<p><br /> ರಾಜ್ಯದ ಪ್ರವಾಸಿ ಕೇಂದ್ರಗಳಿಗೆ ಬರುವ ಪ್ರವಾಸಿಗರಿಗೆ ಸ್ಥಳದ ಮಾಹಿತಿ ನೀಡಲು ಪ್ರವಾಸಿ ಗೈಡ್ಗಳಿದ್ದಾರೆ. ಇವರು ಪ್ರವಾಸೋದ್ಯಮ ಇಲಾಖೆಯಿಂದ ಮಾನ್ಯತೆ ಪಡೆದ ಗೈಡ್ಗಳು. <br /> ಅವರಿಗೆ ಇಲಾಖೆ ಗುರುತಿನ ಚೀಟಿ ಸಹಾ ನೀಡಿದೆ. ಪ್ರವಾಸಿಗರು ನೀಡುವ ಅಲ್ಪ ಮೊತ್ತದ ಹಣವೇ ಅವರಿಗೆ ಜೀವನಾಧಾರ. <br /> <br /> ಹಿಂದೆ ಪ್ರವಾಸೋದ್ಯಮ ಮಂತ್ರಿಯಾಗಿದ್ದ ಜನಾರ್ದನ ರೆಡ್ಡಿಯವರಿಗೆ `ಕರ್ನಾಟಕ ರಾಜ್ಯ ಪ್ರವಾಸಿ ಮಾರ್ಗದರ್ಶಿ (ಗೈಡ್)ಗಳ ಸಂಘ~ ಮನವಿ ಸಲ್ಲಿಸಿ ಗೌರವ ಧನ ನೀಡುವಂತೆ ಒತ್ತಾಯಿಸಿತ್ತು.</p>.<p>ಮನವಿಗೆ ಸ್ಪಂದಿಸಿದ ಸಚಿವರು ತಿಂಗಳಿಗೆ 1,000 ರೂ ಗೌರವ ಧನ ಮತ್ತು ವರ್ಷಕ್ಕೆ ಎರಡು ಜೊತೆ ಸಮವಸ್ತ್ರ ನೀಡುವ ಭರವಸೆ ನೀಡಿದ್ದರು. ಮುಖ್ಯಮಂತ್ರಿಯವರ ಜತೆ ಸಮಾಲೋಚಿಸಿ ಸರ್ಕಾರಿ ಆದೇಶ ಹೊರಡಿಸುವುದಾಗಿ ತಿಳಿಸಿದ್ದರು.<br /> <br /> ರಾಜ್ಯದಲ್ಲಿ 464 ಗೈಡ್ಗಳಿದ್ದಾರೆ. ಅವರ ಜೀವನ ಮಟ್ಟ ಹೇಳಿಕೊಳ್ಳುವಂತಿಲ್ಲ. ಹಿಂದಿನ ಸಚಿವರ ಭರವಸೆ ಕಾರ್ಯರೂಪಕ್ಕೆ ಬಂದರೆ ಅವರ ಬದುಕಿಗೆ ಸ್ವಲ್ಪ ನೆಮ್ಮದಿ ಸಿಗುತ್ತದೆ. <br /> <br /> ಪ್ರವಾಸೋದ್ಯಮ ಖಾತೆಯನ್ನು ಈಗ ಮುಖ್ಯಮಂತ್ರಿ ಸದಾನಂದ ಗೌಡರೇ ನೋಡಿಕೊಳ್ಳುತ್ತಾರೆ. 3-4 ವರ್ಷಗಳ ಈ ಹಳೆಯ ಬೇಡಿಕೆಯನ್ನು ಅವರು ಪರಿಗಣಿಸಿ ಪ್ರವಾಸಿ ಗೈಡ್ಗಳ ಜೀವನಕ್ಕೆ ದಾರಿ ಮಾಡಿಕೊಡಬೇಕು ಎಂದು ವಿನಂತಿಸುತ್ತೇನೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><br /> ರಾಜ್ಯದ ಪ್ರವಾಸಿ ಕೇಂದ್ರಗಳಿಗೆ ಬರುವ ಪ್ರವಾಸಿಗರಿಗೆ ಸ್ಥಳದ ಮಾಹಿತಿ ನೀಡಲು ಪ್ರವಾಸಿ ಗೈಡ್ಗಳಿದ್ದಾರೆ. ಇವರು ಪ್ರವಾಸೋದ್ಯಮ ಇಲಾಖೆಯಿಂದ ಮಾನ್ಯತೆ ಪಡೆದ ಗೈಡ್ಗಳು. <br /> ಅವರಿಗೆ ಇಲಾಖೆ ಗುರುತಿನ ಚೀಟಿ ಸಹಾ ನೀಡಿದೆ. ಪ್ರವಾಸಿಗರು ನೀಡುವ ಅಲ್ಪ ಮೊತ್ತದ ಹಣವೇ ಅವರಿಗೆ ಜೀವನಾಧಾರ. <br /> <br /> ಹಿಂದೆ ಪ್ರವಾಸೋದ್ಯಮ ಮಂತ್ರಿಯಾಗಿದ್ದ ಜನಾರ್ದನ ರೆಡ್ಡಿಯವರಿಗೆ `ಕರ್ನಾಟಕ ರಾಜ್ಯ ಪ್ರವಾಸಿ ಮಾರ್ಗದರ್ಶಿ (ಗೈಡ್)ಗಳ ಸಂಘ~ ಮನವಿ ಸಲ್ಲಿಸಿ ಗೌರವ ಧನ ನೀಡುವಂತೆ ಒತ್ತಾಯಿಸಿತ್ತು.</p>.<p>ಮನವಿಗೆ ಸ್ಪಂದಿಸಿದ ಸಚಿವರು ತಿಂಗಳಿಗೆ 1,000 ರೂ ಗೌರವ ಧನ ಮತ್ತು ವರ್ಷಕ್ಕೆ ಎರಡು ಜೊತೆ ಸಮವಸ್ತ್ರ ನೀಡುವ ಭರವಸೆ ನೀಡಿದ್ದರು. ಮುಖ್ಯಮಂತ್ರಿಯವರ ಜತೆ ಸಮಾಲೋಚಿಸಿ ಸರ್ಕಾರಿ ಆದೇಶ ಹೊರಡಿಸುವುದಾಗಿ ತಿಳಿಸಿದ್ದರು.<br /> <br /> ರಾಜ್ಯದಲ್ಲಿ 464 ಗೈಡ್ಗಳಿದ್ದಾರೆ. ಅವರ ಜೀವನ ಮಟ್ಟ ಹೇಳಿಕೊಳ್ಳುವಂತಿಲ್ಲ. ಹಿಂದಿನ ಸಚಿವರ ಭರವಸೆ ಕಾರ್ಯರೂಪಕ್ಕೆ ಬಂದರೆ ಅವರ ಬದುಕಿಗೆ ಸ್ವಲ್ಪ ನೆಮ್ಮದಿ ಸಿಗುತ್ತದೆ. <br /> <br /> ಪ್ರವಾಸೋದ್ಯಮ ಖಾತೆಯನ್ನು ಈಗ ಮುಖ್ಯಮಂತ್ರಿ ಸದಾನಂದ ಗೌಡರೇ ನೋಡಿಕೊಳ್ಳುತ್ತಾರೆ. 3-4 ವರ್ಷಗಳ ಈ ಹಳೆಯ ಬೇಡಿಕೆಯನ್ನು ಅವರು ಪರಿಗಣಿಸಿ ಪ್ರವಾಸಿ ಗೈಡ್ಗಳ ಜೀವನಕ್ಕೆ ದಾರಿ ಮಾಡಿಕೊಡಬೇಕು ಎಂದು ವಿನಂತಿಸುತ್ತೇನೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>