<p><strong>ಚಾಮರಾಜನಗರ: </strong>ಜಿಲ್ಲೆಯ ಬಿಳಿಗಿರಿರಂಗನಬೆಟ್ಟದ ಚಿಕ್ಕಸಂಪಿಗೆ ಜಾತ್ರೆಗೆ ತೆರಳಿದ್ದ ಬೇಡಗುಳಿಯ ಗಿರಿಜನ ಯುವತಿ ಮೇಲೆ ಮೂವರು ಕಿಡಿಗೇಡಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.<br /> <br /> ಪುಣಜನೂರು ಗ್ರಾಮದ ಶಿವಲಿಂಗ, ಮಹೇಶ್ ಹಾಗೂ ನಾಗೇಶ್ ಎಂಬುವರು ಈ ಕೃತ್ಯ ಎಸಗಿದ್ದು, ತಲೆತಪ್ಪಿಸಿಕೊಂಡಿದ್ದಾರೆ.<br /> <br /> ಯುವತಿಯು ಜಾತ್ರೆಗೆ ಹೋಗಿದ್ದ ವೇಳೆ ಆರೋಪಿಗಳು ಆಕೆಯನ್ನು ಕಾಡಿನೊಳಕ್ಕೆ ಹೊತ್ತೊಯ್ದು ಅತ್ಯಾಚಾರ ಎಸಗಿದ್ದಾರೆ. ಈ ಘಟನೆಯಿಂದ ಆಘಾತಗೊಂಡ ಆಕೆ ಪೋಷಕರಿಗೆ ಮೊದಲು ಮಾಹಿತಿ ನೀಡಿಲ್ಲ. <br /> <br /> ಆತಂಕಗೊಂಡ ಪೋಷಕರು ಆಕೆಯನ್ನು ವಿಚಾರಿಸಿದಾಗ ಘಟನೆ ಬಗ್ಗೆ ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಆಕೆಯ ಪೋಷಕರು ರಾಮಸಮುದ್ರದ ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.<br /> <br /> `ಯುವತಿ ನೀಡಿದ ಮಾಹಿತಿ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೂಡಲೇ, ಆರೋಪಿಗಳನ್ನು ಬಂಧಿಸಲಾಗುವುದು~ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್ `ಪ್ರಜಾವಾಣಿ~ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಜಿಲ್ಲೆಯ ಬಿಳಿಗಿರಿರಂಗನಬೆಟ್ಟದ ಚಿಕ್ಕಸಂಪಿಗೆ ಜಾತ್ರೆಗೆ ತೆರಳಿದ್ದ ಬೇಡಗುಳಿಯ ಗಿರಿಜನ ಯುವತಿ ಮೇಲೆ ಮೂವರು ಕಿಡಿಗೇಡಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.<br /> <br /> ಪುಣಜನೂರು ಗ್ರಾಮದ ಶಿವಲಿಂಗ, ಮಹೇಶ್ ಹಾಗೂ ನಾಗೇಶ್ ಎಂಬುವರು ಈ ಕೃತ್ಯ ಎಸಗಿದ್ದು, ತಲೆತಪ್ಪಿಸಿಕೊಂಡಿದ್ದಾರೆ.<br /> <br /> ಯುವತಿಯು ಜಾತ್ರೆಗೆ ಹೋಗಿದ್ದ ವೇಳೆ ಆರೋಪಿಗಳು ಆಕೆಯನ್ನು ಕಾಡಿನೊಳಕ್ಕೆ ಹೊತ್ತೊಯ್ದು ಅತ್ಯಾಚಾರ ಎಸಗಿದ್ದಾರೆ. ಈ ಘಟನೆಯಿಂದ ಆಘಾತಗೊಂಡ ಆಕೆ ಪೋಷಕರಿಗೆ ಮೊದಲು ಮಾಹಿತಿ ನೀಡಿಲ್ಲ. <br /> <br /> ಆತಂಕಗೊಂಡ ಪೋಷಕರು ಆಕೆಯನ್ನು ವಿಚಾರಿಸಿದಾಗ ಘಟನೆ ಬಗ್ಗೆ ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಆಕೆಯ ಪೋಷಕರು ರಾಮಸಮುದ್ರದ ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.<br /> <br /> `ಯುವತಿ ನೀಡಿದ ಮಾಹಿತಿ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೂಡಲೇ, ಆರೋಪಿಗಳನ್ನು ಬಂಧಿಸಲಾಗುವುದು~ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್ `ಪ್ರಜಾವಾಣಿ~ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>