ಗೋಧ್ರಾ ಗಲಭೆ: ಮೋದಿ ವಿಚಾರಣೆಗೆ ಸಿಪಿಎಂ ಆಗ್ರಹ
ನವದೆಹಲಿ (ಪಿಟಿಐ): 2002ರ ಗೋಧ್ರಾ ನಂತರದ ಗಲಭೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಪಾತ್ರದ ಕುರಿತು ತಕ್ಷಣ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿರುವ ಸಿಪಿಎಂ, `ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಆರೋಪದ ಹಿನ್ನೆಲೆಯಲ್ಲಿ ಮೋದಿ ಅವರನ್ನು ಶಿಕ್ಷಿಸಬೇಕು~ ಎಂದು ಆಗ್ರಹಿಸಿದೆ.
ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಅವರು ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ `ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಹಿಂಸಾಚಾರಕ್ಕೆ ಒಳಗಾದ ಮುಸ್ಲಿಮರನ್ನು ರಕ್ಷಿಸದಂತೆ ಮೋದಿ ಆದೇಶ ನೀಡಿರುವ ವಿಷಯವನ್ನು ಬಹಿರಂಗಪಡಿಸಿದ್ದು, ಈ ಹೇಳಿಕೆ ಅವರ ಅಪರಾಧಿತನವನ್ನು ದೃಢಪಡಿಸಿದೆ~ ಎಂದು ಸಿಪಿಎಂ ಪಾಲಿಟ್ ಬ್ಯೂರೋ ಶನಿವಾರ ಇಲ್ಲಿ ನೀಡಿರುವ ಹೇಳಿಕೆಯಲ್ಲಿ ಟೀಕಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.