<p><strong>ನವದಹೆಲಿ (ಪಿಟಿಐ):</strong> ಇಂಗ್ಲೆಂಡ್ ಪ್ರವಾಸದ ವೇಳೆ ಗಾಯಗೊಂಡಿರುವ ಆಟಗಾರರ ವಿವರಗಳನ್ನು ಕಡ್ಡಾಯವಾಗಿ ಬಿಸಿಸಿಐಗೆ ನೀಡಬೇಕು ಎಂದು ಫ್ರಾಂಚೈಸಿಗಳಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಖ್ಯಸ್ಥ ರಾಜೀವ್ ರಾಜೀವ್ ಶುಕ್ಲಾ ಸೂಚಿಸಿದ್ದಾರೆ.<br /> <br /> `ಬಿಸಿಸಿಐ ಜೊತೆಗಿನ ಬಾಂಧವ್ಯವನ್ನು ಉತ್ತಮವಾದ ರೀತಿಯಲ್ಲಿ ಕಾಪಾಡಿಕೊಂಡು ಹೋಗಬೇಕು ಎನ್ನುವುದು ನಮ್ಮ ಬಯಕೆಯಾಗಿದೆ. ಆದ್ದರಿಂದ ಆಟಗಾರರು ಐಪಿಎಲ್ ಅಥವಾ ಇತರೆ ಯಾವುದೇ ಟೂರ್ನಿಗಳನ್ನು ಆಡುವಾಗ ಗಾಯದ ಸಮಸ್ಯೆ ಎದುರಿಸಿದರೆ ಅದನ್ನು ಬಿಸಿಸಿಐ ತಿಳಿಸಬೇಕು. <br /> <br /> ಇದರಿಂದ ಅಂತರರಾಷ್ಟ್ರೀಯ ಪಂದ್ಯಗಳಿಗೆ ಉಂಟಾಗುವ ತೊಡಕನ್ನು ನಿವಾರಿಸಬಹುದು~ ಎಂದು ಶುಕ್ಲಾ ಹೇಳಿದ್ದಾರೆ.ಇತ್ತೀಚಿಗೆ ನಡೆದ ಫ್ರಾಂಚೈಸಿಗಳೊಂದಿಗಿನ ಸಭೆಯಲ್ಲಿ ಎಲ್ಲಾ ತಂಡಗಳಲ್ಲಿಯೂ ಕೆಲ ಆಟಗಾರರಿಗೆ ಗಾಯದ ಸಮಸ್ಯೆಯಿದೆ ಎನ್ನುವುದು ಗೊತ್ತಾಗಿದೆ.<br /> <br /> ಆದರೆ ಈ ಕುರಿತು ನಿಗಾ ವಹಿಸಲು ತಂಡದ ಆಡಳಿತ ಮಂಡಳಿ ಹಾಗೂ ಫಿಸಿಯೊಗೆ ತಿಳಿಸಲಾಗಿದೆ. ಇದಕ್ಕಾಗಿ ಫಿಸಿಯೊ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ವಿವರಿಸಿದ್ದಾರೆ. <br /> <br /> ಆಟಗಾರರು ಗಾಯಗೊಂಡಿದ್ದಕ್ಕೆ ಕೇವಲ ಐಪಿಎಲ್ ಕ್ರಿಕೆಟ್ ಅನ್ನು ಟೀಕಿಸುವುದು ಸರಿಯಲ್ಲ. ಇಂಗ್ಲೆಂಡ್ ಪ್ರವಾಸದಲ್ಲಿ ಹೆಚ್ಚು ಆಟಗಾರರು ಗಾಯಗೊಂಡಿದ್ದಾರೆ. ಆದರೂ ಈ ಸಮಸ್ಯೆಯನ್ನು ಲಘುವಾಗಿ ಪರಿಗಣಿಸಿಲ್ಲ. ಆದರೆ ಫ್ರಾಂಚೈಸಿಗಳು ಮಾತ್ರ ಯಾವುದೇ ಕಾರಣಕ್ಕೆ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವಂತಿಲ್ಲ ಎನ್ನುತ್ತಾರೆ ಶುಕ್ಲಾ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದಹೆಲಿ (ಪಿಟಿಐ):</strong> ಇಂಗ್ಲೆಂಡ್ ಪ್ರವಾಸದ ವೇಳೆ ಗಾಯಗೊಂಡಿರುವ ಆಟಗಾರರ ವಿವರಗಳನ್ನು ಕಡ್ಡಾಯವಾಗಿ ಬಿಸಿಸಿಐಗೆ ನೀಡಬೇಕು ಎಂದು ಫ್ರಾಂಚೈಸಿಗಳಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಖ್ಯಸ್ಥ ರಾಜೀವ್ ರಾಜೀವ್ ಶುಕ್ಲಾ ಸೂಚಿಸಿದ್ದಾರೆ.<br /> <br /> `ಬಿಸಿಸಿಐ ಜೊತೆಗಿನ ಬಾಂಧವ್ಯವನ್ನು ಉತ್ತಮವಾದ ರೀತಿಯಲ್ಲಿ ಕಾಪಾಡಿಕೊಂಡು ಹೋಗಬೇಕು ಎನ್ನುವುದು ನಮ್ಮ ಬಯಕೆಯಾಗಿದೆ. ಆದ್ದರಿಂದ ಆಟಗಾರರು ಐಪಿಎಲ್ ಅಥವಾ ಇತರೆ ಯಾವುದೇ ಟೂರ್ನಿಗಳನ್ನು ಆಡುವಾಗ ಗಾಯದ ಸಮಸ್ಯೆ ಎದುರಿಸಿದರೆ ಅದನ್ನು ಬಿಸಿಸಿಐ ತಿಳಿಸಬೇಕು. <br /> <br /> ಇದರಿಂದ ಅಂತರರಾಷ್ಟ್ರೀಯ ಪಂದ್ಯಗಳಿಗೆ ಉಂಟಾಗುವ ತೊಡಕನ್ನು ನಿವಾರಿಸಬಹುದು~ ಎಂದು ಶುಕ್ಲಾ ಹೇಳಿದ್ದಾರೆ.ಇತ್ತೀಚಿಗೆ ನಡೆದ ಫ್ರಾಂಚೈಸಿಗಳೊಂದಿಗಿನ ಸಭೆಯಲ್ಲಿ ಎಲ್ಲಾ ತಂಡಗಳಲ್ಲಿಯೂ ಕೆಲ ಆಟಗಾರರಿಗೆ ಗಾಯದ ಸಮಸ್ಯೆಯಿದೆ ಎನ್ನುವುದು ಗೊತ್ತಾಗಿದೆ.<br /> <br /> ಆದರೆ ಈ ಕುರಿತು ನಿಗಾ ವಹಿಸಲು ತಂಡದ ಆಡಳಿತ ಮಂಡಳಿ ಹಾಗೂ ಫಿಸಿಯೊಗೆ ತಿಳಿಸಲಾಗಿದೆ. ಇದಕ್ಕಾಗಿ ಫಿಸಿಯೊ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ವಿವರಿಸಿದ್ದಾರೆ. <br /> <br /> ಆಟಗಾರರು ಗಾಯಗೊಂಡಿದ್ದಕ್ಕೆ ಕೇವಲ ಐಪಿಎಲ್ ಕ್ರಿಕೆಟ್ ಅನ್ನು ಟೀಕಿಸುವುದು ಸರಿಯಲ್ಲ. ಇಂಗ್ಲೆಂಡ್ ಪ್ರವಾಸದಲ್ಲಿ ಹೆಚ್ಚು ಆಟಗಾರರು ಗಾಯಗೊಂಡಿದ್ದಾರೆ. ಆದರೂ ಈ ಸಮಸ್ಯೆಯನ್ನು ಲಘುವಾಗಿ ಪರಿಗಣಿಸಿಲ್ಲ. ಆದರೆ ಫ್ರಾಂಚೈಸಿಗಳು ಮಾತ್ರ ಯಾವುದೇ ಕಾರಣಕ್ಕೆ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವಂತಿಲ್ಲ ಎನ್ನುತ್ತಾರೆ ಶುಕ್ಲಾ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>