<p><strong>ದಾವಣಗೆರೆ:</strong> ರಾಜ್ಯ ಸರ್ಕಾರ ಅಡಿಕೆಗೆ ಉತ್ತಮ ಧಾರಣೆ ಇರುವ ಸಮಯದಲ್ಲಿಯೇ ದಿಢೀರನೆ ಗುಟ್ಕಾ ನಿಷೇಧ ಮಾಡಿರುವುದು ಸರಿಯಲ್ಲ ಎಂದು ಕೃಷಿ ಪಂಪ್ಸೆಟ್ ಹಾಗೂ ಅಡಿಕೆ ಬೆಳೆಗಾರರ ಸಂಘದ ಸಂಚಾಲಕ ಎಸ್.ಎಂ.ಗೌಡ ಹೇಳಿದರು.<br /> <br /> ಆರೋಗ್ಯಕ್ಕೆ ಹಾನಿಕರ ಎಂಬ ನೆಪವೊಡ್ಡಿ ಗುಟ್ಕಾ ನಿಷೇಧಿಸಲಾಗಿದೆ. ಆದರೆ, ಸಿಗರೇಟು, ಮದ್ಯ ನಿಷೇಧ ಮಾಡಿಲ್ಲ. ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರ ಮೇಲೆ ಗದಾಪ್ರಹಾರ ಮಾಡಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.<br /> <br /> ಸತತ 2 ವರ್ಷ ಬರಗಾಲದಿಂದ ಅಂತರ್ಜಲ ಬತ್ತಿ ಕೊಳವೆ ಬಾವಿ ವಿಫಲವಾಗುತ್ತಿವೆ. ಹಳದಿ, ಹಿಡಿಮುಂಡಿಗೆ ರೋಗಗಳಿಂದ ತೋಟಗಳು ಹಾಳಾಗುತ್ತಿವೆ. ಲಕ್ಷಾಂತರ ರೂಪಾಯಿ ಸಾಲ ಮಾಡಿರುವ ರೈತರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಗುಟ್ಕಾ ನಿಷೇಧ ಮಾಡಿರುವುದು ರೈತರಿಗೆ ಆಘಾತಕಾರಿಯಾಗಿದೆ ಎಂದು ಹೇಳಿದರು.<br /> <br /> ಗೋರಕ್ ಸಿಂಗ್ ವರದಿಯ ಶಿಫಾರಸ್ಸಿನಲ್ಲಿ ಅಡಿಕೆ ಬೆಳೆಗಾರರಿಗೆ ನೀಡುವ ಸೌಲಭ್ಯಗಳಿಗೆ ಮಲೆನಾಡಿನ ಅಡಿಕೆ ಬೆಳೆಗಾರರ ಜತೆಗೆ ಬಯಲುಸೀಮೆಯ ಅಡಿಕೆ ಬೆಳೆಗಾರರನ್ನೂ ಒಳಪಡಿಸಬೇಕು. ಅವರಿಗೆ ಪ್ಯಾಕೇಜ್ ಘೋಷಣೆ ಮಾಡಬೇಕು. ಅಡಿಕೆ ಅಭಿವೃದ್ಧಿಗೆ ಪಡೆದಿರುವ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಕೆ.ಜಿ. ಷಡಾಕ್ಷರಪ್ಪ, ಎಸ್.ಎಸ್. ಸುರೇಶ್, ಕೆ.ಜಿ.ಗಂಗಾಧರ ಕಬ್ಬೂರು, ರೇವಣಸಿದ್ದಪ್ಪ, ಚಂದ್ರಪ್ಪ, ಎಚ್.ಜಿ.ಮರುಳಸಿದ್ಧಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ರಾಜ್ಯ ಸರ್ಕಾರ ಅಡಿಕೆಗೆ ಉತ್ತಮ ಧಾರಣೆ ಇರುವ ಸಮಯದಲ್ಲಿಯೇ ದಿಢೀರನೆ ಗುಟ್ಕಾ ನಿಷೇಧ ಮಾಡಿರುವುದು ಸರಿಯಲ್ಲ ಎಂದು ಕೃಷಿ ಪಂಪ್ಸೆಟ್ ಹಾಗೂ ಅಡಿಕೆ ಬೆಳೆಗಾರರ ಸಂಘದ ಸಂಚಾಲಕ ಎಸ್.ಎಂ.ಗೌಡ ಹೇಳಿದರು.<br /> <br /> ಆರೋಗ್ಯಕ್ಕೆ ಹಾನಿಕರ ಎಂಬ ನೆಪವೊಡ್ಡಿ ಗುಟ್ಕಾ ನಿಷೇಧಿಸಲಾಗಿದೆ. ಆದರೆ, ಸಿಗರೇಟು, ಮದ್ಯ ನಿಷೇಧ ಮಾಡಿಲ್ಲ. ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರ ಮೇಲೆ ಗದಾಪ್ರಹಾರ ಮಾಡಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.<br /> <br /> ಸತತ 2 ವರ್ಷ ಬರಗಾಲದಿಂದ ಅಂತರ್ಜಲ ಬತ್ತಿ ಕೊಳವೆ ಬಾವಿ ವಿಫಲವಾಗುತ್ತಿವೆ. ಹಳದಿ, ಹಿಡಿಮುಂಡಿಗೆ ರೋಗಗಳಿಂದ ತೋಟಗಳು ಹಾಳಾಗುತ್ತಿವೆ. ಲಕ್ಷಾಂತರ ರೂಪಾಯಿ ಸಾಲ ಮಾಡಿರುವ ರೈತರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಗುಟ್ಕಾ ನಿಷೇಧ ಮಾಡಿರುವುದು ರೈತರಿಗೆ ಆಘಾತಕಾರಿಯಾಗಿದೆ ಎಂದು ಹೇಳಿದರು.<br /> <br /> ಗೋರಕ್ ಸಿಂಗ್ ವರದಿಯ ಶಿಫಾರಸ್ಸಿನಲ್ಲಿ ಅಡಿಕೆ ಬೆಳೆಗಾರರಿಗೆ ನೀಡುವ ಸೌಲಭ್ಯಗಳಿಗೆ ಮಲೆನಾಡಿನ ಅಡಿಕೆ ಬೆಳೆಗಾರರ ಜತೆಗೆ ಬಯಲುಸೀಮೆಯ ಅಡಿಕೆ ಬೆಳೆಗಾರರನ್ನೂ ಒಳಪಡಿಸಬೇಕು. ಅವರಿಗೆ ಪ್ಯಾಕೇಜ್ ಘೋಷಣೆ ಮಾಡಬೇಕು. ಅಡಿಕೆ ಅಭಿವೃದ್ಧಿಗೆ ಪಡೆದಿರುವ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಕೆ.ಜಿ. ಷಡಾಕ್ಷರಪ್ಪ, ಎಸ್.ಎಸ್. ಸುರೇಶ್, ಕೆ.ಜಿ.ಗಂಗಾಧರ ಕಬ್ಬೂರು, ರೇವಣಸಿದ್ದಪ್ಪ, ಚಂದ್ರಪ್ಪ, ಎಚ್.ಜಿ.ಮರುಳಸಿದ್ಧಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>