<p><strong>ಕವಿತಾಳ: </strong>ಪಟ್ಟಣಕ್ಕೆ ಶುದ್ದ ಕುಡಿಯುವ ನೀರು ಒದಗಿಸಲು ಸಮೀಪದ ಪರಸಾಪುರದ ಬಳಿ ನಿರ್ಮಿಸಲಾಗುತ್ತಿರುವ ಕೆರೆ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಶಾಸಕ ಜಿ.ಹಂಪಯ್ಯ ನಾಯಕ ಭೂಸೇನಾ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಯೋಜನೆಯಲ್ಲಿರುವಂತೆ ಕಾಮಗಾರಿ ಕೈಗೊಳ್ಳಬೇಕು. ತಾಂತ್ರಿಕ ಕಾರಣಗಳಿಂದ ಕಾಮಗಾರಿ ಆರಂಭಿಸಲು ವಿಳಂಬವಾಗಿದೆ. ಹೀಗಾಗಿ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಮತ್ತು ನಿರಂತರವಾಗಿ ಕಾಮಗಾರಿ ನಡೆಯಬೇಕು ಎಂದು ಸೂಚಿಸಿದರು.<br /> <br /> ಕೆರೆಯ ತಳ ಭಾಗಕ್ಕೆ ಕಾಂಕ್ರೀಟ್ ಹಾಕುವಂತೆ ತಾಲ್ಲೂಕು ಪಂಚಾಯಿತಿ ಸದಸ್ಯ ಕರಿಯಪ್ಪ ಅಡ್ಡೆ ಹೇಳಿದರು.<br /> ಕಾಮಗಾರಿ ಬಗ್ಗೆ ಯಾರಾದರೂ ತಕರಾರು ಮಾಡಿದರೆ ತಮಗೆ ಮಾಹಿತಿ ನೀಡುವಂತೆ ಹನುಮಂತಪ್ಪ ತಿಳಿಸಿದರು.<br /> ಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿದ ತಕ್ಷಣ ಯೋಜನಾಪಟ್ಟಿಯಂತೆ ಕೆಲಸ ನಿರ್ವಹಿಸಲಾಗುವುದು.<br /> <br /> ನೀರು ಶುದ್ದೀಕರಣ ಘಟಕ, ರೈಸಿಂಗ್ ಮೇನ್ ಪೈಪ್ಲೈನ್ ಮತ್ತು ಜಾಕವೆಲ್ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗವುದು ಎಂದು ಭೂಸೇನಾ ನಿಗಮದ ಅಧಿಕಾರಿ ಅಬ್ದುಲ್ ರಷೀದ್ ಹೇಳಿದರು. <br /> <br /> ಕಲ್ಮಠದ ಬಸವಲಿಂಗ ಸ್ವಾಮೀಜಿ, ಬಸ್ಸಪ್ಪ ಕಂದಗಲ್, ಕರಿಯಪ್ಪ ತೋಳ, ಡಾ.ನಾಗಪ್ಪ, ಯಮನಪ್ಪ ದಿನ್ನಿ, ಮೌನೇಶ ಪೂಜಾರಿ, ಭೀಮಸೇನಾಚಾರ್ಯ ರಾಜಪುರೋಹಿತ್, ವೆಂಕಟೇಶ ಅರಿಕೇರಿ, ಶರಣಬಸವ ಹಣಿಗಿ, ದಿಲೀಪ್ಸಾಬ್ ಮತ್ತು ಲಿಂಗರಾಜ ಇಲ್ಲೂರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ: </strong>ಪಟ್ಟಣಕ್ಕೆ ಶುದ್ದ ಕುಡಿಯುವ ನೀರು ಒದಗಿಸಲು ಸಮೀಪದ ಪರಸಾಪುರದ ಬಳಿ ನಿರ್ಮಿಸಲಾಗುತ್ತಿರುವ ಕೆರೆ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಶಾಸಕ ಜಿ.ಹಂಪಯ್ಯ ನಾಯಕ ಭೂಸೇನಾ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಯೋಜನೆಯಲ್ಲಿರುವಂತೆ ಕಾಮಗಾರಿ ಕೈಗೊಳ್ಳಬೇಕು. ತಾಂತ್ರಿಕ ಕಾರಣಗಳಿಂದ ಕಾಮಗಾರಿ ಆರಂಭಿಸಲು ವಿಳಂಬವಾಗಿದೆ. ಹೀಗಾಗಿ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಮತ್ತು ನಿರಂತರವಾಗಿ ಕಾಮಗಾರಿ ನಡೆಯಬೇಕು ಎಂದು ಸೂಚಿಸಿದರು.<br /> <br /> ಕೆರೆಯ ತಳ ಭಾಗಕ್ಕೆ ಕಾಂಕ್ರೀಟ್ ಹಾಕುವಂತೆ ತಾಲ್ಲೂಕು ಪಂಚಾಯಿತಿ ಸದಸ್ಯ ಕರಿಯಪ್ಪ ಅಡ್ಡೆ ಹೇಳಿದರು.<br /> ಕಾಮಗಾರಿ ಬಗ್ಗೆ ಯಾರಾದರೂ ತಕರಾರು ಮಾಡಿದರೆ ತಮಗೆ ಮಾಹಿತಿ ನೀಡುವಂತೆ ಹನುಮಂತಪ್ಪ ತಿಳಿಸಿದರು.<br /> ಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿದ ತಕ್ಷಣ ಯೋಜನಾಪಟ್ಟಿಯಂತೆ ಕೆಲಸ ನಿರ್ವಹಿಸಲಾಗುವುದು.<br /> <br /> ನೀರು ಶುದ್ದೀಕರಣ ಘಟಕ, ರೈಸಿಂಗ್ ಮೇನ್ ಪೈಪ್ಲೈನ್ ಮತ್ತು ಜಾಕವೆಲ್ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗವುದು ಎಂದು ಭೂಸೇನಾ ನಿಗಮದ ಅಧಿಕಾರಿ ಅಬ್ದುಲ್ ರಷೀದ್ ಹೇಳಿದರು. <br /> <br /> ಕಲ್ಮಠದ ಬಸವಲಿಂಗ ಸ್ವಾಮೀಜಿ, ಬಸ್ಸಪ್ಪ ಕಂದಗಲ್, ಕರಿಯಪ್ಪ ತೋಳ, ಡಾ.ನಾಗಪ್ಪ, ಯಮನಪ್ಪ ದಿನ್ನಿ, ಮೌನೇಶ ಪೂಜಾರಿ, ಭೀಮಸೇನಾಚಾರ್ಯ ರಾಜಪುರೋಹಿತ್, ವೆಂಕಟೇಶ ಅರಿಕೇರಿ, ಶರಣಬಸವ ಹಣಿಗಿ, ದಿಲೀಪ್ಸಾಬ್ ಮತ್ತು ಲಿಂಗರಾಜ ಇಲ್ಲೂರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>