<p><strong>ಬೆಂಗಳೂರು:</strong> ಮಳೆ ನೀರು ತುಂಬಿಕೊಂಡಿದ್ದ ಗುಂಡಿಯಲ್ಲಿ ಆಯತಪ್ಪಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಬಸವೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರಹಳ್ಳಿಯಲ್ಲಿ ಭಾನುವಾರ ಸಂಜೆ ಸಂಭವಿಸಿದೆ.ಕೃಷ್ಣಮೂರ್ತಿ ಮತ್ತು ಶಾರದಾ ದಂಪತಿಯ ಏಕೈಕ ಪುತ್ರ ಸಂದೀಪ್ (11) ಮೃತಪಟ್ಟ ಬಾಲಕ. <br /> <br /> ಕುರುಬರಹಳ್ಳಿಯ ಕೆಂಪೇಗೌಡ ಮೈದಾನದಲ್ಲಿ ರಂಗಮಂದಿರ ನಿರ್ಮಾಣ ಮಾಡಲು ಹಲವು ದಿನಗಳ ಹಿಂದೆ ಬೃಹತ್ ಗುಂಡಿಗಳನ್ನು ಅಗೆಯಲಾಗಿತ್ತು. ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆ ಗುಂಡಿಗಳಲ್ಲಿ ನೀರು ತುಂಬಿಕೊಂಡಿತ್ತು.<br /> <br /> ತನ್ನ ಗೆಳೆಯರೊಂದಿಗೆ ಮೈದಾನದಲ್ಲಿ ಆಟವಾಡಲು ಹೋದ ಬಾಲಕ ಆಯತಪ್ಪಿ ನೀರಿನಲ್ಲಿ ಮುಳುಗಿಹೋದ. ನಂತರ ಸ್ಥಳೀಯರು ಮತ್ತು ಪೊಲೀಸರ ನೆರವಿನೊಂದಿಗೆ ಬಾಲಕನನ್ನು ಮೇಲೆತ್ತಲಾಯಿತು. ಇನ್ನೂ ಉಸಿರಾಡುತ್ತಿದ್ದ ಸಂದೀಪನನ್ನು ಸಮೀಪದ ಪೆನೆಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. <br /> <br /> ಕೆಲ ಹೊತ್ತಿನಲ್ಲಿಯೇ ಬಾಲಕ ಮೃತಪಟ್ಟಿದ್ದನ್ನು ವೈದ್ಯರು ಘೋಷಿಸಿದರು ಎಂದು ಬಸವೇಶ್ವರ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗೀತಾ ಕುಲಕರ್ಣಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಳೆ ನೀರು ತುಂಬಿಕೊಂಡಿದ್ದ ಗುಂಡಿಯಲ್ಲಿ ಆಯತಪ್ಪಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಬಸವೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರಹಳ್ಳಿಯಲ್ಲಿ ಭಾನುವಾರ ಸಂಜೆ ಸಂಭವಿಸಿದೆ.ಕೃಷ್ಣಮೂರ್ತಿ ಮತ್ತು ಶಾರದಾ ದಂಪತಿಯ ಏಕೈಕ ಪುತ್ರ ಸಂದೀಪ್ (11) ಮೃತಪಟ್ಟ ಬಾಲಕ. <br /> <br /> ಕುರುಬರಹಳ್ಳಿಯ ಕೆಂಪೇಗೌಡ ಮೈದಾನದಲ್ಲಿ ರಂಗಮಂದಿರ ನಿರ್ಮಾಣ ಮಾಡಲು ಹಲವು ದಿನಗಳ ಹಿಂದೆ ಬೃಹತ್ ಗುಂಡಿಗಳನ್ನು ಅಗೆಯಲಾಗಿತ್ತು. ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆ ಗುಂಡಿಗಳಲ್ಲಿ ನೀರು ತುಂಬಿಕೊಂಡಿತ್ತು.<br /> <br /> ತನ್ನ ಗೆಳೆಯರೊಂದಿಗೆ ಮೈದಾನದಲ್ಲಿ ಆಟವಾಡಲು ಹೋದ ಬಾಲಕ ಆಯತಪ್ಪಿ ನೀರಿನಲ್ಲಿ ಮುಳುಗಿಹೋದ. ನಂತರ ಸ್ಥಳೀಯರು ಮತ್ತು ಪೊಲೀಸರ ನೆರವಿನೊಂದಿಗೆ ಬಾಲಕನನ್ನು ಮೇಲೆತ್ತಲಾಯಿತು. ಇನ್ನೂ ಉಸಿರಾಡುತ್ತಿದ್ದ ಸಂದೀಪನನ್ನು ಸಮೀಪದ ಪೆನೆಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. <br /> <br /> ಕೆಲ ಹೊತ್ತಿನಲ್ಲಿಯೇ ಬಾಲಕ ಮೃತಪಟ್ಟಿದ್ದನ್ನು ವೈದ್ಯರು ಘೋಷಿಸಿದರು ಎಂದು ಬಸವೇಶ್ವರ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗೀತಾ ಕುಲಕರ್ಣಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>