<p><strong>ಬೆಂಗಳೂರು:</strong> ‘ಮಾಜಿ ಶಿಕ್ಷಣ ಸಚಿವ ಎಚ್.ಜಿ. ಗೋವಿಂದೇಗೌಡರು ರಾಜಕೀಯ ಪಾವಿತ್ರ್ಯವನ್ನು ಉಳಿಸಿಕೊಂಡಿದ್ದ ಅಪರೂಪದ ರಾಜಕಾರಣಿ’ ಎಂದು ಸಾಹಿತಿ ಗೊ.ರು.ಚನ್ನಬಸಪ್ಪ ಹೇಳಿದರು.<br /> <br /> ಭಾರತ ಯಾತ್ರಾ ಕೇಂದ್ರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಲೆನಾಡ ಗಾಂಧಿ ಖ್ಯಾತಿಯ ಎಚ್.ಜಿ. ಗೋವಿಂದೇಗೌಡರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ‘ಗೋವಿಂದೇಗೌಡರು ಜೀವನ ಶಿಸ್ತು, ವೈಯಕ್ತಿಕ ಶೀಲಚಾರಿತ್ರ್ಯ, ಸಾಮಾಜಿಕ ನ್ಯಾಯಪರತೆ, ಜೀವನ ಮೌಲ್ಯಗಳ ಒಟ್ಟು ಮೊತ್ತವಾಗಿದ್ದರು. ಜನಸೇವೆಗಾಗಿಯೇ ಹುಟ್ಟಿದ ಅವರು ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ’ ಎಂದರು.<br /> <br /> ‘ಸ್ವಾಭಿಮಾನಿ, ಸ್ವತಂತ್ರ ಮನೋಭಾವ ಹೊಂದಿದ್ದ ಗೋವಿಂದೇಗೌಡರು, ಯಾರ ಹಂಗಿಗೂ ಒಳಗಾಗಿರಲಿಲ್ಲ. ಇತ್ತೀಚಿನ ರಾಜಕೀಯ ವ್ಯವಸ್ಥೆ, ನೈತಿಕ ಭ್ರಷ್ಟಾಚಾರವನ್ನು ಕಂಡು ಅವರು ಸಂಕಟ ಪಡುತ್ತಿದ್ದರು’ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> ಶಾಸಕ ಸುರೇಶ್ಕುಮಾರ್ ಮಾತನಾಡಿ, ‘ರಾಜ್ಯ ಸಾಕಷ್ಟು ಶಿಕ್ಷಣ ಸಚಿವರನ್ನು ಕಂಡಿದೆ. ಅವರಲ್ಲಿ ಉತ್ತಮ ಸಚಿವರಾಗಿ ಗುರುತಿಸಿಕೊಂಡವರು ಗೋವಿಂದೇಗೌಡರು ಮಾತ್ರ. ಅವರು ಶಿಕ್ಷಣ ಸಚಿವರಾಗಿದ್ದ ವೇಳೆ ಎಲ್ಲ ತೊಡಕುಗಳನ್ನು ನಿವಾರಿಸಿ ಶಿಕ್ಷಕರನ್ನು ನೇಮಕ ಮಾಡಿದ್ದರು’ ಎಂದು ಹೇಳಿದರು.<br /> <br /> ‘ಮಹಾತ್ಮ ಗಾಂಧಿ ಅವರ ಮಾರ್ಗದಲ್ಲಿ ನಡೆದ ಗೋವಿಂದೇಗೌಡ ಅಂತಹ ಮಹನೀಯರು ಪ್ರಸ್ತುತ ಸಮಾಜಕ್ಕೆ ಬೇಕಾಗಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮಾಜಿ ಶಿಕ್ಷಣ ಸಚಿವ ಎಚ್.ಜಿ. ಗೋವಿಂದೇಗೌಡರು ರಾಜಕೀಯ ಪಾವಿತ್ರ್ಯವನ್ನು ಉಳಿಸಿಕೊಂಡಿದ್ದ ಅಪರೂಪದ ರಾಜಕಾರಣಿ’ ಎಂದು ಸಾಹಿತಿ ಗೊ.ರು.ಚನ್ನಬಸಪ್ಪ ಹೇಳಿದರು.<br /> <br /> ಭಾರತ ಯಾತ್ರಾ ಕೇಂದ್ರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಲೆನಾಡ ಗಾಂಧಿ ಖ್ಯಾತಿಯ ಎಚ್.ಜಿ. ಗೋವಿಂದೇಗೌಡರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ‘ಗೋವಿಂದೇಗೌಡರು ಜೀವನ ಶಿಸ್ತು, ವೈಯಕ್ತಿಕ ಶೀಲಚಾರಿತ್ರ್ಯ, ಸಾಮಾಜಿಕ ನ್ಯಾಯಪರತೆ, ಜೀವನ ಮೌಲ್ಯಗಳ ಒಟ್ಟು ಮೊತ್ತವಾಗಿದ್ದರು. ಜನಸೇವೆಗಾಗಿಯೇ ಹುಟ್ಟಿದ ಅವರು ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ’ ಎಂದರು.<br /> <br /> ‘ಸ್ವಾಭಿಮಾನಿ, ಸ್ವತಂತ್ರ ಮನೋಭಾವ ಹೊಂದಿದ್ದ ಗೋವಿಂದೇಗೌಡರು, ಯಾರ ಹಂಗಿಗೂ ಒಳಗಾಗಿರಲಿಲ್ಲ. ಇತ್ತೀಚಿನ ರಾಜಕೀಯ ವ್ಯವಸ್ಥೆ, ನೈತಿಕ ಭ್ರಷ್ಟಾಚಾರವನ್ನು ಕಂಡು ಅವರು ಸಂಕಟ ಪಡುತ್ತಿದ್ದರು’ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> ಶಾಸಕ ಸುರೇಶ್ಕುಮಾರ್ ಮಾತನಾಡಿ, ‘ರಾಜ್ಯ ಸಾಕಷ್ಟು ಶಿಕ್ಷಣ ಸಚಿವರನ್ನು ಕಂಡಿದೆ. ಅವರಲ್ಲಿ ಉತ್ತಮ ಸಚಿವರಾಗಿ ಗುರುತಿಸಿಕೊಂಡವರು ಗೋವಿಂದೇಗೌಡರು ಮಾತ್ರ. ಅವರು ಶಿಕ್ಷಣ ಸಚಿವರಾಗಿದ್ದ ವೇಳೆ ಎಲ್ಲ ತೊಡಕುಗಳನ್ನು ನಿವಾರಿಸಿ ಶಿಕ್ಷಕರನ್ನು ನೇಮಕ ಮಾಡಿದ್ದರು’ ಎಂದು ಹೇಳಿದರು.<br /> <br /> ‘ಮಹಾತ್ಮ ಗಾಂಧಿ ಅವರ ಮಾರ್ಗದಲ್ಲಿ ನಡೆದ ಗೋವಿಂದೇಗೌಡ ಅಂತಹ ಮಹನೀಯರು ಪ್ರಸ್ತುತ ಸಮಾಜಕ್ಕೆ ಬೇಕಾಗಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>