<p><strong>ಬೆಂಗಳೂರು:</strong> ರಾಜಧಾನಿ ಬೆಂಗಳೂರು ಮತ್ತು ಮೈಸೂರು ಜಿಲ್ಲೆಯಲ್ಲಿನ ಎಲ್ಲ ಗೃಹ ನಿರ್ಮಾಣ ಸಹಕಾರ ಸಂಘಗಳಲ್ಲಿನ ಆಡಳಿತಾತ್ಮಕ ದೋಷ ಮತ್ತು ಹಣಕಾಸು ವ್ಯವಹಾರಗಳ ಕುರಿತು ತನಿಖೆಗೆ ಆದೇಶ ನೀಡಲಾಗಿದೆ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಬುಧವಾರ ಇಲ್ಲಿ ತಿಳಿಸಿದರು.</p>.<p>ಬೆಂಗಳೂರು ನಗರ ಜಿಲ್ಲೆಯಲ್ಲಿ 81 ಮತ್ತು ಮೈಸೂರು ಜಿಲ್ಲೆಯಲ್ಲಿ 31 ಗೃಹ ನಿರ್ಮಾಣ ಸಹಕಾರ ಸಂಘಗಳು ಇದ್ದು, ಅನೇಕ ಅಕ್ರಮಗಳ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ಸಮಗ್ರ ತನಿಖೆಗೆ ಆದೇಶ ನೀಡಲಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.</p>.<p>ಸಹಕಾರ ಇಲಾಖೆ ಡೆಪ್ಯೂಟಿ ರಿಜಿಸ್ಟ್ರಾರ್, ಜಂಟಿ ರಿಜಿಸ್ಟ್ರಾರ್ ಮತ್ತು ಸಹಾಯಕ ರಿಜಿಸ್ಟ್ರಾರ್ಗಳ ನೇತೃತ್ವದಲ್ಲಿ ಈ ಎರಡೂ ಜಿಲ್ಲೆಗಳಲ್ಲಿ ತನಿಖೆ ನಡೆಯಲಿದ್ದು ಒಂದೂವರೆ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.</p>.<p>ಸಹಕಾರ ಇಲಾಖೆ ಜತೆಗೆ ಲೆಕ್ಕಪರಿಶೋಧನಾ ಇಲಾಖೆಯಿಂದಲೂ ತನಿಖೆ ಮಾಡಿಸಲಾಗುವುದು. ಎರಡೂ ವರದಿಗಳು ಬಂದ ನಂತರ ಅಕ್ರಮ ಎಸಗಿದ ಸಹಕಾರ ಸಂಘಗಳನ್ನು ಸೂಪರ್ಸೀಡ್ ಮಾಡಲಾಗುವುದು. ನಿವೇಶನ ಹಂಚಿಕೆ ಸೇರಿದಂತೆ ಎಲ್ಲ ರೀತಿಯ ಅಕ್ರಮಗಳ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ಉತ್ತರಿಸಿದರು.</p>.<p><strong>`ಸಚಿವಾಲಯ ನೌಕರರ ಗೃಹ ನಿರ್ಮಾಣ ಸಂಘದಲ್ಲಿ ಅಕ್ರಮ~</strong> <br /> <strong>ಬೆಂಗಳೂರು:</strong> ನಗರದ ವೈಯಾಲಿಕಾವಲ್ ಮತ್ತು ವಿಧಾನಮಂಡಲ ಸಚಿವಾಲಯ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಅಕ್ರಮ ನಡೆದಿದ್ದು, ಅವುಗಳನ್ನು ಸೂಪರ್ಸೀಡ್ ಮಾಡಲು ಸಂಬಂಧಪಟ್ಟ ಆಡಳಿತ ಮಂಡಳಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದರು.</p>.<p>ನ್ಯಾಯಾಂಗ ಬಡಾವಣೆ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿನ ಅಕ್ರಮಗಳ ಬಗ್ಗೆಯೂ ತನಿಖೆ ನಡೆದಿದ್ದು, ತನಿಖೆ ನಂತರ ಅದರ ಸೂಪರ್ಸೀಡ್ಗೂ ನೋಟಿಸ್ ಜಾರಿ ಮಾಡಲಾಗುವುದು ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜಧಾನಿ ಬೆಂಗಳೂರು ಮತ್ತು ಮೈಸೂರು ಜಿಲ್ಲೆಯಲ್ಲಿನ ಎಲ್ಲ ಗೃಹ ನಿರ್ಮಾಣ ಸಹಕಾರ ಸಂಘಗಳಲ್ಲಿನ ಆಡಳಿತಾತ್ಮಕ ದೋಷ ಮತ್ತು ಹಣಕಾಸು ವ್ಯವಹಾರಗಳ ಕುರಿತು ತನಿಖೆಗೆ ಆದೇಶ ನೀಡಲಾಗಿದೆ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಬುಧವಾರ ಇಲ್ಲಿ ತಿಳಿಸಿದರು.</p>.<p>ಬೆಂಗಳೂರು ನಗರ ಜಿಲ್ಲೆಯಲ್ಲಿ 81 ಮತ್ತು ಮೈಸೂರು ಜಿಲ್ಲೆಯಲ್ಲಿ 31 ಗೃಹ ನಿರ್ಮಾಣ ಸಹಕಾರ ಸಂಘಗಳು ಇದ್ದು, ಅನೇಕ ಅಕ್ರಮಗಳ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ಸಮಗ್ರ ತನಿಖೆಗೆ ಆದೇಶ ನೀಡಲಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.</p>.<p>ಸಹಕಾರ ಇಲಾಖೆ ಡೆಪ್ಯೂಟಿ ರಿಜಿಸ್ಟ್ರಾರ್, ಜಂಟಿ ರಿಜಿಸ್ಟ್ರಾರ್ ಮತ್ತು ಸಹಾಯಕ ರಿಜಿಸ್ಟ್ರಾರ್ಗಳ ನೇತೃತ್ವದಲ್ಲಿ ಈ ಎರಡೂ ಜಿಲ್ಲೆಗಳಲ್ಲಿ ತನಿಖೆ ನಡೆಯಲಿದ್ದು ಒಂದೂವರೆ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.</p>.<p>ಸಹಕಾರ ಇಲಾಖೆ ಜತೆಗೆ ಲೆಕ್ಕಪರಿಶೋಧನಾ ಇಲಾಖೆಯಿಂದಲೂ ತನಿಖೆ ಮಾಡಿಸಲಾಗುವುದು. ಎರಡೂ ವರದಿಗಳು ಬಂದ ನಂತರ ಅಕ್ರಮ ಎಸಗಿದ ಸಹಕಾರ ಸಂಘಗಳನ್ನು ಸೂಪರ್ಸೀಡ್ ಮಾಡಲಾಗುವುದು. ನಿವೇಶನ ಹಂಚಿಕೆ ಸೇರಿದಂತೆ ಎಲ್ಲ ರೀತಿಯ ಅಕ್ರಮಗಳ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ಉತ್ತರಿಸಿದರು.</p>.<p><strong>`ಸಚಿವಾಲಯ ನೌಕರರ ಗೃಹ ನಿರ್ಮಾಣ ಸಂಘದಲ್ಲಿ ಅಕ್ರಮ~</strong> <br /> <strong>ಬೆಂಗಳೂರು:</strong> ನಗರದ ವೈಯಾಲಿಕಾವಲ್ ಮತ್ತು ವಿಧಾನಮಂಡಲ ಸಚಿವಾಲಯ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಅಕ್ರಮ ನಡೆದಿದ್ದು, ಅವುಗಳನ್ನು ಸೂಪರ್ಸೀಡ್ ಮಾಡಲು ಸಂಬಂಧಪಟ್ಟ ಆಡಳಿತ ಮಂಡಳಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದರು.</p>.<p>ನ್ಯಾಯಾಂಗ ಬಡಾವಣೆ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿನ ಅಕ್ರಮಗಳ ಬಗ್ಗೆಯೂ ತನಿಖೆ ನಡೆದಿದ್ದು, ತನಿಖೆ ನಂತರ ಅದರ ಸೂಪರ್ಸೀಡ್ಗೂ ನೋಟಿಸ್ ಜಾರಿ ಮಾಡಲಾಗುವುದು ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>