<p><strong>ಕೃಷ್ಣರಾಜಪುರ: </strong>ಶಾಲಾ ಶಿಕ್ಷಣದಿಂದ ವಂಚಿತರಾಗುವ ಮಕ್ಕಳಿಗಾಗಿ ತೆರೆದಿರುವ ಗುಡಾರ ಶಾಲೆಗಳಿಗೆ ಸೇರುವ ಮಕ್ಕಳ ಪ್ರತಿಭಾ ಪ್ರದರ್ಶನಕ್ಕಾಗಿ ಬೃಂದಾವನ ಗುಡಾರ ಶಾಲಾ ಮಕ್ಕಳ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.<br /> <br /> ನೃತ್ಯ ಪ್ರದರ್ಶನ, ಏಕಪಾತ್ರಾಭಿನಯ, ನಾಟಕಾಭಿನಯ, ಜನಪದ ನೃತ್ಯ ಮತ್ತು ಮಾನವೀಯ ಮೌಲ್ಯಗಳ ಕಿರುನಾಟಕಗಳನ್ನು ಮಕ್ಕಳು ಪ್ರದರ್ಶಿಸಿದರು.ಪಾಲಿಕೆ ಸದಸ್ಯೆ ಗೀತಾ ವಿವೇಕಾನಂದ ಬಾಬು ಮಾತನಾಡಿ, `ಈ ಭಾಗದಲ್ಲಿ ರಾಯಚೂರು, ಗುಲ್ಬರ್ಗ ಇತರ ಕಡೆಗಳಿಂದ ಕೂಲಿಗಾಗಿ ಬಂದು ನೆಲೆಸಿರುವವರ ಸಂಖ್ಯೆ ಹೆಚ್ಚಾಗಿದೆ. <br /> <br /> ಮನೆಗೆ ಸಮೀಪದ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವುದು ಮಕ್ಕಳ ಹಕ್ಕು. ಇಂತಹ ಮಕ್ಕಳಿಗಾಗಿ ಗುಡಾರ ಶಾಲೆಗಳನ್ನು ತೆರೆಯಲಾಗಿದೆ. ಶಿಕ್ಷಣ ಇಲಾಖೆ ಮತ್ತು ಖಾಸಗಿಯವರ ಸಹಭಾಗಿತ್ವದಲ್ಲಿ ಶಾಲೆ ನಡೆಯುತ್ತಿದೆ~ ಎಂದರು.ಶಿಕ್ಷಣ ಸಂಯೋಜಕ ಕೆ.ಮುನಿಯಲ್ಲಪ್ಪ ಮಾತನಾಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪುರ: </strong>ಶಾಲಾ ಶಿಕ್ಷಣದಿಂದ ವಂಚಿತರಾಗುವ ಮಕ್ಕಳಿಗಾಗಿ ತೆರೆದಿರುವ ಗುಡಾರ ಶಾಲೆಗಳಿಗೆ ಸೇರುವ ಮಕ್ಕಳ ಪ್ರತಿಭಾ ಪ್ರದರ್ಶನಕ್ಕಾಗಿ ಬೃಂದಾವನ ಗುಡಾರ ಶಾಲಾ ಮಕ್ಕಳ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.<br /> <br /> ನೃತ್ಯ ಪ್ರದರ್ಶನ, ಏಕಪಾತ್ರಾಭಿನಯ, ನಾಟಕಾಭಿನಯ, ಜನಪದ ನೃತ್ಯ ಮತ್ತು ಮಾನವೀಯ ಮೌಲ್ಯಗಳ ಕಿರುನಾಟಕಗಳನ್ನು ಮಕ್ಕಳು ಪ್ರದರ್ಶಿಸಿದರು.ಪಾಲಿಕೆ ಸದಸ್ಯೆ ಗೀತಾ ವಿವೇಕಾನಂದ ಬಾಬು ಮಾತನಾಡಿ, `ಈ ಭಾಗದಲ್ಲಿ ರಾಯಚೂರು, ಗುಲ್ಬರ್ಗ ಇತರ ಕಡೆಗಳಿಂದ ಕೂಲಿಗಾಗಿ ಬಂದು ನೆಲೆಸಿರುವವರ ಸಂಖ್ಯೆ ಹೆಚ್ಚಾಗಿದೆ. <br /> <br /> ಮನೆಗೆ ಸಮೀಪದ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವುದು ಮಕ್ಕಳ ಹಕ್ಕು. ಇಂತಹ ಮಕ್ಕಳಿಗಾಗಿ ಗುಡಾರ ಶಾಲೆಗಳನ್ನು ತೆರೆಯಲಾಗಿದೆ. ಶಿಕ್ಷಣ ಇಲಾಖೆ ಮತ್ತು ಖಾಸಗಿಯವರ ಸಹಭಾಗಿತ್ವದಲ್ಲಿ ಶಾಲೆ ನಡೆಯುತ್ತಿದೆ~ ಎಂದರು.ಶಿಕ್ಷಣ ಸಂಯೋಜಕ ಕೆ.ಮುನಿಯಲ್ಲಪ್ಪ ಮಾತನಾಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>