<p><strong>ಕೊರಟಗೆರೆ: </strong>ಕೇಂದ್ರ ಸರ್ಕಾರ ಸಣ್ಣ ಪಟ್ಟಣದಲ್ಲಿ ವಾಸಿಸುವ ಜನರ ಜೀವನಕ್ಕೆ ಅನುಕೂಲವಾಗುವಂತೆ ರೂಪಿಸಿರುವ ಯೋಜನೆಗಳ ಜಾರಿಯಿಂದ ಜನರು ದೊಡ್ಡ ಪಟ್ಟಣಗಳಿಗೆ ಗುಳೆ ಹೋಗುವುದನ್ನು ತಪ್ಪಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದರು.<br /> <br /> ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಗುರುವಾರ ನಡೆದ ಎಸ್ಎಫ್ಸಿ ಮುಕ್ತ ನಿಧಿ ಹಾಗೂ 13ನೇ ಹಣಕಾಸು ಯೋಜನೆಯಡಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಮಹಿಳಾ ದಿನಾಚರಣೆ ಹಾಗೂ ವಿವಿಧ ಸವಲತ್ತು ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಪಟ್ಟಣದಲ್ಲಿ ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಪ್ರತಿ ನಾಗರಿಕರಿಗೆ ಸ್ವಂತ ಮನೆ ಇರಬೇಕು. ಪಟ್ಟಣದಲ್ಲಿ ಯಾವುದೇ ಅಕ್ರಮ ಕಟ್ಟಡ ನಿರ್ಮಾಣವಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. 5 ಕೊಳಚೆ ಪ್ರದೇಶಗಳನ್ನು ಗುರುತಿಸಲಾಗಿದ್ದು, 650 ಮನೆಗಳನ್ನು ನಿರ್ಮಿಸಲು ರೂ. 5.25 ಕೋಟಿ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ: </strong>ಕೇಂದ್ರ ಸರ್ಕಾರ ಸಣ್ಣ ಪಟ್ಟಣದಲ್ಲಿ ವಾಸಿಸುವ ಜನರ ಜೀವನಕ್ಕೆ ಅನುಕೂಲವಾಗುವಂತೆ ರೂಪಿಸಿರುವ ಯೋಜನೆಗಳ ಜಾರಿಯಿಂದ ಜನರು ದೊಡ್ಡ ಪಟ್ಟಣಗಳಿಗೆ ಗುಳೆ ಹೋಗುವುದನ್ನು ತಪ್ಪಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದರು.<br /> <br /> ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಗುರುವಾರ ನಡೆದ ಎಸ್ಎಫ್ಸಿ ಮುಕ್ತ ನಿಧಿ ಹಾಗೂ 13ನೇ ಹಣಕಾಸು ಯೋಜನೆಯಡಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಮಹಿಳಾ ದಿನಾಚರಣೆ ಹಾಗೂ ವಿವಿಧ ಸವಲತ್ತು ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಪಟ್ಟಣದಲ್ಲಿ ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಪ್ರತಿ ನಾಗರಿಕರಿಗೆ ಸ್ವಂತ ಮನೆ ಇರಬೇಕು. ಪಟ್ಟಣದಲ್ಲಿ ಯಾವುದೇ ಅಕ್ರಮ ಕಟ್ಟಡ ನಿರ್ಮಾಣವಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. 5 ಕೊಳಚೆ ಪ್ರದೇಶಗಳನ್ನು ಗುರುತಿಸಲಾಗಿದ್ದು, 650 ಮನೆಗಳನ್ನು ನಿರ್ಮಿಸಲು ರೂ. 5.25 ಕೋಟಿ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>