<p><strong>ಬೆಂಗಳೂರು:</strong> ಕೇಂದ್ರ ಗುಪ್ತಚರ ಇಲಾಖೆಯು ಯಾವ ಕಾಯ್ದೆಯ ಅಡಿ ಕೆಲಸ ಮಾಡುತ್ತಿದೆ ಎಂಬ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ಆದೇಶಿಸಿದೆ. <br /> <br /> ಇಲಾಖೆಯು ನಿರ್ದಿಷ್ಟ ಕಾಯ್ದೆ ಅಡಿ ರಚನೆಗೊಂಡಿಲ್ಲ. ಆದುದರಿಂದ ದೇಶದ ಆಂತರಿಕ ಭದ್ರತೆಗೆ ಧಕ್ಕೆ ಉಂಟಾಗುತ್ತಿದ್ದು, ಈ ಕುರಿತು ಸೂಕ್ತ ಕ್ರಮಕ್ಕೆ ಗೃಹ ಸಚಿವಾಲಯಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಮಾಹಿತಿ ಬಯಸಿದೆ.<br /> <br /> ಈ ಪ್ರಕರಣದ ಮಧ್ಯೆ ಹೈಕೋರ್ಟ್ ಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸಬಹುದೇ ಎಂಬ ಮಾಹಿತಿ ನೀಡುವಂತೆಯೂ ಪೀಠವು ಕೇಂದ್ರಕ್ಕೆ ಮೌಖಿಕವಾಗಿ ಸೂಚಿಸಿದೆ.<br /> <br /> ಇಲಾಖೆಯ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಸಲ್ಲಿಸಿರುವ ಅರ್ಜಿ ಇದಾಗಿದೆ. ಸಿಬಿಐ, ಗಡಿ ಭದ್ರತಾ ಪಡೆ ಸೇರಿದಂತೆ ಎಲ್ಲ ತನಿಖಾ ದಳಗಳು ಹಾಗೂ ಭದ್ರತಾ ಪಡೆಗಳು ಸಂಬಂಧಿತ ಕಾಯ್ದೆ ಅಡಿ ರಚನೆಗೊಂಡಿವೆ. <br /> <br /> ಇವುಗಳು ಶಾಸನಬದ್ಧವಾಗಿ ರೂಪಿತಗೊಂಡಿವೆ. ಆದರೆ ಗುಪ್ತಚರ ಇಲಾಖೆ ಇದರಿಂದ ಹೊರತಾಗಿದೆ ಎನ್ನುವುದು ಅರ್ಜಿದಾರರ ಆರೋಪ. ಮುಂಬೈನಲ್ಲಿ 26/11ರಂದು ನಡೆದ ದಾಳಿಯನ್ನು ಅರ್ಜಿಯಲ್ಲಿ ಉಲ್ಲೇಖಿಸಿರುವ ಅವರು, ಇಲಾಖೆಯ ವೈಫಲ್ಯವೇ ಇಂತಹ ಘಟನೆ ಸಂಭವಿಸಲು ಕಾರಣ ಎಂದಿದ್ದಾರೆ. ವಿಚಾರಣೆಯನ್ನು ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೇಂದ್ರ ಗುಪ್ತಚರ ಇಲಾಖೆಯು ಯಾವ ಕಾಯ್ದೆಯ ಅಡಿ ಕೆಲಸ ಮಾಡುತ್ತಿದೆ ಎಂಬ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ಆದೇಶಿಸಿದೆ. <br /> <br /> ಇಲಾಖೆಯು ನಿರ್ದಿಷ್ಟ ಕಾಯ್ದೆ ಅಡಿ ರಚನೆಗೊಂಡಿಲ್ಲ. ಆದುದರಿಂದ ದೇಶದ ಆಂತರಿಕ ಭದ್ರತೆಗೆ ಧಕ್ಕೆ ಉಂಟಾಗುತ್ತಿದ್ದು, ಈ ಕುರಿತು ಸೂಕ್ತ ಕ್ರಮಕ್ಕೆ ಗೃಹ ಸಚಿವಾಲಯಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಮಾಹಿತಿ ಬಯಸಿದೆ.<br /> <br /> ಈ ಪ್ರಕರಣದ ಮಧ್ಯೆ ಹೈಕೋರ್ಟ್ ಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸಬಹುದೇ ಎಂಬ ಮಾಹಿತಿ ನೀಡುವಂತೆಯೂ ಪೀಠವು ಕೇಂದ್ರಕ್ಕೆ ಮೌಖಿಕವಾಗಿ ಸೂಚಿಸಿದೆ.<br /> <br /> ಇಲಾಖೆಯ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಸಲ್ಲಿಸಿರುವ ಅರ್ಜಿ ಇದಾಗಿದೆ. ಸಿಬಿಐ, ಗಡಿ ಭದ್ರತಾ ಪಡೆ ಸೇರಿದಂತೆ ಎಲ್ಲ ತನಿಖಾ ದಳಗಳು ಹಾಗೂ ಭದ್ರತಾ ಪಡೆಗಳು ಸಂಬಂಧಿತ ಕಾಯ್ದೆ ಅಡಿ ರಚನೆಗೊಂಡಿವೆ. <br /> <br /> ಇವುಗಳು ಶಾಸನಬದ್ಧವಾಗಿ ರೂಪಿತಗೊಂಡಿವೆ. ಆದರೆ ಗುಪ್ತಚರ ಇಲಾಖೆ ಇದರಿಂದ ಹೊರತಾಗಿದೆ ಎನ್ನುವುದು ಅರ್ಜಿದಾರರ ಆರೋಪ. ಮುಂಬೈನಲ್ಲಿ 26/11ರಂದು ನಡೆದ ದಾಳಿಯನ್ನು ಅರ್ಜಿಯಲ್ಲಿ ಉಲ್ಲೇಖಿಸಿರುವ ಅವರು, ಇಲಾಖೆಯ ವೈಫಲ್ಯವೇ ಇಂತಹ ಘಟನೆ ಸಂಭವಿಸಲು ಕಾರಣ ಎಂದಿದ್ದಾರೆ. ವಿಚಾರಣೆಯನ್ನು ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>