<p>ಮಧುಮೇಹ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಲೇ ಗಿನ್ನೆಸ್ದಾಖಲೆ ಸೇರ್ಪಡೆಯಾದ ಹೆಮ್ಮೆ ನಗರದ ಸಂಸ್ಥೆಯೊಂದಕ್ಕೆ ದೊರಕಿದೆ.ಮಧುಮೇಹ ಮತ್ತು ಜೀವನಶೈಲಿಯ ಬಗ್ಗೆ ಜಾಗೃತಿ ಮೂಡಿಸುವ ನೊವೊ ನಾರ್ಡಿಸ್ಕ್ ಶಿಕ್ಷಣ ಪ್ರತಿಷ್ಠಾನಕ್ಕೆ ಈ ಕೀರ್ತಿ ಪ್ರಾಪ್ತಿಯಾಗಿದೆ.<br /> <br /> ಈಚೆಗೆ ನಗರದ ಅರಮನೆ ಮೈದಾನದಲ್ಲಿ 2621 ಜನರಿಗೆ ಮಧುಮೇಹ ತಪಾಸಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಲೋಕಾಯುಕ್ತ ಸಂತೋಷ ಹೆಗ್ಡೆ ಅವರು ಮಾತನಾಡಿದರು. ಕಳೆದ 35 ವರ್ಷಗಳಿಂದ ಮಧುಮೇಹದೊಂದಿಗೆ ಸಹಚರ್ಯ ನನ್ನದಾಗಿದೆ.</p>.<p>ಉತ್ತಮ ಜೀವನಶೈಲಿ, ಆರೋಗ್ಯಕರ ಅಭ್ಯಾಸಗಳಿಂದಾಗಿ ಮಧುಮೇಹವನ್ನು ನಿರ್ವಹಿಸುವುದು ಸರಳವಾಗಿದೆ. ಮಧುಮೇಹದ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸುವ ಮತ್ತು ಮಾಹಿತಿ ನೀಡುವ ಈ ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದರು.<br /> <br /> ಇದೇ ಸಂದರ್ಭದಲ್ಲಿ ಗಿನ್ನೆಸ್ ದಾಖಲೆ ಪುಸ್ತಕವನ್ನು ನಿರ್ವಹಿಸುವ ಅಧಿಕಾರಿಗಳೂ ಹಾಜರಿದ್ದು, ಗಿನ್ನೆಸ್ ದಾಖಲೆ ನಿರ್ಮಾಣದ ಪ್ರಮಾಣ ಪತ್ರವನ್ನು ಸಂಸ್ಥೆಗೆ ಹಸ್ತಾಂತರಿಸಿದರು.<br /> <br /> ಪ್ರಮಾಣ ಪತ್ರ ಸ್ವೀಕರಿಸಿ ಮಾತನಾಡಿದ ಡಿಸೋಜಾ ಅವರು `ಈ ದಾಖಲೆಯಿಂದಾಗಿ ಸಾಮಾಜಿಕ ಜವಾಬ್ದಾರಿ ಹೆಚ್ಚಿದಂತಾಗಿದೆ. ಮಧುಮೇಹ ಇದೀಗ ಜೀವನಶೈಲಿಯ ರೋಗವಾಗಿ ಬದಲಾಗಿದೆ. ಆರೋಗ್ಯಕರ ಜೀವನಶೈಲಿಯಿಂದ ಮಧುಮೇಹವನ್ನು ನಿಭಾಯಿಸುವ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ ಎಂದು ಅಭಿಪ್ರಾಯ ಪಟ್ಟರು. <br /> <br /> ಈ ನಿಟ್ಟಿನಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿಯೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬಾಲ್ಯದಲ್ಲಿಯೇ ಕಾಣಿಸಿಕೊಳ್ಳುತ್ತಿರುವ ಮಧುಮೇಹದ ಬಗ್ಗೆ ಸಂಶೋಧನೆ ಹಾಗೂ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತಿದೆ. ಪಾಲಕರಲ್ಲಿ ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವಂಥ ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು. ಮಧುಮೇಹದ ವಿವಿಧ ಬಗೆಗಳ ಬಗ್ಗೆ ತಿಳಿಸಿಕೊಡಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಧುಮೇಹ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಲೇ ಗಿನ್ನೆಸ್ದಾಖಲೆ ಸೇರ್ಪಡೆಯಾದ ಹೆಮ್ಮೆ ನಗರದ ಸಂಸ್ಥೆಯೊಂದಕ್ಕೆ ದೊರಕಿದೆ.ಮಧುಮೇಹ ಮತ್ತು ಜೀವನಶೈಲಿಯ ಬಗ್ಗೆ ಜಾಗೃತಿ ಮೂಡಿಸುವ ನೊವೊ ನಾರ್ಡಿಸ್ಕ್ ಶಿಕ್ಷಣ ಪ್ರತಿಷ್ಠಾನಕ್ಕೆ ಈ ಕೀರ್ತಿ ಪ್ರಾಪ್ತಿಯಾಗಿದೆ.<br /> <br /> ಈಚೆಗೆ ನಗರದ ಅರಮನೆ ಮೈದಾನದಲ್ಲಿ 2621 ಜನರಿಗೆ ಮಧುಮೇಹ ತಪಾಸಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಲೋಕಾಯುಕ್ತ ಸಂತೋಷ ಹೆಗ್ಡೆ ಅವರು ಮಾತನಾಡಿದರು. ಕಳೆದ 35 ವರ್ಷಗಳಿಂದ ಮಧುಮೇಹದೊಂದಿಗೆ ಸಹಚರ್ಯ ನನ್ನದಾಗಿದೆ.</p>.<p>ಉತ್ತಮ ಜೀವನಶೈಲಿ, ಆರೋಗ್ಯಕರ ಅಭ್ಯಾಸಗಳಿಂದಾಗಿ ಮಧುಮೇಹವನ್ನು ನಿರ್ವಹಿಸುವುದು ಸರಳವಾಗಿದೆ. ಮಧುಮೇಹದ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸುವ ಮತ್ತು ಮಾಹಿತಿ ನೀಡುವ ಈ ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದರು.<br /> <br /> ಇದೇ ಸಂದರ್ಭದಲ್ಲಿ ಗಿನ್ನೆಸ್ ದಾಖಲೆ ಪುಸ್ತಕವನ್ನು ನಿರ್ವಹಿಸುವ ಅಧಿಕಾರಿಗಳೂ ಹಾಜರಿದ್ದು, ಗಿನ್ನೆಸ್ ದಾಖಲೆ ನಿರ್ಮಾಣದ ಪ್ರಮಾಣ ಪತ್ರವನ್ನು ಸಂಸ್ಥೆಗೆ ಹಸ್ತಾಂತರಿಸಿದರು.<br /> <br /> ಪ್ರಮಾಣ ಪತ್ರ ಸ್ವೀಕರಿಸಿ ಮಾತನಾಡಿದ ಡಿಸೋಜಾ ಅವರು `ಈ ದಾಖಲೆಯಿಂದಾಗಿ ಸಾಮಾಜಿಕ ಜವಾಬ್ದಾರಿ ಹೆಚ್ಚಿದಂತಾಗಿದೆ. ಮಧುಮೇಹ ಇದೀಗ ಜೀವನಶೈಲಿಯ ರೋಗವಾಗಿ ಬದಲಾಗಿದೆ. ಆರೋಗ್ಯಕರ ಜೀವನಶೈಲಿಯಿಂದ ಮಧುಮೇಹವನ್ನು ನಿಭಾಯಿಸುವ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ ಎಂದು ಅಭಿಪ್ರಾಯ ಪಟ್ಟರು. <br /> <br /> ಈ ನಿಟ್ಟಿನಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿಯೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬಾಲ್ಯದಲ್ಲಿಯೇ ಕಾಣಿಸಿಕೊಳ್ಳುತ್ತಿರುವ ಮಧುಮೇಹದ ಬಗ್ಗೆ ಸಂಶೋಧನೆ ಹಾಗೂ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತಿದೆ. ಪಾಲಕರಲ್ಲಿ ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವಂಥ ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು. ಮಧುಮೇಹದ ವಿವಿಧ ಬಗೆಗಳ ಬಗ್ಗೆ ತಿಳಿಸಿಕೊಡಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>