ಳಿ ಹೋಬಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದೇನೆ. ಈ ಭಾಗದಲ್ಲಿ ಪರಿಶಿಷ್ಟ ಜಾತಿ-ವರ್ಗದವರು, ಹಿಂದುಳಿದವರು ಹೆಚ್ಚಿದ್ದು, ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎನ್ನುವುದು ನನ್ನ ಹಂಬಲ ಎಂದು ಅವರು ತಿಳಿಸಿದರು.<br /> <br /> ಹೋಬಳಿಯ ೩೮ ಹಳ್ಳಿಗಳಿಗೆ ₨ ೨೮ ಕೋಟಿ, ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಗೆ ಟೆಂಡರ್ ಕರೆಯಲಾಗಿದೆ. ಗಾಯತ್ರಿ ಜಲಾಶಯಕ್ಕೆ ಯಾವುದಾದರೂ ಮೂಲದಿಂದ ನೀರು ತುಂಬಿಸುವ ಯೋಜನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸುಧಾಕರ್ ಭರವಸೆ ನೀಡಿದರು.<br /> <br /> ಜಿ.ಪಂ.ಸದಸ್ಯೆ ಕರಿಯಮ್ಮ ಕೃಷಿ ಮಾರುಕಟ್ಟೆ ಸಮಿತಿ ನಿರ್ದೇಶಕ ಎಂ.ಆರ್.ಈರಣ್ಣ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಬಿ.ವಿ.ಮಾಧವ ಮಾತನಾಡಿದರು.<br /> <br /> ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್, ರಂಗನಾಥ್, ಲಕ್ಷ್ಮೀದೇವಿ, ಟಿ.ಕೃಷ್ಣಪ್ಪ, ಕಂದಿಕೆರೆ ಸುರೇಶ್ ಬಾಬು, ಈರಲಿಂಗೇಗೌಡ, ರಾಧಮ್ಮ, ಪಾತಲಿಂಗಪ್ಪ, ಮಂಜುನಾಥ್, ಮುಕುಂದ, ತಿಮ್ಮರಾಯಪ್ಪ, ನಜೀರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು: </strong> ಹಲವು ವರ್ಷಗಳಿಂದ ಈ ಭಾಗದ ಜನರ ಬೇಡಿಕೆಯಾಗಿದ್ದ ಜವನಗೊಂಡನಹಳ್ಳಿ-ಜೂಲಯ್ಯನ ಹಟ್ಟಿ-ಹುರುಳಿ ದಿಬ್ದಾರಹಟ್ಟಿ- ಓಬಳಾಪುರ-ಕಿಲ್ಲಾರದಹಳ್ಳಿ- ಮಾವಿನಮಡು-ಪಿಲ್ಲಾಲಿ ಗ್ರಾಮಗಳ ೧೦.೫೬ ಕಿ.ಮೀ. ವಿಸ್ತೀರ್ಣದ ರಸ್ತೆಯನ್ನು ೯ ತಿಂಗಳಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಶಾಸಕ ಡಿ.ಸುಧಾಕರ್ ಹೇಳಿದರು.<br /> <br /> ತಾಲ್ಲೂಕಿನ ಜವನಗೊಂಡನಹಳ್ಳಿಯಲ್ಲಿ ಭಾನುವಾರ ಪ್ರಧಾನ ಮಂತ್ರಿ ಗ್ರಾಮಸಡಕ್ ಯೋಜನೆ ಯಡಿ ₨ 5 ಕೋಟಿ ೫೬ ಲಕ್ಷ ವೆಚ್ಚದಲ್ಲಿ ೧೦.೫೬ ಕಿ.ಮೀ. ದೂರದ ಡಾಂಬರು ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br /> <br /> ಗುತ್ತಿಗೆದಾರರು ಸದರಿ ರಸ್ತೆಯನ್ನು ಐದು ವರ್ಷ ನಿರ್ವಹಣೆ ಮಾಡುವುದಲ್ಲದೆ ೬ನೇ ವರ್ಷ ಪುನಃ ಡಾಂಬರೀಕರಣ ಮಾಡಿ ಸರ್ಕಾರಕ್ಕೆ ಒಪ್ಪಿಸಬೇಕು. ಚುನಾವಣೆಗೆ ಮುಂಚೆ ನೀಡಿದ್ದ ಭರವಸೆಯಂತೆ ಜವನಗೊಂಡನಹಳ್ಳಿ ಹೋಬಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದೇನೆ. ಈ ಭಾಗದಲ್ಲಿ ಪರಿಶಿಷ್ಟ ಜಾತಿ-ವರ್ಗದವರು, ಹಿಂದುಳಿದವರು ಹೆಚ್ಚಿದ್ದು, ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎನ್ನುವುದು ನನ್ನ ಹಂಬಲ ಎಂದು ಅವರು ತಿಳಿಸಿದರು.<br /> <br /> ಹೋಬಳಿಯ ೩೮ ಹಳ್ಳಿಗಳಿಗೆ ₨ ೨೮ ಕೋಟಿ, ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಗೆ ಟೆಂಡರ್ ಕರೆಯಲಾಗಿದೆ. ಗಾಯತ್ರಿ ಜಲಾಶಯಕ್ಕೆ ಯಾವುದಾದರೂ ಮೂಲದಿಂದ ನೀರು ತುಂಬಿಸುವ ಯೋಜನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸುಧಾಕರ್ ಭರವಸೆ ನೀಡಿದರು.<br /> <br /> ಜಿ.ಪಂ.ಸದಸ್ಯೆ ಕರಿಯಮ್ಮ ಕೃಷಿ ಮಾರುಕಟ್ಟೆ ಸಮಿತಿ ನಿರ್ದೇಶಕ ಎಂ.ಆರ್.ಈರಣ್ಣ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಬಿ.ವಿ.ಮಾಧವ ಮಾತನಾಡಿದರು.<br /> <br /> ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್, ರಂಗನಾಥ್, ಲಕ್ಷ್ಮೀದೇವಿ, ಟಿ.ಕೃಷ್ಣಪ್ಪ, ಕಂದಿಕೆರೆ ಸುರೇಶ್ ಬಾಬು, ಈರಲಿಂಗೇಗೌಡ, ರಾಧಮ್ಮ, ಪಾತಲಿಂಗಪ್ಪ, ಮಂಜುನಾಥ್, ಮುಕುಂದ, ತಿಮ್ಮರಾಯಪ್ಪ, ನಜೀರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>