<p><strong>ಸಾಗರ : </strong>ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸರಿಯಾಗಿ ಹಾಜರಾಗದ ಕಾರಣ ಶಾಸಕತ್ವ ಸ್ಥಾನದಿಂದ ಅನರ್ಹಗೊಂಡಿರುವ ಗೋಪಾಲಕೃಷ್ಣ ಬೇಳೂರು ಅವರಿಗೆ ಜೆಎಂಎಫ್ ನ್ಯಾಯಾಲಯ ಸೋಮವಾರ ರೂ 100 ದಂಡ ವಿಧಿಸಿದೆ.<br /> <br /> 2008ರ ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಅನುಮತಿ ಇಲ್ಲದೆ ರ್ಯಾಲಿ ನಡೆಸಿದರು ಎನ್ನುವ ಕಾರಣಕ್ಕೆ ಬೇಳೂರು ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು. ಈ ಹಿಂದೆಯೇ ಅವರು ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದರು.<br /> <br /> ಪ್ರಕರಣದ ಹಿಂದಿನ ವಿಚಾರಣೆ ದಿನಾಂಕದಂದು ಬೇಳೂರು ನ್ಯಾಯಾಲಯಕ್ಕೆ ಗೈರು ಹಾಜರಾಗಿದ್ದರಿಂದ ನ್ಯಾಯಾಧೀಶರು ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದ್ದರು.<br /> <br /> ಸೋಮವಾರ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾದ ಬೇಳೂರು ತಮ್ಮ ವಕೀಲರ ಮೂಲಕ ವಾರೆಂಟ್ ಆದೇಶ ರದ್ದುಗೊಳಿಸಲು ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯಕ್ಕೆ ಸರಿಯಾಗಿ ಹಾಜರಾಗುವಂತೆ ಸೂಚಿಸಿದ ನ್ಯಾಯಾಧೀಶರು ರೂ 100 ದಂಡ ವಿಧಿಸಿ ಬೇಳೂರು ವಿರುದ್ಧದ ವಾರೆಂಟ್ ಆದೇಶವನ್ನು ರದ್ದುಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ : </strong>ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸರಿಯಾಗಿ ಹಾಜರಾಗದ ಕಾರಣ ಶಾಸಕತ್ವ ಸ್ಥಾನದಿಂದ ಅನರ್ಹಗೊಂಡಿರುವ ಗೋಪಾಲಕೃಷ್ಣ ಬೇಳೂರು ಅವರಿಗೆ ಜೆಎಂಎಫ್ ನ್ಯಾಯಾಲಯ ಸೋಮವಾರ ರೂ 100 ದಂಡ ವಿಧಿಸಿದೆ.<br /> <br /> 2008ರ ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಅನುಮತಿ ಇಲ್ಲದೆ ರ್ಯಾಲಿ ನಡೆಸಿದರು ಎನ್ನುವ ಕಾರಣಕ್ಕೆ ಬೇಳೂರು ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು. ಈ ಹಿಂದೆಯೇ ಅವರು ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದರು.<br /> <br /> ಪ್ರಕರಣದ ಹಿಂದಿನ ವಿಚಾರಣೆ ದಿನಾಂಕದಂದು ಬೇಳೂರು ನ್ಯಾಯಾಲಯಕ್ಕೆ ಗೈರು ಹಾಜರಾಗಿದ್ದರಿಂದ ನ್ಯಾಯಾಧೀಶರು ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದ್ದರು.<br /> <br /> ಸೋಮವಾರ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾದ ಬೇಳೂರು ತಮ್ಮ ವಕೀಲರ ಮೂಲಕ ವಾರೆಂಟ್ ಆದೇಶ ರದ್ದುಗೊಳಿಸಲು ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯಕ್ಕೆ ಸರಿಯಾಗಿ ಹಾಜರಾಗುವಂತೆ ಸೂಚಿಸಿದ ನ್ಯಾಯಾಧೀಶರು ರೂ 100 ದಂಡ ವಿಧಿಸಿ ಬೇಳೂರು ವಿರುದ್ಧದ ವಾರೆಂಟ್ ಆದೇಶವನ್ನು ರದ್ದುಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>