<p>ಶಿಡ್ಲಘಟ್ಟ: ರೋಗಿಗಳಿಗೆ ಉಚಿತವಾಗಿ ಔಷಧಿಗಳನ್ನು ನೀಡುವಾಗ ಉತ್ತಮ ಗುಣಮಟ್ಟದ ಔಷಧಿ ನೀಡಬೇಕು. ಆಗ ಮಾತ್ರ ರೋಗಿ ಗುಣಮುಖವಾಗಲು ಸಾಧ್ಯ ಎಂದು ತಾಲ್ಲೂಕು ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ವಿ.ವಿ.ಎಸ್ ಗುಪ್ತ ಶಂಕರ ಹೇಳಿದರು.<br /> <br /> ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಶಂಕರ ಕಣ್ಣಿನ ಆಸ್ಪತ್ರೆಯ ವತಿಯಿಂದ ನಡೆದ ನೇತ್ರ ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದರು. <br /> <br /> ಉಚಿತವಾಗಿ ಔಷಧಿಯನ್ನು ಪಡೆದ ಬಡ ರೋಗಿಗಳು ನಂತರ ಅದೇ ರೀತಿ ಔಷಧಿ ಕೊಳ್ಳಲು ಅಂಗಡಿಗೆ ಹೋಗುತ್ತಾರೆ. ಆದರೆ ಆ ಔಷಧಿ ಸಿಗದೆ ಪರದಾಡು ವಂತಾಗುತ್ತದೆ. ರೋಗಿಗಳು ಎಷ್ಟು ಕಾಲಾವಧಿಗೆ ಔಷಧಿಯನ್ನು ಬಳಸಬೇಕೋ ಅದಕ್ಕಾಗುವಷ್ಟು ಔಷಧಿಯನ್ನು ಉಚಿತವಾಗಿ ನೀಡಿದರೆ ಉತ್ತಮ ಎಂದು ತಿಳಿಸಿದರು.<br /> <br /> ಈ ಸಂದರ್ಭದಲ್ಲಿ ಶಂಕರ ಕಣ್ಣಿನ ಆಸ್ಪತ್ರೆ ನಿಯೋಜಕ ಜಯರಾಂ ಗೌಡ, ಕೃಷ್ಣಪ್ಪ, ತಾಲ್ಲೂಕು ಔಷಧಿ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ದೇಶನಾರಾಯಣ ಬಾಬು, ಕಾರ್ಯದರ್ಶಿ ಟಿ.ಕೆ.ಮಧು, ಪದಾಧಿಕಾರಿಗಳಾದ ಬಾಬು, ಮೋಹನ್, ಕುಮಾರ್, ಶಂಕರನಾರಾಯಣ್, ಸುರೇಶ್ ಮತ್ತಿತರರು ಹಾಜರಿದ್ದರು.<br /> <br /> <strong>ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ</strong><br /> ಚಿಕ್ಕಬಳ್ಳಾಪುರ: ದ್ವಿತೀಯ ಪಿಯುಸಿ ಉತ್ತೀರ್ಣರಾದ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 6 ತಿಂಗಳ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. <br /> ಆಸಕ್ತರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಸಲ್ಲಿಸಬಹುದು. ಮಾಹಿತಿಗೆ 08156-274535 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ರೋಗಿಗಳಿಗೆ ಉಚಿತವಾಗಿ ಔಷಧಿಗಳನ್ನು ನೀಡುವಾಗ ಉತ್ತಮ ಗುಣಮಟ್ಟದ ಔಷಧಿ ನೀಡಬೇಕು. ಆಗ ಮಾತ್ರ ರೋಗಿ ಗುಣಮುಖವಾಗಲು ಸಾಧ್ಯ ಎಂದು ತಾಲ್ಲೂಕು ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ವಿ.ವಿ.ಎಸ್ ಗುಪ್ತ ಶಂಕರ ಹೇಳಿದರು.<br /> <br /> ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಶಂಕರ ಕಣ್ಣಿನ ಆಸ್ಪತ್ರೆಯ ವತಿಯಿಂದ ನಡೆದ ನೇತ್ರ ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದರು. <br /> <br /> ಉಚಿತವಾಗಿ ಔಷಧಿಯನ್ನು ಪಡೆದ ಬಡ ರೋಗಿಗಳು ನಂತರ ಅದೇ ರೀತಿ ಔಷಧಿ ಕೊಳ್ಳಲು ಅಂಗಡಿಗೆ ಹೋಗುತ್ತಾರೆ. ಆದರೆ ಆ ಔಷಧಿ ಸಿಗದೆ ಪರದಾಡು ವಂತಾಗುತ್ತದೆ. ರೋಗಿಗಳು ಎಷ್ಟು ಕಾಲಾವಧಿಗೆ ಔಷಧಿಯನ್ನು ಬಳಸಬೇಕೋ ಅದಕ್ಕಾಗುವಷ್ಟು ಔಷಧಿಯನ್ನು ಉಚಿತವಾಗಿ ನೀಡಿದರೆ ಉತ್ತಮ ಎಂದು ತಿಳಿಸಿದರು.<br /> <br /> ಈ ಸಂದರ್ಭದಲ್ಲಿ ಶಂಕರ ಕಣ್ಣಿನ ಆಸ್ಪತ್ರೆ ನಿಯೋಜಕ ಜಯರಾಂ ಗೌಡ, ಕೃಷ್ಣಪ್ಪ, ತಾಲ್ಲೂಕು ಔಷಧಿ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ದೇಶನಾರಾಯಣ ಬಾಬು, ಕಾರ್ಯದರ್ಶಿ ಟಿ.ಕೆ.ಮಧು, ಪದಾಧಿಕಾರಿಗಳಾದ ಬಾಬು, ಮೋಹನ್, ಕುಮಾರ್, ಶಂಕರನಾರಾಯಣ್, ಸುರೇಶ್ ಮತ್ತಿತರರು ಹಾಜರಿದ್ದರು.<br /> <br /> <strong>ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ</strong><br /> ಚಿಕ್ಕಬಳ್ಳಾಪುರ: ದ್ವಿತೀಯ ಪಿಯುಸಿ ಉತ್ತೀರ್ಣರಾದ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 6 ತಿಂಗಳ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. <br /> ಆಸಕ್ತರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಸಲ್ಲಿಸಬಹುದು. ಮಾಹಿತಿಗೆ 08156-274535 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>