<p><strong>ಬೆಂಗಳೂರು: `</strong>ಗೃಹರಕ್ಷಕ ದಳವು ಪೊಲೀಸ್ ಇಲಾಖೆಯ ಪೂರಕ ಪಡೆಯಾಗಿ ಕಾರ್ಯ ನಿರ್ವಹಿಸುತ್ತಿದೆ~ ಎಂದು ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರು ಅಭಿಪ್ರಾಯಪಟ್ಟರು.<br /> <br /> ನಗರದ ಮೈಸೂರು ರಸ್ತೆಯಲ್ಲಿರುವ ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಎಆರ್) ಮೈದಾನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಗೃಹರಕ್ಷಕ ವೃತ್ತಿಪರ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ನಿರ್ಣಾಯಕ ಪಾತ್ರ ನಿರ್ವಹಿಸುತ್ತಿದ್ದಾರೆ. ಆ ಮೂಲಕ ಅವರು ಪೊಲೀಸರ ಒತ್ತಡವನ್ನು ಕಡಿಮೆ ಮಾಡುತ್ತಿದ್ದಾರೆ. ಸದಾ ಒತ್ತಡದಲ್ಲಿರುವ ಸಿಬ್ಬಂದಿ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಸೇವಾ ಮನೋಭಾವ ಹೆಚ್ಚುತ್ತದೆ~ ಎಂದರು.<br /> <br /> ನಂತರ ಮಾತನಾಡಿದ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಎಚ್.ಔರಾದ್ಕರ್, `ಹಲವು ಇಲಾಖೆಗಳಲ್ಲಿ ಗೃಹರಕ್ಷಕ ಸಿಬ್ಬಂದಿಯ ಅವಶ್ಯಕತೆ ಇದೆ. ಹೀಗಾಗಿ, ಇಲಾಖೆಗೆ ಹೆಚ್ಚಿನ ನೇಮಕಾತಿ ನಡೆಯಬೇಕಿದೆ. ಸಿಬ್ಬಂದಿಯ ದಿನಭತ್ಯೆ, ಮೂಲ ಸವಲತ್ತುಗಳನ್ನು ಹೆಚ್ಚಿಸುವ ಅಗತ್ಯವಿದೆ~ ಎಂದರು.<br /> <br /> ಗೃಹರಕ್ಷಕ ದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಮಾಡೆಂಟ್ ಬಿ.ಅಮರನಾಥ್, ಸಿಎಆರ್ ಡಿಸಿಪಿ ಡಾ.ತ್ಯಾಗರಾಜನ್ ಸೇರಿದಂತೆ ಹಲವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: `</strong>ಗೃಹರಕ್ಷಕ ದಳವು ಪೊಲೀಸ್ ಇಲಾಖೆಯ ಪೂರಕ ಪಡೆಯಾಗಿ ಕಾರ್ಯ ನಿರ್ವಹಿಸುತ್ತಿದೆ~ ಎಂದು ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರು ಅಭಿಪ್ರಾಯಪಟ್ಟರು.<br /> <br /> ನಗರದ ಮೈಸೂರು ರಸ್ತೆಯಲ್ಲಿರುವ ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಎಆರ್) ಮೈದಾನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಗೃಹರಕ್ಷಕ ವೃತ್ತಿಪರ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ನಿರ್ಣಾಯಕ ಪಾತ್ರ ನಿರ್ವಹಿಸುತ್ತಿದ್ದಾರೆ. ಆ ಮೂಲಕ ಅವರು ಪೊಲೀಸರ ಒತ್ತಡವನ್ನು ಕಡಿಮೆ ಮಾಡುತ್ತಿದ್ದಾರೆ. ಸದಾ ಒತ್ತಡದಲ್ಲಿರುವ ಸಿಬ್ಬಂದಿ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಸೇವಾ ಮನೋಭಾವ ಹೆಚ್ಚುತ್ತದೆ~ ಎಂದರು.<br /> <br /> ನಂತರ ಮಾತನಾಡಿದ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಎಚ್.ಔರಾದ್ಕರ್, `ಹಲವು ಇಲಾಖೆಗಳಲ್ಲಿ ಗೃಹರಕ್ಷಕ ಸಿಬ್ಬಂದಿಯ ಅವಶ್ಯಕತೆ ಇದೆ. ಹೀಗಾಗಿ, ಇಲಾಖೆಗೆ ಹೆಚ್ಚಿನ ನೇಮಕಾತಿ ನಡೆಯಬೇಕಿದೆ. ಸಿಬ್ಬಂದಿಯ ದಿನಭತ್ಯೆ, ಮೂಲ ಸವಲತ್ತುಗಳನ್ನು ಹೆಚ್ಚಿಸುವ ಅಗತ್ಯವಿದೆ~ ಎಂದರು.<br /> <br /> ಗೃಹರಕ್ಷಕ ದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಮಾಡೆಂಟ್ ಬಿ.ಅಮರನಾಥ್, ಸಿಎಆರ್ ಡಿಸಿಪಿ ಡಾ.ತ್ಯಾಗರಾಜನ್ ಸೇರಿದಂತೆ ಹಲವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>