<p><strong>ಗುಲ್ಬರ್ಗ:</strong> ಜಿಲ್ಲೆಯ ವಿವಿಧ ಶಾಲೆಗಳಿಂದ ವರ್ಗಾವಣೆಗೊಂಡ ಶಿಕ್ಷಕರನ್ನು ಪರ್ಯಾಯ ವ್ಯವಸ್ಥೆ ಆಗುವವರೆಗೆ ಬೇರೆ ಜಿಲ್ಲೆಗೆ ಬಿಡುಗಡೆ ಮಾಡಬಾರದು ಎಂದು ಬುಧವಾರ ಇಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಣಯ ಕೈಗೊಳ್ಳ ಲಾಯಿತು.<br /> <br /> ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಶಾಸಕರು ತೀವ್ರ ಕಳವಳ ವ್ಯಕ್ತಪಡಿಸಿದಾಗ, ಈ ನಿರ್ಧಾರ ತೆಗೆದುಕೊಳ್ಳಲಾಯಿತು.<br /> <br /> ಶಿಕ್ಷಕರ ಕೊರತೆ ವಿವರ ನೀಡಿದ ಡಿಡಿಪಿಐ ಬಿ.ಎಸ್. ಪರಮೇಶ, ಅತಿಥಿ ಶಿಕ್ಷಕರ ಹುದ್ದೆಗಳ ಪೈಕಿ ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಗಣಿತ ವಿಷಯಗಳ ಶಿಕ್ಷಕರು ಸಿಗುತ್ತಿಲ್ಲ ಎಂದು ತಿಳಿಸಿದಾಗ, ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಒಂದೆಡೆ ಇರುವ ಶಿಕ್ಷಕರನ್ನು ಬೇರೆ ಕಡೆ ವರ್ಗಾವಣೆ ಮಾಡುತ್ತೀರಿ. ಆ ಖಾಲಿಯಾದ ಸ್ಥಾನಕ್ಕೆ ಇನ್ನೊಬ್ಬ ಶಿಕ್ಷಕರನ್ನು ನೇಮಕ ಮಾಡುವುದಿಲ್ಲ. ಹೀಗಾದರೆ ಗ್ರಾಮೀಣ ಭಾಗದ ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳ ಗತಿ ಏನು? ಎಂದು ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ ಆಕ್ರೋಶದಿಂದ ಪ್ರಶ್ನಿಸಿದರು.<br /> ಜಿಲ್ಲಾಧಿಕಾರಿ ಡಾ. ಆರ್.ವಿಶಾಲ್, ಸಿಇಒ ಎಂ.ಜಿ.ವಿಜಯಕುಮಾರ್, ಸಂಸದ ಕೆ.ಬಿ.ಶಾಣಪ್ಪ ಮತ್ತಿತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಲ್ಬರ್ಗ:</strong> ಜಿಲ್ಲೆಯ ವಿವಿಧ ಶಾಲೆಗಳಿಂದ ವರ್ಗಾವಣೆಗೊಂಡ ಶಿಕ್ಷಕರನ್ನು ಪರ್ಯಾಯ ವ್ಯವಸ್ಥೆ ಆಗುವವರೆಗೆ ಬೇರೆ ಜಿಲ್ಲೆಗೆ ಬಿಡುಗಡೆ ಮಾಡಬಾರದು ಎಂದು ಬುಧವಾರ ಇಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಣಯ ಕೈಗೊಳ್ಳ ಲಾಯಿತು.<br /> <br /> ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಶಾಸಕರು ತೀವ್ರ ಕಳವಳ ವ್ಯಕ್ತಪಡಿಸಿದಾಗ, ಈ ನಿರ್ಧಾರ ತೆಗೆದುಕೊಳ್ಳಲಾಯಿತು.<br /> <br /> ಶಿಕ್ಷಕರ ಕೊರತೆ ವಿವರ ನೀಡಿದ ಡಿಡಿಪಿಐ ಬಿ.ಎಸ್. ಪರಮೇಶ, ಅತಿಥಿ ಶಿಕ್ಷಕರ ಹುದ್ದೆಗಳ ಪೈಕಿ ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಗಣಿತ ವಿಷಯಗಳ ಶಿಕ್ಷಕರು ಸಿಗುತ್ತಿಲ್ಲ ಎಂದು ತಿಳಿಸಿದಾಗ, ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಒಂದೆಡೆ ಇರುವ ಶಿಕ್ಷಕರನ್ನು ಬೇರೆ ಕಡೆ ವರ್ಗಾವಣೆ ಮಾಡುತ್ತೀರಿ. ಆ ಖಾಲಿಯಾದ ಸ್ಥಾನಕ್ಕೆ ಇನ್ನೊಬ್ಬ ಶಿಕ್ಷಕರನ್ನು ನೇಮಕ ಮಾಡುವುದಿಲ್ಲ. ಹೀಗಾದರೆ ಗ್ರಾಮೀಣ ಭಾಗದ ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳ ಗತಿ ಏನು? ಎಂದು ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ ಆಕ್ರೋಶದಿಂದ ಪ್ರಶ್ನಿಸಿದರು.<br /> ಜಿಲ್ಲಾಧಿಕಾರಿ ಡಾ. ಆರ್.ವಿಶಾಲ್, ಸಿಇಒ ಎಂ.ಜಿ.ವಿಜಯಕುಮಾರ್, ಸಂಸದ ಕೆ.ಬಿ.ಶಾಣಪ್ಪ ಮತ್ತಿತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>