<p><strong>ನವದೆಹಲಿ (ಐಎಎನ್ಎಸ್): </strong>ಗುಜರಾತ್ನಲ್ಲಿ 2002ರಲ್ಲಿ ನಡೆದ ಗಲಭೆ ಕುರಿತಂತೆ ಆಗಿನ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಹಾಗೂ ಪ್ರಧಾನಿಯಾಗಿದ್ದ ವಾಜಪೇಯಿ ನಡುವಿನ ಪತ್ರ ವ್ಯವಹಾರವನ್ನು ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ಬುಧವಾರ ರದ್ದು ಮಾಡಿದೆ.<br /> <br /> ಗಲಭೆಗೆ ಸಂಬಂಧಿಸಿದಂತೆ 2002ರ ಫೆ. 28ರಿಂದ ಮಾರ್ಚ್ 15ರ ವರೆಗೆ ನಾರಾಯಣನ್ ಅವರು ವಾಜಪೇಯಿ ಅವರಿಗೆ ಬರೆದಿದ್ದ ಪತ್ರಗಳನ್ನು ಬಹಿರಂಗಪಡಿಸುವಂತೆ 2006ರ ಆ.8ರಂದು ಮಾಹಿತಿ ಆಯೋಗ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು. <br /> <br /> ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಈ ಪತ್ರಗಳನ್ನು ಬಹಿರಂಗಪಡಿಸುವಂತೆ ಕೋರಿ ಸಿ.ರಮೇಶ್ ಅರ್ಜಿ ಸಲ್ಲಿಸಿದ್ದರು. ಆಯೋಗದ ಆದೇಶವನ್ನು ಪ್ರಶ್ನಿಸಿ ಕೇಂದ್ರ ದೆಹಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. `2006ರ ಆ. 8ರಂದು ಮಾಹಿತಿ ಆಯೋಗ ನೀಡಿದ್ದ ಆದೇಶ ರದ್ದುಮಾಡಬಹುದು. ಆಯೋಗ ಪತ್ರಗಳನ್ನು ಬಹಿರಂಗಪಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಗದು~ ಎಂದು ನ್ಯಾಯಮೂರ್ತಿ ಅನಿಲ್ ಕುಮಾರ್ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್): </strong>ಗುಜರಾತ್ನಲ್ಲಿ 2002ರಲ್ಲಿ ನಡೆದ ಗಲಭೆ ಕುರಿತಂತೆ ಆಗಿನ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಹಾಗೂ ಪ್ರಧಾನಿಯಾಗಿದ್ದ ವಾಜಪೇಯಿ ನಡುವಿನ ಪತ್ರ ವ್ಯವಹಾರವನ್ನು ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ಬುಧವಾರ ರದ್ದು ಮಾಡಿದೆ.<br /> <br /> ಗಲಭೆಗೆ ಸಂಬಂಧಿಸಿದಂತೆ 2002ರ ಫೆ. 28ರಿಂದ ಮಾರ್ಚ್ 15ರ ವರೆಗೆ ನಾರಾಯಣನ್ ಅವರು ವಾಜಪೇಯಿ ಅವರಿಗೆ ಬರೆದಿದ್ದ ಪತ್ರಗಳನ್ನು ಬಹಿರಂಗಪಡಿಸುವಂತೆ 2006ರ ಆ.8ರಂದು ಮಾಹಿತಿ ಆಯೋಗ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು. <br /> <br /> ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಈ ಪತ್ರಗಳನ್ನು ಬಹಿರಂಗಪಡಿಸುವಂತೆ ಕೋರಿ ಸಿ.ರಮೇಶ್ ಅರ್ಜಿ ಸಲ್ಲಿಸಿದ್ದರು. ಆಯೋಗದ ಆದೇಶವನ್ನು ಪ್ರಶ್ನಿಸಿ ಕೇಂದ್ರ ದೆಹಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. `2006ರ ಆ. 8ರಂದು ಮಾಹಿತಿ ಆಯೋಗ ನೀಡಿದ್ದ ಆದೇಶ ರದ್ದುಮಾಡಬಹುದು. ಆಯೋಗ ಪತ್ರಗಳನ್ನು ಬಹಿರಂಗಪಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಗದು~ ಎಂದು ನ್ಯಾಯಮೂರ್ತಿ ಅನಿಲ್ ಕುಮಾರ್ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>