<p>ಚಿಂತಾಮಣಿ: ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿರುವುದರಿಂದ ಗೋಶಾಲೆಗಳನ್ನು ತೆರೆಯಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಸೋಮವಾರ ತಹಶೀಲ್ದಾರ್ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿದರು. <br /> <br /> ಬರಗಾಲದ ಘೋಷಣೆ ಮಾಡಿ ತಿಂಗಳುಗಳು ಕಳೆದರೂ ಜನತೆ ಮತ್ತು ಜಾನುವಾರಿಗೆ ಅನುಕೂಲವಾಗುವಂತಹ ಯಾವುದೇ ಯೋಜನೆ ಜಾರಿಗೆ ತಂದಿಲ್ಲ. ಜಾನುವಾರಿಗೆ ಮೇವು-ನೀರು ಸಿಗದೆ ತೊಂದರೆಯಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ತಾಲ್ಲೂಕಿನ ರೈತರು, ಕಾರ್ಮಿಕರು ಮೂರು ಹೊತ್ತು ಊಟ ಮಾಡಿ ಜೀವನ ನಡೆಸುವುದು ದುಸ್ತರವಾಗಿದೆ. ಕೆರೆಗಳ ಹೂಳು ತೆಗೆಯುವುದು ಮತ್ತಿತರ ಕೆಲಸಗಳನ್ನು ಒದಗಿಸಬೇಕು. ತಾಲ್ಲೂಕಿನಲ್ಲಿ ಸುಮಾರು 15 ವರ್ಷಗಳಿಂದ ಮಳೆ-ಬೆಳೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಖಾಸಗಿ ಮತ್ತು ಸರ್ಕಾರಿ ಬ್ಯಾಂಕ್ಗಳ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.<br /> <br /> ತಾಲ್ಲೂಕಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ಮತ್ತು ತರಕಾರಿಗಳ ಕಮಿಷನ್ ಏಜಂಟರು ಮತ್ತು ಅಧಿಕಾರಿಗಳು ಒಪ್ಪಂದ ಮಾಡಿಕೊಂಡು 100 ರೂಪಾಯಿಗೆ 10ರೂಪಾಯಿ ಕಮಿಷನ್ ಪಡೆಯುತ್ತಿದ್ದಾರೆ. ಕೂಡಲೆ ಇದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದ್ದಾರೆ.<br /> <br /> ರೈತರಿಗೆ ಅಗತ್ಯವಾದ ಟ್ರಾನ್ಸ್ ಫಾರ್ಮರ್ಗಳನ್ನು ಒಂದು ವಾರದೊಳಗೆ ಹಾಕಿಸಿಕೊಡಬೇಕು, ಸುಟ್ಟುಹೋದ ಟ್ರಾನ್ಸ್ಫಾರ್ಮರ್ಗಳನ್ನು ಒಂದು ದಿನದೊಳಗೆ ಸರಿಪಡಿಸಬೇಕು. ಇಲ್ಲದಿದ್ದಲ್ಲಿ ಬೆಳೆ ನಷ್ಟವನ್ನು ಬೆಸ್ಕಾಂ ಭರಿಸಬೇಕು. ಜಿಲ್ಲೆಗೆ ಶಾಶ್ವತ ನೀರಾವರಿಯನ್ನು ಒದಗಿಸುವಂಥ ಡಾ.ಪರಮಶಿವಯ್ಯ ವರದಿಯನ್ನು ಶೀಘ್ರ ಜಾರಿಗೆ ತರಬೇಕೆಂದು ಒತ್ತಾಯಿಸಲಾಯಿತು.<br /> <br /> ಉದ್ಯೋಗ ಖಾತರಿ ಯೋಜನೆಯ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಯೋಜನೆಯಡಿಯಲ್ಲಿ ಮತ್ತೆ ಅವಕಾಶ ನೀಡಬೇಕು. ಈ ಬೇಡಿಕೆಗಳು ಈಡೇರದಿದ್ದರೆ ಏ.30ಂದು ಬಂದ್ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ. <br /> <br /> ಸಂಘ ಹಾಗೂ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ರಘುನಾಥರೆಡ್ಡಿ, ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ ಮುಖಂಡರಾದ ಎಸ್.ವೆಂಕಟಸುಬ್ಬಾರೆಡ್ಡಿ, ಶ್ರಿರಾಮರೆಡ್ಡಿ, ಪಾರ್ವತಮ್ಮ, ವೆಂಕಟಮ್ಮ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿರುವುದರಿಂದ ಗೋಶಾಲೆಗಳನ್ನು ತೆರೆಯಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಸೋಮವಾರ ತಹಶೀಲ್ದಾರ್ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿದರು. <br /> <br /> ಬರಗಾಲದ ಘೋಷಣೆ ಮಾಡಿ ತಿಂಗಳುಗಳು ಕಳೆದರೂ ಜನತೆ ಮತ್ತು ಜಾನುವಾರಿಗೆ ಅನುಕೂಲವಾಗುವಂತಹ ಯಾವುದೇ ಯೋಜನೆ ಜಾರಿಗೆ ತಂದಿಲ್ಲ. ಜಾನುವಾರಿಗೆ ಮೇವು-ನೀರು ಸಿಗದೆ ತೊಂದರೆಯಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ತಾಲ್ಲೂಕಿನ ರೈತರು, ಕಾರ್ಮಿಕರು ಮೂರು ಹೊತ್ತು ಊಟ ಮಾಡಿ ಜೀವನ ನಡೆಸುವುದು ದುಸ್ತರವಾಗಿದೆ. ಕೆರೆಗಳ ಹೂಳು ತೆಗೆಯುವುದು ಮತ್ತಿತರ ಕೆಲಸಗಳನ್ನು ಒದಗಿಸಬೇಕು. ತಾಲ್ಲೂಕಿನಲ್ಲಿ ಸುಮಾರು 15 ವರ್ಷಗಳಿಂದ ಮಳೆ-ಬೆಳೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಖಾಸಗಿ ಮತ್ತು ಸರ್ಕಾರಿ ಬ್ಯಾಂಕ್ಗಳ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.<br /> <br /> ತಾಲ್ಲೂಕಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ಮತ್ತು ತರಕಾರಿಗಳ ಕಮಿಷನ್ ಏಜಂಟರು ಮತ್ತು ಅಧಿಕಾರಿಗಳು ಒಪ್ಪಂದ ಮಾಡಿಕೊಂಡು 100 ರೂಪಾಯಿಗೆ 10ರೂಪಾಯಿ ಕಮಿಷನ್ ಪಡೆಯುತ್ತಿದ್ದಾರೆ. ಕೂಡಲೆ ಇದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದ್ದಾರೆ.<br /> <br /> ರೈತರಿಗೆ ಅಗತ್ಯವಾದ ಟ್ರಾನ್ಸ್ ಫಾರ್ಮರ್ಗಳನ್ನು ಒಂದು ವಾರದೊಳಗೆ ಹಾಕಿಸಿಕೊಡಬೇಕು, ಸುಟ್ಟುಹೋದ ಟ್ರಾನ್ಸ್ಫಾರ್ಮರ್ಗಳನ್ನು ಒಂದು ದಿನದೊಳಗೆ ಸರಿಪಡಿಸಬೇಕು. ಇಲ್ಲದಿದ್ದಲ್ಲಿ ಬೆಳೆ ನಷ್ಟವನ್ನು ಬೆಸ್ಕಾಂ ಭರಿಸಬೇಕು. ಜಿಲ್ಲೆಗೆ ಶಾಶ್ವತ ನೀರಾವರಿಯನ್ನು ಒದಗಿಸುವಂಥ ಡಾ.ಪರಮಶಿವಯ್ಯ ವರದಿಯನ್ನು ಶೀಘ್ರ ಜಾರಿಗೆ ತರಬೇಕೆಂದು ಒತ್ತಾಯಿಸಲಾಯಿತು.<br /> <br /> ಉದ್ಯೋಗ ಖಾತರಿ ಯೋಜನೆಯ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಯೋಜನೆಯಡಿಯಲ್ಲಿ ಮತ್ತೆ ಅವಕಾಶ ನೀಡಬೇಕು. ಈ ಬೇಡಿಕೆಗಳು ಈಡೇರದಿದ್ದರೆ ಏ.30ಂದು ಬಂದ್ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ. <br /> <br /> ಸಂಘ ಹಾಗೂ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ರಘುನಾಥರೆಡ್ಡಿ, ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ ಮುಖಂಡರಾದ ಎಸ್.ವೆಂಕಟಸುಬ್ಬಾರೆಡ್ಡಿ, ಶ್ರಿರಾಮರೆಡ್ಡಿ, ಪಾರ್ವತಮ್ಮ, ವೆಂಕಟಮ್ಮ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>