<p><strong>ಚಾಮರಾಜನಗರ: </strong>`ಪ್ರಸ್ತುತ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟಿಸಲು ಪೈಪೋಟಿ ಏರ್ಪಟ್ಟಿದೆ. ಆದರೆ, ಸಮಾಜ ಹಿತದೃಷ್ಟಿಯಿಂದ ಗುಣಮಟ್ಟದ ಸುದ್ದಿ ಪ್ರಕಟಿಸುವುದು ಪತ್ರಕರ್ತರ ಜವಾಬ್ದಾರಿ ಯಾಗಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವ ಪ್ರಸಾದ್ ಹೇಳಿದರು.<br /> <br /> ನಗರದ ವರ್ತಕರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾನುವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.<br /> <br /> ಪತ್ರಿಕೆಗಳಲ್ಲಿ ಬಿತ್ತರವಾಗುವ ಲೇಖನಗಳಿಗೆ ರಾಜಕೀಯ ಕ್ಷೇತ್ರದ ದಿಕ್ಕು ಬದಲಿಸುವ ಶಕ್ತಿ ಇದೆ. ದೃಶ್ಯ ಮಾಧ್ಯಮ ಕಾಲಿಟ್ಟ ನಂತರ ಸುದ್ದಿ ವೇಗವಾಗಿ ಪ್ರಚಲಿತವಾಗುತ್ತಿವೆ. ಪತ್ರಿಕೆಗಳು ಹೆಚ್ಚು ಪುಟ ನೀಡಿ ಸುದ್ದಿ ಪ್ರಕಟಿಸುವ ವೇಳೆ ಗುಣಮಟ್ಟದ ಸುದ್ದಿಗೆ ಒತ್ತು ನೀಡುತ್ತಿಲ್ಲ ಎಂದು ವಿಷಾದಿಸಿದರು.<br /> <br /> ಮಾಧ್ಯಮಗಳ ಆರ್ಥಿಕ ಅಭಿವೃದ್ಧಿಗೆ ಜಾಹೀರಾತು ಪಡೆಯುವುದು ಸಹಜ. ಆದರೆ, ಸುದ್ದಿ ಪ್ರಕಟಣೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ವಿದ್ಯುನ್ಮಾನ ಮಾಧ್ಯಮಗಳು ಬಂದ ನಂತರ ಸುದ್ದಿಯ ಸ್ವರೂಪ ಬದಲಾಗಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾರಂಗ ಕೂಡ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕಿದೆ. ವ್ಯಕ್ತಿಗಳ ತೇಜೋವಧೆಗೆ ಸೃಷ್ಟಿಯಾಗಿರುವ ಪತ್ರಿಕೆಗಳನ್ನು ತಿರಸ್ಕರಿಸಬೇಕಿದೆ ಎಂದು ಹೇಳಿದರು.<br /> <br /> ಪತ್ರಿಕಾ ರಂಗದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಭದ್ರತೆ ಇಲ್ಲ. ಇದಕ್ಕಾಗಿ ಯಶಸ್ವಿನಿ ಯೋಜನೆ ಸೇರಿದಂತೆ ಇತರೇ ಸೌಲಭ್ಯ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಪ್ರಸ್ತಾಪಿ ಸಿದ್ದಾರೆ. ಏಕರೂಪ ಜಾಹೀರಾತು ವ್ಯವಸ್ಥೆ ಜಾರಿಗೆ ಅಗತ್ಯ ಕ್ರಮಕೈಗೊಳ್ಳ ಲಾಗುವುದು ಎಂದರು.<br /> <br /> ಸಂಸದ ಆರ್. ಧ್ರುವನಾರಾಯಣ ಮಾತನಾಡಿ, `ಎಲ್ಲ ಪತ್ರಕರ್ತರು ಒಟ್ಟಾಗಿ ಕಾರ್ಯ ನಿರ್ವಹಿಸಿದರೆ ಆರೋಗ್ಯಕರ ವಾತಾವರಣ ಸೃಷ್ಟಿಯಾಗುತ್ತದೆ. ಸತ್ಯ ಮರೆಮಾಚಲು ಯಾರಿಂದಲೂ ಸಾಧ್ಯವಿಲ್ಲ. ಸತ್ಯವನ್ನು ಎತ್ತಿ ಹಿಡಿಯುವ ಕೆಲಸವನ್ನು ಪತ್ರಕರ್ತರು ಮಾಡಬೇಕಿದೆ. ಜತೆಗೆ, ಅಭಿವೃದ್ಧಿಗೆ ಪೂರಕವಾದ ಸುದ್ದಿ ಪ್ರಕಟಿಸಿ' ಎಂದು ಸಲಹೆ ನೀಡಿದರು.<br /> <br /> ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, `ವ್ಯಕ್ತಿಯ ವೈಯಕ್ತಿಕ ವಿಚಾರದ ಬಗ್ಗೆ ಬರೆಯುವಂತಹ ಪತ್ರಿಕೆಗಳಿಂದ ಸುದ್ದಿಯ ಮೌಲ್ಯ ಕುಸಿಯುತ್ತದೆ. ಇಂತಹ ಪೀತ ಪತ್ರಿಕೋದ್ಯಮಕ್ಕೆ ಕಡಿವಾಣ ಹಾಕಬೇಕು' ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್ ಮಾತನಾಡಿ, `ವರದಿಗಾರಿಕೆ ಒಂದು ಜವಾಬ್ದಾರಿ ಯುತ ವೃತ್ತಿ. ಪತ್ರಕರ್ತರು ಸಾಮಾಜಿಕ ಬದಲಾವಣೆಯ ಏಜೆಂಟ್ರಂತೆ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಬೇಕು. ಆರೋಗ್ಯಕರ ಸುದ್ದಿಗೆ ಒತ್ತು ನೀಡಬೇಕು' ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಡಿಸಿಲ್ವ, ವರ್ತಕರ ಸಂಘದ ಅಧ್ಯಕ್ಷ ಎ. ಜಯಸಿಂಹ ಹಾಜರಿದ್ದರು. ಇದೇ ವೇಳೆ ಕೋಟಂಬಳ್ಳಿ ಗುರುಸ್ವಾಮಿ, ಪತ್ರಿಕಾ ಮಾರಾಟಗಾರ ಎಸ್. ರಮೇಶ್ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>`ಪ್ರಸ್ತುತ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟಿಸಲು ಪೈಪೋಟಿ ಏರ್ಪಟ್ಟಿದೆ. ಆದರೆ, ಸಮಾಜ ಹಿತದೃಷ್ಟಿಯಿಂದ ಗುಣಮಟ್ಟದ ಸುದ್ದಿ ಪ್ರಕಟಿಸುವುದು ಪತ್ರಕರ್ತರ ಜವಾಬ್ದಾರಿ ಯಾಗಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವ ಪ್ರಸಾದ್ ಹೇಳಿದರು.<br /> <br /> ನಗರದ ವರ್ತಕರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾನುವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.<br /> <br /> ಪತ್ರಿಕೆಗಳಲ್ಲಿ ಬಿತ್ತರವಾಗುವ ಲೇಖನಗಳಿಗೆ ರಾಜಕೀಯ ಕ್ಷೇತ್ರದ ದಿಕ್ಕು ಬದಲಿಸುವ ಶಕ್ತಿ ಇದೆ. ದೃಶ್ಯ ಮಾಧ್ಯಮ ಕಾಲಿಟ್ಟ ನಂತರ ಸುದ್ದಿ ವೇಗವಾಗಿ ಪ್ರಚಲಿತವಾಗುತ್ತಿವೆ. ಪತ್ರಿಕೆಗಳು ಹೆಚ್ಚು ಪುಟ ನೀಡಿ ಸುದ್ದಿ ಪ್ರಕಟಿಸುವ ವೇಳೆ ಗುಣಮಟ್ಟದ ಸುದ್ದಿಗೆ ಒತ್ತು ನೀಡುತ್ತಿಲ್ಲ ಎಂದು ವಿಷಾದಿಸಿದರು.<br /> <br /> ಮಾಧ್ಯಮಗಳ ಆರ್ಥಿಕ ಅಭಿವೃದ್ಧಿಗೆ ಜಾಹೀರಾತು ಪಡೆಯುವುದು ಸಹಜ. ಆದರೆ, ಸುದ್ದಿ ಪ್ರಕಟಣೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ವಿದ್ಯುನ್ಮಾನ ಮಾಧ್ಯಮಗಳು ಬಂದ ನಂತರ ಸುದ್ದಿಯ ಸ್ವರೂಪ ಬದಲಾಗಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾರಂಗ ಕೂಡ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕಿದೆ. ವ್ಯಕ್ತಿಗಳ ತೇಜೋವಧೆಗೆ ಸೃಷ್ಟಿಯಾಗಿರುವ ಪತ್ರಿಕೆಗಳನ್ನು ತಿರಸ್ಕರಿಸಬೇಕಿದೆ ಎಂದು ಹೇಳಿದರು.<br /> <br /> ಪತ್ರಿಕಾ ರಂಗದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಭದ್ರತೆ ಇಲ್ಲ. ಇದಕ್ಕಾಗಿ ಯಶಸ್ವಿನಿ ಯೋಜನೆ ಸೇರಿದಂತೆ ಇತರೇ ಸೌಲಭ್ಯ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಪ್ರಸ್ತಾಪಿ ಸಿದ್ದಾರೆ. ಏಕರೂಪ ಜಾಹೀರಾತು ವ್ಯವಸ್ಥೆ ಜಾರಿಗೆ ಅಗತ್ಯ ಕ್ರಮಕೈಗೊಳ್ಳ ಲಾಗುವುದು ಎಂದರು.<br /> <br /> ಸಂಸದ ಆರ್. ಧ್ರುವನಾರಾಯಣ ಮಾತನಾಡಿ, `ಎಲ್ಲ ಪತ್ರಕರ್ತರು ಒಟ್ಟಾಗಿ ಕಾರ್ಯ ನಿರ್ವಹಿಸಿದರೆ ಆರೋಗ್ಯಕರ ವಾತಾವರಣ ಸೃಷ್ಟಿಯಾಗುತ್ತದೆ. ಸತ್ಯ ಮರೆಮಾಚಲು ಯಾರಿಂದಲೂ ಸಾಧ್ಯವಿಲ್ಲ. ಸತ್ಯವನ್ನು ಎತ್ತಿ ಹಿಡಿಯುವ ಕೆಲಸವನ್ನು ಪತ್ರಕರ್ತರು ಮಾಡಬೇಕಿದೆ. ಜತೆಗೆ, ಅಭಿವೃದ್ಧಿಗೆ ಪೂರಕವಾದ ಸುದ್ದಿ ಪ್ರಕಟಿಸಿ' ಎಂದು ಸಲಹೆ ನೀಡಿದರು.<br /> <br /> ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, `ವ್ಯಕ್ತಿಯ ವೈಯಕ್ತಿಕ ವಿಚಾರದ ಬಗ್ಗೆ ಬರೆಯುವಂತಹ ಪತ್ರಿಕೆಗಳಿಂದ ಸುದ್ದಿಯ ಮೌಲ್ಯ ಕುಸಿಯುತ್ತದೆ. ಇಂತಹ ಪೀತ ಪತ್ರಿಕೋದ್ಯಮಕ್ಕೆ ಕಡಿವಾಣ ಹಾಕಬೇಕು' ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್ ಮಾತನಾಡಿ, `ವರದಿಗಾರಿಕೆ ಒಂದು ಜವಾಬ್ದಾರಿ ಯುತ ವೃತ್ತಿ. ಪತ್ರಕರ್ತರು ಸಾಮಾಜಿಕ ಬದಲಾವಣೆಯ ಏಜೆಂಟ್ರಂತೆ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಬೇಕು. ಆರೋಗ್ಯಕರ ಸುದ್ದಿಗೆ ಒತ್ತು ನೀಡಬೇಕು' ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಡಿಸಿಲ್ವ, ವರ್ತಕರ ಸಂಘದ ಅಧ್ಯಕ್ಷ ಎ. ಜಯಸಿಂಹ ಹಾಜರಿದ್ದರು. ಇದೇ ವೇಳೆ ಕೋಟಂಬಳ್ಳಿ ಗುರುಸ್ವಾಮಿ, ಪತ್ರಿಕಾ ಮಾರಾಟಗಾರ ಎಸ್. ರಮೇಶ್ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>