<p>ಆನಂದ್ (ಪಿಟಿಐ): ಗೋಧ್ರಾ ನಂತರದ ಗಲಭೆಗಳ ಕಾಲದಲ್ಲಿ ಒಡೆ ಗ್ರಾಮದಲ್ಲಿ ನಡೆದ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಇಲ್ಲಿನ ಸೆಷನ್ಸ್ ನ್ಯಾಯಾಲಯವು ಸೋಮವಾರ 23 ಮಂದಿಯನ್ನು ತಪ್ಪಿತಸ್ತರು ಎಂದು ಘೋಷಿಸಿ, ಹಲವಾರು ಮಂದಿಯನ್ನು ಸಾಕ್ಷ್ಯಾಧಾರದ ಕೊರತೆ ಕಾರಣ ದೋಷಮುಕ್ತಿಗೊಳಿಸಿದೆ.<br /> <br /> ಜಿಲ್ಲೆ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಪೂನಂ ಸಿಂಗ್ ಈ ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಶೀಘ್ರದಲ್ಲೇ ಪ್ರಕಟಿಸುವುದು.<br /> <br /> ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 23 ಮಂದಿ ಪಿರ್ವಾಲಿ ಭಗೋಲ್ ಪ್ರದೇಶದ ಒಡೆ ಗ್ರಾಮದಲ್ಲಿ 2002ರ ಮಾರ್ಚ್ 1ರಂದು ಮನೆಗೆ ಹಚ್ಚಲಾದ ಕಿಚ್ಚಿಗೆ ಸಿಕ್ಕಿ ಸಜೀವ ದಹನಗೊಂಡಿದ್ದರು. ಗೋಧ್ರಾ ರೈಲು ಹತ್ಯಾಕಾಂಡದ ಬಳಿಕ ಸಂಭವಿಸಿದ ಹಿಂಸಾಚಾರಗಳ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು.<br /> <br /> ಪ್ರಕರಣಕ್ಕೆ ಸಂಬಂಧಿಸಿದಂತೆ 47ಯನ್ನು ಆರೋ[ಪಿಗಳನ್ನಾಗಿ ಹೆಸರಿಸಲಾಗಿತ್ತು. ಅವರ ಪೈಕಿ ಒಬ್ಬ ವಿಚಾರಣೆ ಕಾಲದಲ್ಲೇ ಮೃತನಾಗಿದ್ದ.<br /> <br /> 150ಕ್ಕೂ ಹೆಚ್ಚು ಮಂದಿ ಸಾಕ್ಷಿಗಳ ಪರೀಕ್ಷೆ ಮಾಡಲಾಗಿತ್ತು, 170ಕ್ಕೂ ಹೆಚ್ಚು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು ಎಂದು ವಿಶೇಷ ಪಬ್ಲಿಕ್ ಪ್ರಾಸೆಕ್ಯೂಟರ್ ಪಿ.ಎನ್. ಪರ್ಮಾರ್ ಹೇಳಿದರು.<br /> <br /> ಪ್ರಕರಣದ ವಿಚಾರಣೆ 2009ರ ಅಂತ್ಯದಲ್ಲಿ ಆರಂಭವಾಗಿತ್ತು. ವಿಚಾರಣೆ ಮುಕ್ತಾಯದ ಹಂತಕ್ಕೆ ಬಂದಿದ್ದಾಗ ವೈಯಕ್ತಿಕ ಕಾರಣಗಳನ್ನು ನೀಡಿ 2011ರ ಮೇ ತಿಂಗಳಲ್ಲಿ ನ್ಯಾಯಾಧೀಶರು ರಾಜೀನಾಮೆ ನೀಡಿದ್ದರು.<br /> <br /> ನಂತರ ನ್ಯಾಯಾಧೀಶರಾಗಿ ಸಿಂಗ್ ಅವರನ್ನು ನೇಮಿಸಲಾಗಿತ್ತು. ಬಳಿಕ ಎಲ್ಲ ವಾದ ಪ್ರತಿವಾದಗಳನ್ನೂ ಆಕೆಯ ಮುಂದೆ ಸಂಪೂರ್ಣ ಹೊಸದಾಗಿಯೇ ಮಂಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನಂದ್ (ಪಿಟಿಐ): ಗೋಧ್ರಾ ನಂತರದ ಗಲಭೆಗಳ ಕಾಲದಲ್ಲಿ ಒಡೆ ಗ್ರಾಮದಲ್ಲಿ ನಡೆದ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಇಲ್ಲಿನ ಸೆಷನ್ಸ್ ನ್ಯಾಯಾಲಯವು ಸೋಮವಾರ 23 ಮಂದಿಯನ್ನು ತಪ್ಪಿತಸ್ತರು ಎಂದು ಘೋಷಿಸಿ, ಹಲವಾರು ಮಂದಿಯನ್ನು ಸಾಕ್ಷ್ಯಾಧಾರದ ಕೊರತೆ ಕಾರಣ ದೋಷಮುಕ್ತಿಗೊಳಿಸಿದೆ.<br /> <br /> ಜಿಲ್ಲೆ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಪೂನಂ ಸಿಂಗ್ ಈ ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಶೀಘ್ರದಲ್ಲೇ ಪ್ರಕಟಿಸುವುದು.<br /> <br /> ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 23 ಮಂದಿ ಪಿರ್ವಾಲಿ ಭಗೋಲ್ ಪ್ರದೇಶದ ಒಡೆ ಗ್ರಾಮದಲ್ಲಿ 2002ರ ಮಾರ್ಚ್ 1ರಂದು ಮನೆಗೆ ಹಚ್ಚಲಾದ ಕಿಚ್ಚಿಗೆ ಸಿಕ್ಕಿ ಸಜೀವ ದಹನಗೊಂಡಿದ್ದರು. ಗೋಧ್ರಾ ರೈಲು ಹತ್ಯಾಕಾಂಡದ ಬಳಿಕ ಸಂಭವಿಸಿದ ಹಿಂಸಾಚಾರಗಳ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು.<br /> <br /> ಪ್ರಕರಣಕ್ಕೆ ಸಂಬಂಧಿಸಿದಂತೆ 47ಯನ್ನು ಆರೋ[ಪಿಗಳನ್ನಾಗಿ ಹೆಸರಿಸಲಾಗಿತ್ತು. ಅವರ ಪೈಕಿ ಒಬ್ಬ ವಿಚಾರಣೆ ಕಾಲದಲ್ಲೇ ಮೃತನಾಗಿದ್ದ.<br /> <br /> 150ಕ್ಕೂ ಹೆಚ್ಚು ಮಂದಿ ಸಾಕ್ಷಿಗಳ ಪರೀಕ್ಷೆ ಮಾಡಲಾಗಿತ್ತು, 170ಕ್ಕೂ ಹೆಚ್ಚು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು ಎಂದು ವಿಶೇಷ ಪಬ್ಲಿಕ್ ಪ್ರಾಸೆಕ್ಯೂಟರ್ ಪಿ.ಎನ್. ಪರ್ಮಾರ್ ಹೇಳಿದರು.<br /> <br /> ಪ್ರಕರಣದ ವಿಚಾರಣೆ 2009ರ ಅಂತ್ಯದಲ್ಲಿ ಆರಂಭವಾಗಿತ್ತು. ವಿಚಾರಣೆ ಮುಕ್ತಾಯದ ಹಂತಕ್ಕೆ ಬಂದಿದ್ದಾಗ ವೈಯಕ್ತಿಕ ಕಾರಣಗಳನ್ನು ನೀಡಿ 2011ರ ಮೇ ತಿಂಗಳಲ್ಲಿ ನ್ಯಾಯಾಧೀಶರು ರಾಜೀನಾಮೆ ನೀಡಿದ್ದರು.<br /> <br /> ನಂತರ ನ್ಯಾಯಾಧೀಶರಾಗಿ ಸಿಂಗ್ ಅವರನ್ನು ನೇಮಿಸಲಾಗಿತ್ತು. ಬಳಿಕ ಎಲ್ಲ ವಾದ ಪ್ರತಿವಾದಗಳನ್ನೂ ಆಕೆಯ ಮುಂದೆ ಸಂಪೂರ್ಣ ಹೊಸದಾಗಿಯೇ ಮಂಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>