<p>ರಾಯಪುರ (ಪಿಟಿಐ): ಛತ್ತೀಸಗಡದ ದಾಂತೇವಾಡ ಜಿಲ್ಲೆಯಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 30 ನಕ್ಸಲರು ಮತ್ತು ಮೂವರು ಪೊಲೀಸರು ಸತ್ತಿದ್ದಾರೆ ಹಾಗೂ 9 ಜನರಿಗೆ ಗಾಯಗಳಾಗಿವೆ.<br /> <br /> ದಾಂತೇವಾಡದ ನಕ್ಸಲ್ಪೀಡಿತ ಪ್ರದೇಶದಲ್ಲಿ 145 ಪೊಲೀಸ್ ಸಿಬ್ಬಂದಿ ಶೋಧನಾ ಕಾರ್ಯ ನಡೆಸುತ್ತಿದ್ದ ವೇಳೆ ನಕ್ಸಲರು ಗುಂಡಿನ ದಾಳಿ ನಡೆಸಿದರು. ಪ್ರತಿಯಾಗಿ ಗುಂಡು ಹಾರಿಸಲಾಯಿತು. ಈ ಗುಂಡಿನ ಕಾಳಗದಲ್ಲಿ ಮೂವರು ಪೊಲೀಸರು ಸತ್ತಿದ್ದು, 9 ಜನರಿಗೆ ಗಾಯಗಳಾಗಿವೆ ಎಂದು ನಕ್ಸಲ್ ಕಾರ್ಯಾಚರಣೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ರಾಮ್ ನಿವಾಸ್ ತಿಳಿಸಿದ್ದಾರೆ. <br /> <br /> ಗುಂಡಿನ ಚಕಮಕಿ ಈಗ ನಿಂತಿದ್ದು, ನಕ್ಸಲರ ಶವಗಳನ್ನು ವಶಪಡಿಸಿಕೊ ಳ್ಳಲು ಕ್ರಮ ತೆಗೆದುಕೊಳ್ಳಲಾಗಿದೆ ಹಾಗೂ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಪಡೆಯನ್ನು ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.<br /> <br /> ಪಟ್ನಾ ವರದಿ (ಐಎಎನ್ಎಸ್): ಬಿಹಾರದ ಚಂಪಾರಣ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಆರು ಮಾವೊವಾದಿಗಳು ಮೃತಪಟ್ಟಿದ್ದಾರೆ.<br /> <br /> ರಾಜಧಾನಿ ಪಟ್ನಾದಿಂದ 200 ಕಿ.ಮೀ ದೂರದ ದರ್ಮಾ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಖಚಿತ ಮಾಹಿತಿಯ ಮೇರೆಗೆ ಸ್ಥಳೀಯ ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿ ಮಾವೋವಾದಿಗಳನ್ನು ಸುತ್ತುವರೆದು ಈ ಕಾರ್ಯಾಚರಣೆ ನಡೆಸಿದ್ದಾರೆ.<br /> <br /> ಹತ್ತು ಮಂದಿ ಬಂಡುಕೋರರನ್ನು ಬಂಧಿಸಿ 1,000 ಜೀವಂತ ಕಾಡತೂಸು, 5 ಎಸ್ಎಲ್ಆರ್ ರೈಫಲ್ ಮತ್ತು 8 ರೈಫಲ್ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. <br /> <br /> ಘಟನೆಯಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಪುರ (ಪಿಟಿಐ): ಛತ್ತೀಸಗಡದ ದಾಂತೇವಾಡ ಜಿಲ್ಲೆಯಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 30 ನಕ್ಸಲರು ಮತ್ತು ಮೂವರು ಪೊಲೀಸರು ಸತ್ತಿದ್ದಾರೆ ಹಾಗೂ 9 ಜನರಿಗೆ ಗಾಯಗಳಾಗಿವೆ.<br /> <br /> ದಾಂತೇವಾಡದ ನಕ್ಸಲ್ಪೀಡಿತ ಪ್ರದೇಶದಲ್ಲಿ 145 ಪೊಲೀಸ್ ಸಿಬ್ಬಂದಿ ಶೋಧನಾ ಕಾರ್ಯ ನಡೆಸುತ್ತಿದ್ದ ವೇಳೆ ನಕ್ಸಲರು ಗುಂಡಿನ ದಾಳಿ ನಡೆಸಿದರು. ಪ್ರತಿಯಾಗಿ ಗುಂಡು ಹಾರಿಸಲಾಯಿತು. ಈ ಗುಂಡಿನ ಕಾಳಗದಲ್ಲಿ ಮೂವರು ಪೊಲೀಸರು ಸತ್ತಿದ್ದು, 9 ಜನರಿಗೆ ಗಾಯಗಳಾಗಿವೆ ಎಂದು ನಕ್ಸಲ್ ಕಾರ್ಯಾಚರಣೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ರಾಮ್ ನಿವಾಸ್ ತಿಳಿಸಿದ್ದಾರೆ. <br /> <br /> ಗುಂಡಿನ ಚಕಮಕಿ ಈಗ ನಿಂತಿದ್ದು, ನಕ್ಸಲರ ಶವಗಳನ್ನು ವಶಪಡಿಸಿಕೊ ಳ್ಳಲು ಕ್ರಮ ತೆಗೆದುಕೊಳ್ಳಲಾಗಿದೆ ಹಾಗೂ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಪಡೆಯನ್ನು ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.<br /> <br /> ಪಟ್ನಾ ವರದಿ (ಐಎಎನ್ಎಸ್): ಬಿಹಾರದ ಚಂಪಾರಣ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಆರು ಮಾವೊವಾದಿಗಳು ಮೃತಪಟ್ಟಿದ್ದಾರೆ.<br /> <br /> ರಾಜಧಾನಿ ಪಟ್ನಾದಿಂದ 200 ಕಿ.ಮೀ ದೂರದ ದರ್ಮಾ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಖಚಿತ ಮಾಹಿತಿಯ ಮೇರೆಗೆ ಸ್ಥಳೀಯ ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿ ಮಾವೋವಾದಿಗಳನ್ನು ಸುತ್ತುವರೆದು ಈ ಕಾರ್ಯಾಚರಣೆ ನಡೆಸಿದ್ದಾರೆ.<br /> <br /> ಹತ್ತು ಮಂದಿ ಬಂಡುಕೋರರನ್ನು ಬಂಧಿಸಿ 1,000 ಜೀವಂತ ಕಾಡತೂಸು, 5 ಎಸ್ಎಲ್ಆರ್ ರೈಫಲ್ ಮತ್ತು 8 ರೈಫಲ್ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. <br /> <br /> ಘಟನೆಯಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>