<p>ಮೊಳಕಾಲ್ಮುರು: ಗೋಶಾಲೆಗಳಲ್ಲಿ ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವ ಜತೆಗೆ, ಮೇವು ವ್ಯರ್ಥವಾಗುವುದನ್ನು ಸರಿಪಡಿಸಬೇಕು ಎಂದು ಸಂಸತ್ ಸದಸ್ಯ ಜನಾರ್ದನಸ್ವಾಮಿ ಸೂಚಿಸಿದರು.<br /> <br /> ತಾಲ್ಲೂಕಿನ ಮುತ್ತಿಗಾರಹಳ್ಳಿ ಮ್ಯಾಸರಹಟ್ಟಿ ಬಳಿ ತಾಲ್ಲೂಕು ಆಡಳಿತ ಸ್ಥಾಪಿಸಿರುವ ಗೋಶಾಲೆಗೆ ಶನಿವಾರ ಭೇಟಿ ನೀಡಿ ಅವರು ಮಾತನಾಡಿದರು.<br /> <br /> ಗೋಶಾಲೆಯಲ್ಲಿ ಜಾನುವಾರುಗಳ ಆರೋಗ್ಯ ತಪಾಸಣೆ ಮಾಡಲು ಸಿಬ್ಬಂದಿ ಇಲ್ಲದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. <br /> <br /> ಮೇವು ಹಾಕಲು ವ್ಯವಸ್ಥೆ ಮಾಡದ ಪರಿಣಾಮ ಅಪಾರ ಪ್ರಮಾಣದ ಮೇವು ನೆಲದ ಮೇಲೆ ಬಿದ್ದು ವ್ಯರ್ಥವಾಗುತ್ತಿದೆ. ಮೇವು ಹಾಕಲು ತಾತ್ಕಾಲಿಕ ಅನುಕೂಲ ಮಾಡಬೇಕು ಎಂದು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ತಾಕೀತು ಮಾಡಿದರು.<br /> <br /> ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೊಳಕಾಲ್ಮುರು ತಾಲ್ಲೂಕಿನಲ್ಲಿ ಬರ ನಿರ್ವಹಣೆ ಹಿನ್ನೆಲೆಯಲ್ಲಿ ಎರಡು ಕಡೆ ಗೋಶಾಲೆ ಆರಂಭಿಸಲಾಗಿದೆ. ಈವರೆಗೆ ಒಟ್ಟು 6,348 ಜಾನುವಾರುಗಳು ಸೌಲಭ್ಯ ಪಡೆದುಕೊಂಡಿದ್ದು 72 ಟನ್ ಮೇವು ದಾಸ್ತಾನು ಮಾಡಲಾಗಿದೆ. ಪ್ರತಿ ಜಾನುವಾರಿಗೆ 5 ಕೆ.ಜಿ. ಯಂತೆ ಈತನಕ ಒಟ್ಟು 34 ಟನ್ ಮೇವು ಖರ್ಚಾಗಿದೆ.<br /> <br /> ಮಳೆ ಬಿದ್ದರೆ ಗೋಶಾಲೆ ಅಗತ್ಯವಿಲ್ಲ ಎನ್ನುವವರೆಗೂ ಗೋಶಾಲೆಗಳು ಕಾರ್ಯ ನಿರ್ವಹಿಸಲಿದೆ ಎಂದು ಭರವಸೆ ನೀಡಿದರು. ತಾಲ್ಲೂಕಿನ ಕುಡಿಯುವ ನೀರು ಸಮಸ್ಯೆ ನಿರ್ವಹಣೆಗೆ ರೂ 56 ಲಕ್ಷ ಕ್ರಿಯಾಯೋಜನೆ ಸಲ್ಲಿಸಲಾಗಿದೆ. ಪ್ರಸ್ತುತ ರೂ 32 ಲಕ್ಷ ವೆಚ್ಚದಲ್ಲಿ 9 ನೀರು ಸರಬರಾಜು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ರಂಗಯ್ಯನದುರ್ಗ ಜಲಾಶಯದಲ್ಲಿ ಹೆಚ್ಚಿರುವ ಹೂಳು ಎತ್ತಲು ಜಿಲ್ಲಾಧಿಕಾರಿ ಜತೆ ಮಾತುಕತೆ ನಡೆಸುವುದಾಗಿ ಹೇಳಿದರು.<br /> <br /> ಜಿ.ಪಂ. ಸದಸ್ಯೆ ಮಾರಕ್ಕ, ತಹಶೀಲ್ದಾರ್ ವೆಂಕಟಪ್ಪ, ಪೊಭ್ರೆಷನರಿ ಉಪ ವಿಭಾಗಾಧಿಕಾರಿ ಡಾ. ಸ್ನೇಹ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ಗೋಶಾಲೆಗಳಲ್ಲಿ ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವ ಜತೆಗೆ, ಮೇವು ವ್ಯರ್ಥವಾಗುವುದನ್ನು ಸರಿಪಡಿಸಬೇಕು ಎಂದು ಸಂಸತ್ ಸದಸ್ಯ ಜನಾರ್ದನಸ್ವಾಮಿ ಸೂಚಿಸಿದರು.<br /> <br /> ತಾಲ್ಲೂಕಿನ ಮುತ್ತಿಗಾರಹಳ್ಳಿ ಮ್ಯಾಸರಹಟ್ಟಿ ಬಳಿ ತಾಲ್ಲೂಕು ಆಡಳಿತ ಸ್ಥಾಪಿಸಿರುವ ಗೋಶಾಲೆಗೆ ಶನಿವಾರ ಭೇಟಿ ನೀಡಿ ಅವರು ಮಾತನಾಡಿದರು.<br /> <br /> ಗೋಶಾಲೆಯಲ್ಲಿ ಜಾನುವಾರುಗಳ ಆರೋಗ್ಯ ತಪಾಸಣೆ ಮಾಡಲು ಸಿಬ್ಬಂದಿ ಇಲ್ಲದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. <br /> <br /> ಮೇವು ಹಾಕಲು ವ್ಯವಸ್ಥೆ ಮಾಡದ ಪರಿಣಾಮ ಅಪಾರ ಪ್ರಮಾಣದ ಮೇವು ನೆಲದ ಮೇಲೆ ಬಿದ್ದು ವ್ಯರ್ಥವಾಗುತ್ತಿದೆ. ಮೇವು ಹಾಕಲು ತಾತ್ಕಾಲಿಕ ಅನುಕೂಲ ಮಾಡಬೇಕು ಎಂದು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ತಾಕೀತು ಮಾಡಿದರು.<br /> <br /> ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೊಳಕಾಲ್ಮುರು ತಾಲ್ಲೂಕಿನಲ್ಲಿ ಬರ ನಿರ್ವಹಣೆ ಹಿನ್ನೆಲೆಯಲ್ಲಿ ಎರಡು ಕಡೆ ಗೋಶಾಲೆ ಆರಂಭಿಸಲಾಗಿದೆ. ಈವರೆಗೆ ಒಟ್ಟು 6,348 ಜಾನುವಾರುಗಳು ಸೌಲಭ್ಯ ಪಡೆದುಕೊಂಡಿದ್ದು 72 ಟನ್ ಮೇವು ದಾಸ್ತಾನು ಮಾಡಲಾಗಿದೆ. ಪ್ರತಿ ಜಾನುವಾರಿಗೆ 5 ಕೆ.ಜಿ. ಯಂತೆ ಈತನಕ ಒಟ್ಟು 34 ಟನ್ ಮೇವು ಖರ್ಚಾಗಿದೆ.<br /> <br /> ಮಳೆ ಬಿದ್ದರೆ ಗೋಶಾಲೆ ಅಗತ್ಯವಿಲ್ಲ ಎನ್ನುವವರೆಗೂ ಗೋಶಾಲೆಗಳು ಕಾರ್ಯ ನಿರ್ವಹಿಸಲಿದೆ ಎಂದು ಭರವಸೆ ನೀಡಿದರು. ತಾಲ್ಲೂಕಿನ ಕುಡಿಯುವ ನೀರು ಸಮಸ್ಯೆ ನಿರ್ವಹಣೆಗೆ ರೂ 56 ಲಕ್ಷ ಕ್ರಿಯಾಯೋಜನೆ ಸಲ್ಲಿಸಲಾಗಿದೆ. ಪ್ರಸ್ತುತ ರೂ 32 ಲಕ್ಷ ವೆಚ್ಚದಲ್ಲಿ 9 ನೀರು ಸರಬರಾಜು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ರಂಗಯ್ಯನದುರ್ಗ ಜಲಾಶಯದಲ್ಲಿ ಹೆಚ್ಚಿರುವ ಹೂಳು ಎತ್ತಲು ಜಿಲ್ಲಾಧಿಕಾರಿ ಜತೆ ಮಾತುಕತೆ ನಡೆಸುವುದಾಗಿ ಹೇಳಿದರು.<br /> <br /> ಜಿ.ಪಂ. ಸದಸ್ಯೆ ಮಾರಕ್ಕ, ತಹಶೀಲ್ದಾರ್ ವೆಂಕಟಪ್ಪ, ಪೊಭ್ರೆಷನರಿ ಉಪ ವಿಭಾಗಾಧಿಕಾರಿ ಡಾ. ಸ್ನೇಹ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>