<p><strong>ಬೆಂಗಳೂರು: </strong>`ದೇಶದಲ್ಲಿರುವ ಬಹುಸಂಖ್ಯೆಯ ಹೊರ ಗುತ್ತಿಗೆ ಕಾರ್ಮಿಕರನ್ನು ನಿರ್ಲಕ್ಷಿಸದೇ, ಅವರನ್ನೂ ಕಾಯಂ ಉದ್ಯೋಗಿಗಳಂತೆಯೇ ನಡೆಸಿಕೊಳ್ಳಬೇಕು~ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.<br /> <br /> ನಗರದಲ್ಲಿ ಮಂಗಳವಾರ ನಡೆದ ಕರ್ನಾಟಕ ಮಾಲೀಕರ ಸಂಘದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> `ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೂ ಸೇರಿದಂತೆ ಬ್ಯಾಂಕಿಂಗ್ ಮತ್ತು ಖಾಸಗಿ ಕಂಪೆನಿಗಳ ಹೊರ ಗುತ್ತಿಗೆಯ ಕಾರ್ಮಿಕರನ್ನು ನಿರ್ಲಕ್ಷಿಸಲಾಗುತ್ತಿದೆ. ಉದ್ಯೋಗದಾತರು ತಾವೂ ಬದುಕುವುದರ ಜೊತೆಗೆ ಕಾರ್ಮಿಕರ ಹಿತವನ್ನೂ ಕಾಯುವ ಕೆಲಸವಾಗಬೇಕು. ಕಾರ್ಮಿಕರಿಗೆ ಅನ್ಯಾಯವಾಗುವುದನ್ನು ತಡೆಯಲು ಉದ್ಯೋಗದಾತರು ಮುಂದಾಗಬೇಕು~ ಎಂದು ಅವರು ಹೇಳಿದರು.<br /> <br /> `ತಮ್ಮ ಕಂಪೆನಿಗಳಲ್ಲಿ ದುಡಿಯುವ ಕಾರ್ಮಿಕರ ಕೆಲಸಕ್ಕೆ ಸಮರ್ಪಕ ವೇತನ ನೀಡಿದರೆ ಸಾಕು, ಕಾರ್ಮಿಕರು ತೃಪ್ತಿಯಿಂದ ಕೆಲಸ ಮಾಡುತ್ತಾರೆ. ಕಾರ್ಮಿಕರಿಗೆ ಸಮರ್ಪಕ ವೇತನ ಸೇರಿದಂತೆ ಕನಿಷ್ಠ ಅಗತ್ಯಗಳನ್ನು ಒದಗಿಸಲು ಉದ್ಯೋಗದಾತರು ಬದ್ಧರಾಗಬೇಕು~ ಎಂದು ಅವರು ನುಡಿದರು.<br /> <br /> `ಒಂದು ಕಾಲದಲ್ಲಿ ಬೆಂಗಳೂರು ಮಾಹಿತಿ ತಂತ್ರಜ್ಞಾನದಲ್ಲಿ ದೊಡ್ಡ ಹೆಸರು ಮಾಡಿತ್ತು. ಆದರೆ ಈಗ ಆ ಹೆಸರು ಉಳಿದುಕೊಂಡಿಲ್ಲ. ಕೊರಿಯಾ, ಚೀನಾಗಳಲ್ಲಿ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ಈ ದೇಶಗಳಿಗೆ ಪೈಪೋಟಿ ನೀಡಲು ಭಾರತದ ಯುವ ಜನತೆಯನ್ನು ಸಿದ್ಧಗೊಳಿಸಬೇಕಿದೆ~ ಎಂದು ಅವರು ತಿಳಿಸಿದರು.<br /> <br /> ಗೋಕುಲ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಆರ್.ಜಯರಾಂ, ಕರ್ನಾಟಕ ಮಾಲೀಕರ ಸಂಘದ ಅಧ್ಯಕ್ಷ ಬಿ.ಸಿ.ಪ್ರಭಾಕರ್, ಉಪಾಧ್ಯಕ್ಷ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ದೇಶದಲ್ಲಿರುವ ಬಹುಸಂಖ್ಯೆಯ ಹೊರ ಗುತ್ತಿಗೆ ಕಾರ್ಮಿಕರನ್ನು ನಿರ್ಲಕ್ಷಿಸದೇ, ಅವರನ್ನೂ ಕಾಯಂ ಉದ್ಯೋಗಿಗಳಂತೆಯೇ ನಡೆಸಿಕೊಳ್ಳಬೇಕು~ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.<br /> <br /> ನಗರದಲ್ಲಿ ಮಂಗಳವಾರ ನಡೆದ ಕರ್ನಾಟಕ ಮಾಲೀಕರ ಸಂಘದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> `ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೂ ಸೇರಿದಂತೆ ಬ್ಯಾಂಕಿಂಗ್ ಮತ್ತು ಖಾಸಗಿ ಕಂಪೆನಿಗಳ ಹೊರ ಗುತ್ತಿಗೆಯ ಕಾರ್ಮಿಕರನ್ನು ನಿರ್ಲಕ್ಷಿಸಲಾಗುತ್ತಿದೆ. ಉದ್ಯೋಗದಾತರು ತಾವೂ ಬದುಕುವುದರ ಜೊತೆಗೆ ಕಾರ್ಮಿಕರ ಹಿತವನ್ನೂ ಕಾಯುವ ಕೆಲಸವಾಗಬೇಕು. ಕಾರ್ಮಿಕರಿಗೆ ಅನ್ಯಾಯವಾಗುವುದನ್ನು ತಡೆಯಲು ಉದ್ಯೋಗದಾತರು ಮುಂದಾಗಬೇಕು~ ಎಂದು ಅವರು ಹೇಳಿದರು.<br /> <br /> `ತಮ್ಮ ಕಂಪೆನಿಗಳಲ್ಲಿ ದುಡಿಯುವ ಕಾರ್ಮಿಕರ ಕೆಲಸಕ್ಕೆ ಸಮರ್ಪಕ ವೇತನ ನೀಡಿದರೆ ಸಾಕು, ಕಾರ್ಮಿಕರು ತೃಪ್ತಿಯಿಂದ ಕೆಲಸ ಮಾಡುತ್ತಾರೆ. ಕಾರ್ಮಿಕರಿಗೆ ಸಮರ್ಪಕ ವೇತನ ಸೇರಿದಂತೆ ಕನಿಷ್ಠ ಅಗತ್ಯಗಳನ್ನು ಒದಗಿಸಲು ಉದ್ಯೋಗದಾತರು ಬದ್ಧರಾಗಬೇಕು~ ಎಂದು ಅವರು ನುಡಿದರು.<br /> <br /> `ಒಂದು ಕಾಲದಲ್ಲಿ ಬೆಂಗಳೂರು ಮಾಹಿತಿ ತಂತ್ರಜ್ಞಾನದಲ್ಲಿ ದೊಡ್ಡ ಹೆಸರು ಮಾಡಿತ್ತು. ಆದರೆ ಈಗ ಆ ಹೆಸರು ಉಳಿದುಕೊಂಡಿಲ್ಲ. ಕೊರಿಯಾ, ಚೀನಾಗಳಲ್ಲಿ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ಈ ದೇಶಗಳಿಗೆ ಪೈಪೋಟಿ ನೀಡಲು ಭಾರತದ ಯುವ ಜನತೆಯನ್ನು ಸಿದ್ಧಗೊಳಿಸಬೇಕಿದೆ~ ಎಂದು ಅವರು ತಿಳಿಸಿದರು.<br /> <br /> ಗೋಕುಲ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಆರ್.ಜಯರಾಂ, ಕರ್ನಾಟಕ ಮಾಲೀಕರ ಸಂಘದ ಅಧ್ಯಕ್ಷ ಬಿ.ಸಿ.ಪ್ರಭಾಕರ್, ಉಪಾಧ್ಯಕ್ಷ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>