<p><strong>ಪಣಜಿ (ಐಎಎನ್ಎಸ್):</strong> ಗೋವಾದಲ್ಲಿನ ಅಕ್ರಮ ಗಣಿಗಾರಿಕೆ ಕುರಿತಂತೆ ನ್ಯಾಯಮೂರ್ತಿ ಎಂ.ಬಿ.ಷಾ ನೇತೃತ್ವದ ಆಯೋಗದ ಸದಸ್ಯರು ಬುಧವಾರ ತನಿಖೆ ಆರಂಭಿಸಿದರು. ರಾಜ್ಯದಲ್ಲಿ ಕನಿಷ್ಠ 100 ಕಂಪೆನಿಗಳು ಗಣಿಗಾರಿಕೆ ನಡೆಸುತ್ತಿದ್ದು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ದೂರಗಳನ್ನು ಈ ಆಯೋಗದ ಸದಸ್ಯರು ಕೂಲಂಕಷವಾಗಿ ಪರಿಶೀಲಿಸಲಿದ್ದಾರೆ.<br /> <br /> `ರಾಜ್ಯ ಸರ್ಕಾರದ ಅಧಿಕಾರಿಗಳು ಆಯೋಗಕ್ಕೆ ಎಲ್ಲ ಸಹಕಾರ ನೀಡಲಿದ್ದಾರೆ. ಈಗಾಗಲೇ ಆಯೋಗದ ಸದಸ್ಯರು ವಿವಿಧ ತಂಡಗಳನ್ನು ರಚಿಸಿಕೊಂಡಿದ್ದು, ಪ್ರತಿ ತಂಡವೂ 12 ಗಣಿಗಾರಿಕೆ ಪ್ರದೇಶಗಳ ಪರಿಶೀಲನೆ ನಡೆಸಲಿದೆ~ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.<br /> <br /> ಮೂರು ವಾರಗಳ ಕಾಲ ಗೋವಾ ರಾಜ್ಯದಾದ್ಯಂತ ಸಂಚರಿಸಲಿರುವ ಆಯೋಗದ ಸದಸ್ಯರು ಗಣಿಗಾರಿಕೆ ಕುರಿತಂತೆ ಎಲ್ಲ ಅಂಕಿ ಅಂಶಗಳು ಮತ್ತು ಸಂಪೂರ್ಣ ವಿವರಗಳನ್ನು ಕಲೆ ಹಾಕಲಿದ್ದಾರೆ. ಪ್ರಮುಖವಾಗಿ ಅಕ್ರಮ ಗಣಿಗಾರಿಕೆ ಮತ್ತು ಅರಣ್ಯ ಒತ್ತುವರಿ, ರಫ್ತು ವಿಷಯಗಳಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ.<br /> <br /> ಈವರೆವಿಗೂ ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯ ಮೊತ್ತವನ್ನು 1,200 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಕಳೆದ ಹಣಕಾಸು ವರ್ಷವೊಂದರಲ್ಲೇ ರಾಜ್ಯದ ವಿವಿಧೆಡೆ 54 ದಶಲಕ್ಷ ಟನ್ಗಳಷ್ಟು ಅದಿರನ್ನು ಹೊರ ತೆಗೆಯಲಾಗಿದೆ. <br /> <br /> <strong>ಪ್ರತಿಪಕ್ಷಗಳ ಆಪಾದನೆ</strong>: ಮುಖ್ಯಮಂತ್ರಿ ದಿಗಂಬರ ಕಾಮತ್ ಮತ್ತು ಅವರ ಸಂಪುಟದ ಹಲವು ಸಚಿವರು ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಗಳಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಮನೋಹರ ಪಾರಿಕ್ಕರ್ ಆಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ (ಐಎಎನ್ಎಸ್):</strong> ಗೋವಾದಲ್ಲಿನ ಅಕ್ರಮ ಗಣಿಗಾರಿಕೆ ಕುರಿತಂತೆ ನ್ಯಾಯಮೂರ್ತಿ ಎಂ.ಬಿ.ಷಾ ನೇತೃತ್ವದ ಆಯೋಗದ ಸದಸ್ಯರು ಬುಧವಾರ ತನಿಖೆ ಆರಂಭಿಸಿದರು. ರಾಜ್ಯದಲ್ಲಿ ಕನಿಷ್ಠ 100 ಕಂಪೆನಿಗಳು ಗಣಿಗಾರಿಕೆ ನಡೆಸುತ್ತಿದ್ದು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ದೂರಗಳನ್ನು ಈ ಆಯೋಗದ ಸದಸ್ಯರು ಕೂಲಂಕಷವಾಗಿ ಪರಿಶೀಲಿಸಲಿದ್ದಾರೆ.<br /> <br /> `ರಾಜ್ಯ ಸರ್ಕಾರದ ಅಧಿಕಾರಿಗಳು ಆಯೋಗಕ್ಕೆ ಎಲ್ಲ ಸಹಕಾರ ನೀಡಲಿದ್ದಾರೆ. ಈಗಾಗಲೇ ಆಯೋಗದ ಸದಸ್ಯರು ವಿವಿಧ ತಂಡಗಳನ್ನು ರಚಿಸಿಕೊಂಡಿದ್ದು, ಪ್ರತಿ ತಂಡವೂ 12 ಗಣಿಗಾರಿಕೆ ಪ್ರದೇಶಗಳ ಪರಿಶೀಲನೆ ನಡೆಸಲಿದೆ~ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.<br /> <br /> ಮೂರು ವಾರಗಳ ಕಾಲ ಗೋವಾ ರಾಜ್ಯದಾದ್ಯಂತ ಸಂಚರಿಸಲಿರುವ ಆಯೋಗದ ಸದಸ್ಯರು ಗಣಿಗಾರಿಕೆ ಕುರಿತಂತೆ ಎಲ್ಲ ಅಂಕಿ ಅಂಶಗಳು ಮತ್ತು ಸಂಪೂರ್ಣ ವಿವರಗಳನ್ನು ಕಲೆ ಹಾಕಲಿದ್ದಾರೆ. ಪ್ರಮುಖವಾಗಿ ಅಕ್ರಮ ಗಣಿಗಾರಿಕೆ ಮತ್ತು ಅರಣ್ಯ ಒತ್ತುವರಿ, ರಫ್ತು ವಿಷಯಗಳಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ.<br /> <br /> ಈವರೆವಿಗೂ ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯ ಮೊತ್ತವನ್ನು 1,200 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಕಳೆದ ಹಣಕಾಸು ವರ್ಷವೊಂದರಲ್ಲೇ ರಾಜ್ಯದ ವಿವಿಧೆಡೆ 54 ದಶಲಕ್ಷ ಟನ್ಗಳಷ್ಟು ಅದಿರನ್ನು ಹೊರ ತೆಗೆಯಲಾಗಿದೆ. <br /> <br /> <strong>ಪ್ರತಿಪಕ್ಷಗಳ ಆಪಾದನೆ</strong>: ಮುಖ್ಯಮಂತ್ರಿ ದಿಗಂಬರ ಕಾಮತ್ ಮತ್ತು ಅವರ ಸಂಪುಟದ ಹಲವು ಸಚಿವರು ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಗಳಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಮನೋಹರ ಪಾರಿಕ್ಕರ್ ಆಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>