<p><strong>ಕೊಪ್ಪಳ: </strong>ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ವಸತಿ ನಿಲಯಗಳಿಗೆ ಮೂಲಭೂತ ಸಾಮಗ್ರಿ ಪೂರೈಕೆಗಾಗಿ ತಮಗೆ ನೀಡಿರುವ ಟೆಂಡರ್ ಅನ್ನು ರಾತ್ರೋರಾತ್ರಿ ರದ್ದುಗೊಳಿಸಿ, ಬೇರೆಯವರಿಗೆ ನೀಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿ ವರ್ತಕರೊಬ್ಬರು ಮಾತಿನ ಚಕಮಕಿ ನಡೆಸಿದ ಘಟನೆ ಬುಧವಾರ ನಡೆದಿದೆ.<br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎನ್.ಬಿಲ್ಗಾರ್ ಅವರಿಗೆ ದೂರು ಸಲ್ಲಿಸಿದ ಇಲ್ಲಿನ ಅಶ್ವಿನಿ ಟ್ರೇಡಿಂಗ್ ಕಂಪನಿಯ ಸಾಗರ್ ಚಿಂದೆ ಎಂಬುವವರು, ಸಾಮಗ್ರಿ ಪೂರೈಸುವ ಗುತ್ತಿಗೆಯನ್ನು ತಮಗೆ ನೀಡಿರುವ ಕುರಿತಾದ ದಾಖಲೆಗಳನ್ನು ಹಾಜರು ಪಡಿಸುವಂತೆ ಪಟ್ಟು ಹಿಡಿದರು.<br /> <br /> ಮಾ. 9ರಂದು ಜರುಗಿದ ಸಾಮಾನ್ಯ ಸಭೆಯಲ್ಲಿ ಈ ತಮಗೇ ಈ ಗುತ್ತಿಗೆ ನೀಡಬೇಕು ಎಂಬ ಬಗ್ಗೆ ಸರ್ವಾನುಮತದ ತೀರ್ಮಾನವಾಗಿದೆ. ಆದರೆ, ಈಗ ಸಂಬಂಧಪಟ್ಟ ಕಡತ ಸಿಗುತ್ತಿಲ್ಲ ಎಂಬ ನೆಪ ಹೇಳಲಾಗುತ್ತಿದೆ. ತಮಗಾಗಿರುವ ಈ ಟೆಂಡರನ್ನು ತಿದ್ದಿ, ಬೇರೆಯವರಿಗೆ ನೀಡುವ ಸಂಚು ಈ ಎಲ್ಲಾ ಬೆಳವಣಿಗೆ ಹಿಂದಡಗಿದೆ ಎಂದು ಅವರು ನಂತರ ಮಾಧ್ಯಮ ಪ್ರತಿನಿಧಿಗಳ ಮುಂದೆ ದೂರಿದರು.<br /> <br /> ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಮೂರ್ತಿ ಅವರು ಆನೆಗೊಂದಿ ಉತ್ಸವ ತಯಾರಿ ಹಿನ್ನೆಲೆಯಲ್ಲಿ ಆನೆಗೊಂದಿಗೆ ತೆರಳಿದ್ದು, ಅವರು ಬಂದ ನಂತರ ಕಡತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಭರವಸೆ ನೀಡಿದರು.<br /> <br /> ಸ್ಪಷ್ಟನೆ: ಈ ಪ್ರಕರಣ ಕುರಿತು ‘ಪ್ರಜಾವಾಣಿ’ ಯೊಂದಿಗೆ ಮಾತನಾಡಿದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಮೂರ್ತಿ, ಅಶ್ವಿನಿ ಟ್ರೇಡಿಂಗ್ ಕಂಪೆನಿಗೆ ಈ ಸಂಬಂಧ ಯಾವುದೇ ಗುತ್ತಿಗೆ ನೀಡಿಲ್ಲ ಹಾಗೂ ಇಡೀ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.<br /> <br /> ಕರ್ನಾಟಕ ಪಾರದರ್ಶಕತೆ ಕಾಯ್ದೆ ಅನ್ವಯ ಇ-ಪ್ರೊಕ್ಯೂರ್ಮೆಂಟ್ ಗಾಗಿ ಟೆಂಡರ್ ಕರೆದಾಗ ಮೂರಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಟೆಂಡರ್ ಅರ್ಜಿಗಳು ಸಲ್ಲಿಕೆಯಾಗಿರಬೇಕು. ಈ ಪ್ರಕರಣದಲ್ಲಿ ಕೇವಲ ಎರಡೇ ಅರ್ಜಿಗಳು ಬಂದಿದ್ದವು. ಇಂತಹ ಸಂದರ್ಭದಲ್ಲಿ ಸ್ಪರ್ಧಾತ್ಮಕ ಬೆಲೆ ನಿರ್ಧರಿಸಿವುದು ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಸದರಿ ಟೆಂಡರ್ಅನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದರು.<br /> <br /> ಅಲ್ಲದೇ, ಯಾವುದೇ ನಿರ್ದಿಷ್ಟ ಕಾರಣವನ್ನು ನೀಡದೆಯೇ ಯಾವುದೇ ಟೆಂಡರ್ ಅರ್ಜಿಯನ್ನು ತಿರಸ್ಕರಿಸುವ ಅಧಿಕಾರ ತಮಗೆ ಇದೆ ಎಂದೂ ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ವಸತಿ ನಿಲಯಗಳಿಗೆ ಮೂಲಭೂತ ಸಾಮಗ್ರಿ ಪೂರೈಕೆಗಾಗಿ ತಮಗೆ ನೀಡಿರುವ ಟೆಂಡರ್ ಅನ್ನು ರಾತ್ರೋರಾತ್ರಿ ರದ್ದುಗೊಳಿಸಿ, ಬೇರೆಯವರಿಗೆ ನೀಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿ ವರ್ತಕರೊಬ್ಬರು ಮಾತಿನ ಚಕಮಕಿ ನಡೆಸಿದ ಘಟನೆ ಬುಧವಾರ ನಡೆದಿದೆ.<br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎನ್.ಬಿಲ್ಗಾರ್ ಅವರಿಗೆ ದೂರು ಸಲ್ಲಿಸಿದ ಇಲ್ಲಿನ ಅಶ್ವಿನಿ ಟ್ರೇಡಿಂಗ್ ಕಂಪನಿಯ ಸಾಗರ್ ಚಿಂದೆ ಎಂಬುವವರು, ಸಾಮಗ್ರಿ ಪೂರೈಸುವ ಗುತ್ತಿಗೆಯನ್ನು ತಮಗೆ ನೀಡಿರುವ ಕುರಿತಾದ ದಾಖಲೆಗಳನ್ನು ಹಾಜರು ಪಡಿಸುವಂತೆ ಪಟ್ಟು ಹಿಡಿದರು.<br /> <br /> ಮಾ. 9ರಂದು ಜರುಗಿದ ಸಾಮಾನ್ಯ ಸಭೆಯಲ್ಲಿ ಈ ತಮಗೇ ಈ ಗುತ್ತಿಗೆ ನೀಡಬೇಕು ಎಂಬ ಬಗ್ಗೆ ಸರ್ವಾನುಮತದ ತೀರ್ಮಾನವಾಗಿದೆ. ಆದರೆ, ಈಗ ಸಂಬಂಧಪಟ್ಟ ಕಡತ ಸಿಗುತ್ತಿಲ್ಲ ಎಂಬ ನೆಪ ಹೇಳಲಾಗುತ್ತಿದೆ. ತಮಗಾಗಿರುವ ಈ ಟೆಂಡರನ್ನು ತಿದ್ದಿ, ಬೇರೆಯವರಿಗೆ ನೀಡುವ ಸಂಚು ಈ ಎಲ್ಲಾ ಬೆಳವಣಿಗೆ ಹಿಂದಡಗಿದೆ ಎಂದು ಅವರು ನಂತರ ಮಾಧ್ಯಮ ಪ್ರತಿನಿಧಿಗಳ ಮುಂದೆ ದೂರಿದರು.<br /> <br /> ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಮೂರ್ತಿ ಅವರು ಆನೆಗೊಂದಿ ಉತ್ಸವ ತಯಾರಿ ಹಿನ್ನೆಲೆಯಲ್ಲಿ ಆನೆಗೊಂದಿಗೆ ತೆರಳಿದ್ದು, ಅವರು ಬಂದ ನಂತರ ಕಡತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಭರವಸೆ ನೀಡಿದರು.<br /> <br /> ಸ್ಪಷ್ಟನೆ: ಈ ಪ್ರಕರಣ ಕುರಿತು ‘ಪ್ರಜಾವಾಣಿ’ ಯೊಂದಿಗೆ ಮಾತನಾಡಿದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಮೂರ್ತಿ, ಅಶ್ವಿನಿ ಟ್ರೇಡಿಂಗ್ ಕಂಪೆನಿಗೆ ಈ ಸಂಬಂಧ ಯಾವುದೇ ಗುತ್ತಿಗೆ ನೀಡಿಲ್ಲ ಹಾಗೂ ಇಡೀ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.<br /> <br /> ಕರ್ನಾಟಕ ಪಾರದರ್ಶಕತೆ ಕಾಯ್ದೆ ಅನ್ವಯ ಇ-ಪ್ರೊಕ್ಯೂರ್ಮೆಂಟ್ ಗಾಗಿ ಟೆಂಡರ್ ಕರೆದಾಗ ಮೂರಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಟೆಂಡರ್ ಅರ್ಜಿಗಳು ಸಲ್ಲಿಕೆಯಾಗಿರಬೇಕು. ಈ ಪ್ರಕರಣದಲ್ಲಿ ಕೇವಲ ಎರಡೇ ಅರ್ಜಿಗಳು ಬಂದಿದ್ದವು. ಇಂತಹ ಸಂದರ್ಭದಲ್ಲಿ ಸ್ಪರ್ಧಾತ್ಮಕ ಬೆಲೆ ನಿರ್ಧರಿಸಿವುದು ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಸದರಿ ಟೆಂಡರ್ಅನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದರು.<br /> <br /> ಅಲ್ಲದೇ, ಯಾವುದೇ ನಿರ್ದಿಷ್ಟ ಕಾರಣವನ್ನು ನೀಡದೆಯೇ ಯಾವುದೇ ಟೆಂಡರ್ ಅರ್ಜಿಯನ್ನು ತಿರಸ್ಕರಿಸುವ ಅಧಿಕಾರ ತಮಗೆ ಇದೆ ಎಂದೂ ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>