<p><strong>ತುಮಕೂರು</strong>: ತಾಲ್ಲೂಕಿನ ಗೂಳೂರು ಗ್ರಾಮದಲ್ಲಿರುವ ಇತಿಹಾಸಪ್ರಸಿದ್ಧ ಗಣೇಶನ ದೇಗುಲಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಪ್ರಾರಂಭಿಸಿರುವ ಸಿಟಿ ಬಸ್ಗೆ ಶಾಸಕ ಸುರೇಶ್ಗೌಡ ಶನಿವಾರ ಚಾಲನೆ ನೀಡಿದರು.<br /> <br /> ವಿಶೇಷವಾಗಿ ಅಲಂಕರಿಸಲಾಗಿದ್ದ ಬಸ್ಗಳಿಗೆ ಪೂಜೆ ಮಾಡುವ ಮೂಲಕ ಗ್ರಾಮಸ್ಥರು ಸಿಟಿಬಸ್ ಸಂಚಾರವನ್ನು ಸಂಭ್ರಮದಿಂದ ಸ್ವಾಗತಿಸಿದರು.ಪ್ರಾಯೋಗಿಕವಾಗಿ ಈ ಮಾರ್ಗದಲ್ಲಿ ಎರಡು ಬಸ್ಗಳನ್ನು ಓಡಿಸಲಾಗುತ್ತಿದೆ. ತಲಾ ಅರ್ಧ ಗಂಟೆ ಅಂತರದಲ್ಲಿ ಬಸ್ಗಳು ಗೂಳೂರು ಮತ್ತು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ತಿಳಿಸಿದರು.<br /> <br /> ಬಸ್ಗಳ ಆದಾಯ ಸಂಗ್ರಹ ಮತ್ತು ಪ್ರಯಾಣಿಕರ ದಟ್ಟಣೆ ಗಮನಿಸಿ ಟ್ರಿಪ್ಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ. ಮರಳೂರು ದಿಣ್ಣೆಯಿಂದ ಗೂಳೂರುವರೆಗೆ ಬಸ್ಗಳಿಗೆ ಹತ್ತುವ- ಇಳಿಯುವ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುತ್ತದೆ ಎಂದು ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿ ಶ್ರೀನಿವಾಸ್ ತಿಳಿಸಿದರು.<br /> <br /> ಶಾಸಕರಾದ ಶಿವಣ್ಣ ಮತ್ತು ಸುರೇಶ್ಗೌಡ ಸಿಟಿ ಬಸ್ನಲ್ಲಿಯೇ ನಗರಕ್ಕೆ ತೆರಳಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಾರದಾ ನರಸಿಂಹಮೂರ್ತಿ, ಚಂದ್ರಪ್ಪ, ಕೆಎಸ್ಆರ್ಟಿಸಿ ವಿಭಾಗಾಧಿಕಾರಿ ವಿಶ್ವನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ತಾಲ್ಲೂಕಿನ ಗೂಳೂರು ಗ್ರಾಮದಲ್ಲಿರುವ ಇತಿಹಾಸಪ್ರಸಿದ್ಧ ಗಣೇಶನ ದೇಗುಲಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಪ್ರಾರಂಭಿಸಿರುವ ಸಿಟಿ ಬಸ್ಗೆ ಶಾಸಕ ಸುರೇಶ್ಗೌಡ ಶನಿವಾರ ಚಾಲನೆ ನೀಡಿದರು.<br /> <br /> ವಿಶೇಷವಾಗಿ ಅಲಂಕರಿಸಲಾಗಿದ್ದ ಬಸ್ಗಳಿಗೆ ಪೂಜೆ ಮಾಡುವ ಮೂಲಕ ಗ್ರಾಮಸ್ಥರು ಸಿಟಿಬಸ್ ಸಂಚಾರವನ್ನು ಸಂಭ್ರಮದಿಂದ ಸ್ವಾಗತಿಸಿದರು.ಪ್ರಾಯೋಗಿಕವಾಗಿ ಈ ಮಾರ್ಗದಲ್ಲಿ ಎರಡು ಬಸ್ಗಳನ್ನು ಓಡಿಸಲಾಗುತ್ತಿದೆ. ತಲಾ ಅರ್ಧ ಗಂಟೆ ಅಂತರದಲ್ಲಿ ಬಸ್ಗಳು ಗೂಳೂರು ಮತ್ತು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ತಿಳಿಸಿದರು.<br /> <br /> ಬಸ್ಗಳ ಆದಾಯ ಸಂಗ್ರಹ ಮತ್ತು ಪ್ರಯಾಣಿಕರ ದಟ್ಟಣೆ ಗಮನಿಸಿ ಟ್ರಿಪ್ಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ. ಮರಳೂರು ದಿಣ್ಣೆಯಿಂದ ಗೂಳೂರುವರೆಗೆ ಬಸ್ಗಳಿಗೆ ಹತ್ತುವ- ಇಳಿಯುವ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುತ್ತದೆ ಎಂದು ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿ ಶ್ರೀನಿವಾಸ್ ತಿಳಿಸಿದರು.<br /> <br /> ಶಾಸಕರಾದ ಶಿವಣ್ಣ ಮತ್ತು ಸುರೇಶ್ಗೌಡ ಸಿಟಿ ಬಸ್ನಲ್ಲಿಯೇ ನಗರಕ್ಕೆ ತೆರಳಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಾರದಾ ನರಸಿಂಹಮೂರ್ತಿ, ಚಂದ್ರಪ್ಪ, ಕೆಎಸ್ಆರ್ಟಿಸಿ ವಿಭಾಗಾಧಿಕಾರಿ ವಿಶ್ವನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>