<p>ಬೆಂಗಳೂರು: ನಗರದ `ಕನ್ನಡ ಜನಶಕ್ತಿ~ ಸಂಸ್ಥೆಯು ನೀಡುವ `ಶಾಂತವೇರಿ ಗೋಪಾಲಗೌಡ ಪ್ರಶಸ್ತಿ~ಗೆ ಜಾನಪದ ವಿದ್ವಾಂಸ ಡಾ.ಹಿ.ಶಿ.ರಾಮಚಂದ್ರೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.<br /> <br /> ಈ ತಿಂಗಳ 27ರಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ರೂ 25,000 ನಗದು ಮತ್ತು ಸ್ಮರಣ ಫಲಕವನ್ನು ಒಳಗೊಂಡಿದೆ.<br /> <br /> `ದಿವಂಗತ ಶಾಂತವೇರಿ ಗೋಪಾಲಗೌಡರು ಕನ್ನಡ ನಾಡು ಕಂಡ ಸಜ್ಜನ ಮತ್ತು ದಿಟ್ಟ ರಾಜಕಾರಣಿ. ಕನ್ನಡ ನಾಡು- ನುಡಿಯ ಬಗ್ಗೆ ಗೌಡರ ಕಾಳಜಿ, ಬದ್ಧತೆ ಆದರ್ಶ ಪ್ರಾಯವಾದುದು. ಗೌಡರ ಜೀವನಾದರ್ಶಗಳನ್ನು ಪಾಲಿಸಿಕೊಂಡು ಬರುತ್ತಿರುವ, ಆ ಮೂಲಕ ಅವರ ನೆನಪನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ನಾಡಿನ ಶ್ರೇಷ್ಠ ವ್ಯಕ್ತಿಗಳಿಗೆ ಗೌಡರ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ನೀಡಲಾಗುತ್ತಿದೆ~ ಎಂದು ಸಂಸ್ಥೆಯ ಅಧ್ಯಕ್ಷ ಸಿ.ಕೆ.ರಾಮೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> `ಹಾಸನ ಜಿಲ್ಲೆಯ ಹಿರಿಸಾವೆಯವರಾದ ರಾಮಚಂದ್ರೇಗೌಡರು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದರು. ಸಮಕಾಲೀನ ಚಳವಳಿಯ ಒಡನಾಡಿಯಾಗಿ, ಲೇಖಕರಾಗಿ ಕ್ರಿಯಾಶೀಲ ಬದುಕು ನಡೆಸಿಕೊಂಡು ಬಂದಿರುವ ಅವರಿಗೆ ಈ ಸಲದ ಗೋಪಾಲಗೌಡರ ಪ್ರಶಸ್ತಿ ನೀಡಲು ಸಂಸ್ಥೆಗೆ ಹೆಮ್ಮೆಯೆನಿಸುತ್ತದೆ~ ಎಂದು ಅವರು ಹೇಳಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದ `ಕನ್ನಡ ಜನಶಕ್ತಿ~ ಸಂಸ್ಥೆಯು ನೀಡುವ `ಶಾಂತವೇರಿ ಗೋಪಾಲಗೌಡ ಪ್ರಶಸ್ತಿ~ಗೆ ಜಾನಪದ ವಿದ್ವಾಂಸ ಡಾ.ಹಿ.ಶಿ.ರಾಮಚಂದ್ರೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.<br /> <br /> ಈ ತಿಂಗಳ 27ರಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ರೂ 25,000 ನಗದು ಮತ್ತು ಸ್ಮರಣ ಫಲಕವನ್ನು ಒಳಗೊಂಡಿದೆ.<br /> <br /> `ದಿವಂಗತ ಶಾಂತವೇರಿ ಗೋಪಾಲಗೌಡರು ಕನ್ನಡ ನಾಡು ಕಂಡ ಸಜ್ಜನ ಮತ್ತು ದಿಟ್ಟ ರಾಜಕಾರಣಿ. ಕನ್ನಡ ನಾಡು- ನುಡಿಯ ಬಗ್ಗೆ ಗೌಡರ ಕಾಳಜಿ, ಬದ್ಧತೆ ಆದರ್ಶ ಪ್ರಾಯವಾದುದು. ಗೌಡರ ಜೀವನಾದರ್ಶಗಳನ್ನು ಪಾಲಿಸಿಕೊಂಡು ಬರುತ್ತಿರುವ, ಆ ಮೂಲಕ ಅವರ ನೆನಪನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ನಾಡಿನ ಶ್ರೇಷ್ಠ ವ್ಯಕ್ತಿಗಳಿಗೆ ಗೌಡರ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ನೀಡಲಾಗುತ್ತಿದೆ~ ಎಂದು ಸಂಸ್ಥೆಯ ಅಧ್ಯಕ್ಷ ಸಿ.ಕೆ.ರಾಮೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> `ಹಾಸನ ಜಿಲ್ಲೆಯ ಹಿರಿಸಾವೆಯವರಾದ ರಾಮಚಂದ್ರೇಗೌಡರು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದರು. ಸಮಕಾಲೀನ ಚಳವಳಿಯ ಒಡನಾಡಿಯಾಗಿ, ಲೇಖಕರಾಗಿ ಕ್ರಿಯಾಶೀಲ ಬದುಕು ನಡೆಸಿಕೊಂಡು ಬಂದಿರುವ ಅವರಿಗೆ ಈ ಸಲದ ಗೋಪಾಲಗೌಡರ ಪ್ರಶಸ್ತಿ ನೀಡಲು ಸಂಸ್ಥೆಗೆ ಹೆಮ್ಮೆಯೆನಿಸುತ್ತದೆ~ ಎಂದು ಅವರು ಹೇಳಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>