<p>ಬ್ರಹ್ಮಾವರ: ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಆಂಗ್ಲ ಭಾಷೆಯ ವ್ಯಾಮೋಹದ ಕಾರಣ ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಸಿಯುತ್ತಿದೆ. ಆದರೆ ಗುಣಾತ್ಮಕ ಶಿಕ್ಷಣ ದೊರೆಯುವಲ್ಲಿ ಮಕ್ಕಳ ಸಂಖ್ಯೆ ಇನ್ನೂ ಕುಸಿದಿಲ್ಲ ಎಂದು ಚೇರ್ಕಾಡಿ ಕ್ಲಸ್ಟರ್ನ ಸಿ.ಆರ್.ಪಿ ರೂಬಿ ಪಿಂಟೋ ಹೇಳಿದರು.<br /> <br /> ಆರೂರು ವಿಷ್ಣುಮೂರ್ತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಪುಸ್ತಕ ವಿತರಣಾ ಸಮಾರಂಭದಲ್ಲಿ ಕುಡುರ್ಂಜೆ ಬಾಲಕೃಷ್ಣ ಶೆಟ್ಟಿ ಅವರು ನೀಡಿದ ನೋಟ್ ಪುಸ್ತಕ ಮತ್ತು ಪಠ್ಯ ಪುಸ್ತಕ ವಿತರಿಸಿ ಅವರು ಮಾತನಾಡಿದರು.<br /> <br /> ಗುಣಾತ್ಮಕ ಶಿಕ್ಷಣ ನೀಡದಿದ್ದರೂ, ಇಂದು ಕೆಲವು ಶಿಕ್ಷಣ ಸಂಸ್ಥೆಗಳು ಪೋಷಕರಿಗೆ ಮತ್ತು ಮಕ್ಕಳಿಗೆ ಹಲವು ಆಮಿಷ ನೀಡಿ ಶಿಕ್ಷಣದ ವ್ಯವಸ್ಥೆಯನ್ನು ಹಾಳು ಮಾಡಿವೆ. ಇದಕ್ಕೆ ಮರುಳಾಗದೇ ಗುಣಾತ್ಮಕ ಶಿಕ್ಷಣ ಎಲ್ಲಿ ದೊರೆಯುತ್ತದೆಯೋ, ಅಲ್ಲಿಗೆ ಮಕ್ಕಳನ್ನು ಕಳುಹಿಸುವಂತೆ ಅವರು ಪೋಷಕರಿಗೆ ಸಲಹೆ ನೀಡಿದರು. <br /> <br /> ಸಿಂಡಿಕೇಟ್ ಬ್ಯಾಂಕ್ನ ನಿವೃತ್ತ ಅಧಿಕಾರಿ ಎ.ಹೆಬ್ಬಾರ್ ಮಾತನಾಡಿ `ಯುದ್ಧವೆಂಬ ಅಜ್ಞಾನವನ್ನು ಹೋಗಲಾಡಿಸುವ ಗುರು ಹಿರಿಯರ ಬಗ್ಗೆ ಗೌರವವನ್ನು ಇಟ್ಟುಕೊಳ್ಳುವಂತೆ ಮಕ್ಕಳಿಗೆ ಕಿವಿ ಮಾತು ಹೇಳಿದರು.<br /> ಕುಂಜಾಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುರ್ಡುಂಜೆ ರಘುರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.<br /> <br /> ಮುಖ್ಯ ಅತಿಥಿಗಳಾಗಿ ಶಾಲೆಯ ಸಂಚಾಲಕ ಎ.ಎಂ.ಮೋಹನ್ ರಾವ್, ಸಮನ್ವಯ ಶಿಕ್ಷಣಾಧಿಕಾರಿ ರಾಜಶೇಖರ್ ಶೆಟ್ಟಿ, ಶಾಲೆಯ ಅಧ್ಯಾಪಕ ಸತೀಶ್ ಶೆಟ್ಟಿ, ಗೌರವ ಶಿಕ್ಷಕಿಯರಾದ ಸುಪ್ರಿತಾ, ರೇಣುಕಾ, ದಿವ್ಯಾ ಉಪಸ್ಥಿತರಿದ್ದರು.<br /> <br /> ಶಾಲಾ ಮುಖ್ಯ ಶಿಕ್ಷಕ ಎ.ಎಂ.ಪದ್ಮನಾಭ ರಾವ್ ಸ್ವಾಗತಿಸಿದರು. ಅಧ್ಯಾಪಕ ಸಂದೀಪ್ ಶೆಟ್ಟಿ ನಿರೂಪಿಸಿ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ರಹ್ಮಾವರ: ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಆಂಗ್ಲ ಭಾಷೆಯ ವ್ಯಾಮೋಹದ ಕಾರಣ ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಸಿಯುತ್ತಿದೆ. ಆದರೆ ಗುಣಾತ್ಮಕ ಶಿಕ್ಷಣ ದೊರೆಯುವಲ್ಲಿ ಮಕ್ಕಳ ಸಂಖ್ಯೆ ಇನ್ನೂ ಕುಸಿದಿಲ್ಲ ಎಂದು ಚೇರ್ಕಾಡಿ ಕ್ಲಸ್ಟರ್ನ ಸಿ.ಆರ್.ಪಿ ರೂಬಿ ಪಿಂಟೋ ಹೇಳಿದರು.<br /> <br /> ಆರೂರು ವಿಷ್ಣುಮೂರ್ತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಪುಸ್ತಕ ವಿತರಣಾ ಸಮಾರಂಭದಲ್ಲಿ ಕುಡುರ್ಂಜೆ ಬಾಲಕೃಷ್ಣ ಶೆಟ್ಟಿ ಅವರು ನೀಡಿದ ನೋಟ್ ಪುಸ್ತಕ ಮತ್ತು ಪಠ್ಯ ಪುಸ್ತಕ ವಿತರಿಸಿ ಅವರು ಮಾತನಾಡಿದರು.<br /> <br /> ಗುಣಾತ್ಮಕ ಶಿಕ್ಷಣ ನೀಡದಿದ್ದರೂ, ಇಂದು ಕೆಲವು ಶಿಕ್ಷಣ ಸಂಸ್ಥೆಗಳು ಪೋಷಕರಿಗೆ ಮತ್ತು ಮಕ್ಕಳಿಗೆ ಹಲವು ಆಮಿಷ ನೀಡಿ ಶಿಕ್ಷಣದ ವ್ಯವಸ್ಥೆಯನ್ನು ಹಾಳು ಮಾಡಿವೆ. ಇದಕ್ಕೆ ಮರುಳಾಗದೇ ಗುಣಾತ್ಮಕ ಶಿಕ್ಷಣ ಎಲ್ಲಿ ದೊರೆಯುತ್ತದೆಯೋ, ಅಲ್ಲಿಗೆ ಮಕ್ಕಳನ್ನು ಕಳುಹಿಸುವಂತೆ ಅವರು ಪೋಷಕರಿಗೆ ಸಲಹೆ ನೀಡಿದರು. <br /> <br /> ಸಿಂಡಿಕೇಟ್ ಬ್ಯಾಂಕ್ನ ನಿವೃತ್ತ ಅಧಿಕಾರಿ ಎ.ಹೆಬ್ಬಾರ್ ಮಾತನಾಡಿ `ಯುದ್ಧವೆಂಬ ಅಜ್ಞಾನವನ್ನು ಹೋಗಲಾಡಿಸುವ ಗುರು ಹಿರಿಯರ ಬಗ್ಗೆ ಗೌರವವನ್ನು ಇಟ್ಟುಕೊಳ್ಳುವಂತೆ ಮಕ್ಕಳಿಗೆ ಕಿವಿ ಮಾತು ಹೇಳಿದರು.<br /> ಕುಂಜಾಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುರ್ಡುಂಜೆ ರಘುರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.<br /> <br /> ಮುಖ್ಯ ಅತಿಥಿಗಳಾಗಿ ಶಾಲೆಯ ಸಂಚಾಲಕ ಎ.ಎಂ.ಮೋಹನ್ ರಾವ್, ಸಮನ್ವಯ ಶಿಕ್ಷಣಾಧಿಕಾರಿ ರಾಜಶೇಖರ್ ಶೆಟ್ಟಿ, ಶಾಲೆಯ ಅಧ್ಯಾಪಕ ಸತೀಶ್ ಶೆಟ್ಟಿ, ಗೌರವ ಶಿಕ್ಷಕಿಯರಾದ ಸುಪ್ರಿತಾ, ರೇಣುಕಾ, ದಿವ್ಯಾ ಉಪಸ್ಥಿತರಿದ್ದರು.<br /> <br /> ಶಾಲಾ ಮುಖ್ಯ ಶಿಕ್ಷಕ ಎ.ಎಂ.ಪದ್ಮನಾಭ ರಾವ್ ಸ್ವಾಗತಿಸಿದರು. ಅಧ್ಯಾಪಕ ಸಂದೀಪ್ ಶೆಟ್ಟಿ ನಿರೂಪಿಸಿ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>