<p><strong>ಬೆಂಗಳೂರು</strong>: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ಮತ್ತು ಉಡುಪಿಯ ಅಷ್ಟ ಮಠಗಳನ್ನು ಮುಜರಾಯಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳ ವ್ಯಾಪ್ತಿಗೆ ತರುವ ಕುರಿತು ಸರ್ಕಾರ ಚಿಂತನೆ ನಡೆಸಿಲ್ಲ ಎಂದು ಮುಜರಾಯಿ ಸಚಿವ ಪ್ರಕಾಶ್ ಬಿ.ಹುಕ್ಕೇರಿ ಅವರು ಮಂಗಳವಾರ ವಿಧಾನ ಪರಿಷತ್ತಿನಲ್ಲಿ ಸ್ಪಷ್ಟಪಡಿಸಿದರು.<br /> <br /> ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ಗಣೇಶ್ ಕಾರ್ಣಿಕ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು ಅಧಿಸೂಚಿತ ದೇವಸ್ಥಾನಗಳಿಗೆ ನೀಡುತ್ತಿದ್ದ ವಾರ್ಷಿಕ ತಸ್ತೀಕ್ ಮೊತ್ತವನ್ನು 12 ಸಾವಿರ ರೂಪಾಯಿಯಿಂದ 24 ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದರು.<br /> <br /> <strong>ಗೋ ಹತ್ಯೆ ತಡೆ- ಹಳೆ ಕಾಯ್ದೆ ಜಾರಿ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಿದಂತೆ `ಕರ್ನಾಟಕ ಗೋ ಹತ್ಯೆ ನಿಷೇಧ ಮತ್ತು ಗೋ ಸಂರಕ್ಷಣಾ ಕಾಯ್ದೆ-1964'ನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರಲಾಗುವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಮಂಗಳವಾರ ವಿಧಾನ ಪರಿಷತ್ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ಮತ್ತು ಉಡುಪಿಯ ಅಷ್ಟ ಮಠಗಳನ್ನು ಮುಜರಾಯಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳ ವ್ಯಾಪ್ತಿಗೆ ತರುವ ಕುರಿತು ಸರ್ಕಾರ ಚಿಂತನೆ ನಡೆಸಿಲ್ಲ ಎಂದು ಮುಜರಾಯಿ ಸಚಿವ ಪ್ರಕಾಶ್ ಬಿ.ಹುಕ್ಕೇರಿ ಅವರು ಮಂಗಳವಾರ ವಿಧಾನ ಪರಿಷತ್ತಿನಲ್ಲಿ ಸ್ಪಷ್ಟಪಡಿಸಿದರು.<br /> <br /> ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ಗಣೇಶ್ ಕಾರ್ಣಿಕ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು ಅಧಿಸೂಚಿತ ದೇವಸ್ಥಾನಗಳಿಗೆ ನೀಡುತ್ತಿದ್ದ ವಾರ್ಷಿಕ ತಸ್ತೀಕ್ ಮೊತ್ತವನ್ನು 12 ಸಾವಿರ ರೂಪಾಯಿಯಿಂದ 24 ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದರು.<br /> <br /> <strong>ಗೋ ಹತ್ಯೆ ತಡೆ- ಹಳೆ ಕಾಯ್ದೆ ಜಾರಿ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಿದಂತೆ `ಕರ್ನಾಟಕ ಗೋ ಹತ್ಯೆ ನಿಷೇಧ ಮತ್ತು ಗೋ ಸಂರಕ್ಷಣಾ ಕಾಯ್ದೆ-1964'ನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರಲಾಗುವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಮಂಗಳವಾರ ವಿಧಾನ ಪರಿಷತ್ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>