<p><strong>ಚಾಮರಾಜನಗರ: </strong>ನಗರದ ತಾ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕುಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆ ಗೊಂದಲ ಗೂಡಾಗಿ ಮಾರ್ಪಟ್ಟಿತು. <br /> <br /> ಪರಿಶಿಷ್ಟ ಪಂಗಡದ ಜನಪ್ರತಿನಿಧಿಗಳು, ಸಂಘ- ಸಂಸ್ಥೆಗಳ ಪದಾಧಿಕಾರಿಗಳಿಗೆ ಆಹ್ವಾನ ನೀಡಿಲ್ಲ. ಯಾವುದೇ, ಮಾಹಿತಿ ನೀಡದೆ ಸಭೆ ನಡೆಸುತ್ತಿರುವ ಉದ್ದೇಶವಾದರೂ ಏನು? ಜಿಲ್ಲಾ ಸಮಿತಿ ಸಭೆಯ್ಲ್ಲಲೂ ಪರಿಶಿಷ್ಟ ವರ್ಗದವರನ್ನು ಕಡೆಗಣಿಸಲಾಗಿದೆ. ಇಂದಿಗೂ ಪ್ರತ್ಯೇಕ ಸಭೆ ನಡೆಸಿಲ್ಲ. ಈ ಸಭೆ ಬಗ್ಗೆಯೂ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಪರಿಶಿಷ್ಟ ಪಂಗಡದ ಮುಖಂಡರು ಪ್ರತಿಭಟನೆ ನಡೆಸಿದರು. <br /> <br /> ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ರಂಗಸ್ವಾಮಯ್ಯ, ಪ್ರೊಬೆಷನ್ ಉಪ ವಿಭಾಗಾಧಿಕಾರಿ ಜಗದೀಶ್ ಮತ್ತು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಜಗದೀಶ್ ಅವರನ್ನು ಮುಖಂಡರು ತರಾಟೆ ತೆಗೆದುಕೊಂಡರು. <br /> ನಗರಸಭೆ ಸದಸ್ಯ ಸುರೇಶನಾಯಕ, ಚಾ.ಸಿ. ಸೋಮನಾಯಕ ಮಾತನಾಡಿ, ಎಸ್ಸಿ-ಎಸ್ಟಿ ಹಿತರಕ್ಷಣಾ ಸಮಿತಿ ಸಭೆಗಳಿಗೆ ಪರಿಶಿಷ್ಟ ಸಮುದಾಯ ದವರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ ಎಂದು ದೂರಿದರು. <br /> ಮುಂದಿನ ಸಭೆಗೆ ಕಡ್ಡಾಯವಾಗಿ ಎಲ್ಲರನ್ನೂ ಆಹ್ವಾನಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ನಂತರ, ಪ್ರತಿಭಟನೆ ವಾಪಸ್ ಪಡೆಯಲಾಯಿತು. <br /> <br /> ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಜಗದೀಶ್ ಮಾತನಾಡಿ, 2009ರಿಂದ ಇಲ್ಲಿಯವರೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ತಡೆ ಕಾಯ್ದೆಯಡಿ 13 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 7 ಪ್ರಕರಣಗಳಲ್ಲಿ ಸಂತ್ರಸ್ತರಿಗೆ 3.75 ಲಕ್ಷ ರೂ ಪರಿಹಾರ ನೀಡಲಾಗಿದೆ ಎಂದು ಸಭೆಗೆ ತಿಳಿಸಿದರು. <br /> <br /> ತಹಶೀಲ್ದಾರ್ ರಂಗಸ್ವಾಮಯ್ಯ, ಪ್ರೊಬೆಷನ್ ಉಪ ವಿಭಾಗಾಧಿಕಾರಿ ಜಗದೀಶ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜೈಕೃಷ್ಣ, ನಗರಸಭೆ ಉಪಾಧ್ಯಕ್ಷೆ ಸೆಲ್ವಿಬಾಬು ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ನಗರದ ತಾ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕುಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆ ಗೊಂದಲ ಗೂಡಾಗಿ ಮಾರ್ಪಟ್ಟಿತು. <br /> <br /> ಪರಿಶಿಷ್ಟ ಪಂಗಡದ ಜನಪ್ರತಿನಿಧಿಗಳು, ಸಂಘ- ಸಂಸ್ಥೆಗಳ ಪದಾಧಿಕಾರಿಗಳಿಗೆ ಆಹ್ವಾನ ನೀಡಿಲ್ಲ. ಯಾವುದೇ, ಮಾಹಿತಿ ನೀಡದೆ ಸಭೆ ನಡೆಸುತ್ತಿರುವ ಉದ್ದೇಶವಾದರೂ ಏನು? ಜಿಲ್ಲಾ ಸಮಿತಿ ಸಭೆಯ್ಲ್ಲಲೂ ಪರಿಶಿಷ್ಟ ವರ್ಗದವರನ್ನು ಕಡೆಗಣಿಸಲಾಗಿದೆ. ಇಂದಿಗೂ ಪ್ರತ್ಯೇಕ ಸಭೆ ನಡೆಸಿಲ್ಲ. ಈ ಸಭೆ ಬಗ್ಗೆಯೂ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಪರಿಶಿಷ್ಟ ಪಂಗಡದ ಮುಖಂಡರು ಪ್ರತಿಭಟನೆ ನಡೆಸಿದರು. <br /> <br /> ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ರಂಗಸ್ವಾಮಯ್ಯ, ಪ್ರೊಬೆಷನ್ ಉಪ ವಿಭಾಗಾಧಿಕಾರಿ ಜಗದೀಶ್ ಮತ್ತು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಜಗದೀಶ್ ಅವರನ್ನು ಮುಖಂಡರು ತರಾಟೆ ತೆಗೆದುಕೊಂಡರು. <br /> ನಗರಸಭೆ ಸದಸ್ಯ ಸುರೇಶನಾಯಕ, ಚಾ.ಸಿ. ಸೋಮನಾಯಕ ಮಾತನಾಡಿ, ಎಸ್ಸಿ-ಎಸ್ಟಿ ಹಿತರಕ್ಷಣಾ ಸಮಿತಿ ಸಭೆಗಳಿಗೆ ಪರಿಶಿಷ್ಟ ಸಮುದಾಯ ದವರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ ಎಂದು ದೂರಿದರು. <br /> ಮುಂದಿನ ಸಭೆಗೆ ಕಡ್ಡಾಯವಾಗಿ ಎಲ್ಲರನ್ನೂ ಆಹ್ವಾನಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ನಂತರ, ಪ್ರತಿಭಟನೆ ವಾಪಸ್ ಪಡೆಯಲಾಯಿತು. <br /> <br /> ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಜಗದೀಶ್ ಮಾತನಾಡಿ, 2009ರಿಂದ ಇಲ್ಲಿಯವರೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ತಡೆ ಕಾಯ್ದೆಯಡಿ 13 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 7 ಪ್ರಕರಣಗಳಲ್ಲಿ ಸಂತ್ರಸ್ತರಿಗೆ 3.75 ಲಕ್ಷ ರೂ ಪರಿಹಾರ ನೀಡಲಾಗಿದೆ ಎಂದು ಸಭೆಗೆ ತಿಳಿಸಿದರು. <br /> <br /> ತಹಶೀಲ್ದಾರ್ ರಂಗಸ್ವಾಮಯ್ಯ, ಪ್ರೊಬೆಷನ್ ಉಪ ವಿಭಾಗಾಧಿಕಾರಿ ಜಗದೀಶ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜೈಕೃಷ್ಣ, ನಗರಸಭೆ ಉಪಾಧ್ಯಕ್ಷೆ ಸೆಲ್ವಿಬಾಬು ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>