<p><strong>ಬೆಂಗಳೂರು:</strong> ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರವಾದ ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮಸೂದೆ-2010 ಎಲ್ಲಿದೆ?ಇದು ಪ್ರತಿಯೊಬ್ಬರನ್ನೂ ಕಾಡುತ್ತಿರಬಹುದು. ಕಳೆದ ಅಧಿವೇಶನ ಸಂದರ್ಭದಲ್ಲಿ ಅಂಗೀಕಾರವಾದ ಈ ಮಸೂದೆಯನ್ನು ರಾಷ್ಟ್ರಪತಿಗಳ ಅಂಗೀಕಾರಕ್ಕೆ ರಾಜ್ಯಪಾಲರು ಕಳುಹಿಸಿದ್ದರು. ಆದರೆ, ಅದಿನ್ನೂ ರಾಷ್ಟ್ರಪತಿ ಭವನ ತಲುಪಿಲ್ಲ!<br /> <br /> ಅಖಿಲ ಕರ್ನಾಟಕ ಪ್ರಾಣಿ ದಯಾ ಸಂಘದ ಸುನಿಲ್ ದುಗಾರ್ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ರಾಷ್ಟ್ರಪತಿ ಭವನದಿಂದ ಮಾಹಿತಿ ಪಡೆದಿದ್ದು, ಅದರಲ್ಲಿ ಈ ಅಂಶವನ್ನು ಉಲ್ಲೇಖಿಸಲಾಗಿದೆ. ಈ ಮಸೂದೆ ಇನ್ನೂ ರಾಷ್ಟ್ರಪತಿ ಭವನ ಮುಟ್ಟಿಲ್ಲ ಎಂದು ಅಲ್ಲಿನ ಆರ್ಟಿಐ ಅಧಿಕಾರಿ ಲಿಖಿತವಾಗಿ ತಿಳಿಸಿದ್ದಾರೆ.<br /> <br /> ಈ ಕುರಿತು ‘ಪ್ರಜಾವಾಣಿ’ ರಾಜ್ಯ ಸಂಸದೀಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ ‘ಈ ಮಸೂದೆ ಇನ್ನೂ ಕೇಂದ್ರ ಗೃಹ ಸಚಿವಾಲಯದಲ್ಲಿಯೇ ಇರುವುದು ಗೊತ್ತಾಗಿದೆ. ಗೃಹ ಇಲಾಖೆ ಪರಿಶೀಲಿಸಿದ ನಂತರವೇ ಅದು ರಾಷ್ಟ್ರಪತಿಗಳ ಅಂಕಿತಕ್ಕೆ ಹೋಗುವುದು. ಆದರೆ, ಈ ಪ್ರಕ್ರಿಯೆ ಇನ್ನೂ ನಡೆದಿಲ್ಲ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರವಾದ ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮಸೂದೆ-2010 ಎಲ್ಲಿದೆ?ಇದು ಪ್ರತಿಯೊಬ್ಬರನ್ನೂ ಕಾಡುತ್ತಿರಬಹುದು. ಕಳೆದ ಅಧಿವೇಶನ ಸಂದರ್ಭದಲ್ಲಿ ಅಂಗೀಕಾರವಾದ ಈ ಮಸೂದೆಯನ್ನು ರಾಷ್ಟ್ರಪತಿಗಳ ಅಂಗೀಕಾರಕ್ಕೆ ರಾಜ್ಯಪಾಲರು ಕಳುಹಿಸಿದ್ದರು. ಆದರೆ, ಅದಿನ್ನೂ ರಾಷ್ಟ್ರಪತಿ ಭವನ ತಲುಪಿಲ್ಲ!<br /> <br /> ಅಖಿಲ ಕರ್ನಾಟಕ ಪ್ರಾಣಿ ದಯಾ ಸಂಘದ ಸುನಿಲ್ ದುಗಾರ್ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ರಾಷ್ಟ್ರಪತಿ ಭವನದಿಂದ ಮಾಹಿತಿ ಪಡೆದಿದ್ದು, ಅದರಲ್ಲಿ ಈ ಅಂಶವನ್ನು ಉಲ್ಲೇಖಿಸಲಾಗಿದೆ. ಈ ಮಸೂದೆ ಇನ್ನೂ ರಾಷ್ಟ್ರಪತಿ ಭವನ ಮುಟ್ಟಿಲ್ಲ ಎಂದು ಅಲ್ಲಿನ ಆರ್ಟಿಐ ಅಧಿಕಾರಿ ಲಿಖಿತವಾಗಿ ತಿಳಿಸಿದ್ದಾರೆ.<br /> <br /> ಈ ಕುರಿತು ‘ಪ್ರಜಾವಾಣಿ’ ರಾಜ್ಯ ಸಂಸದೀಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ ‘ಈ ಮಸೂದೆ ಇನ್ನೂ ಕೇಂದ್ರ ಗೃಹ ಸಚಿವಾಲಯದಲ್ಲಿಯೇ ಇರುವುದು ಗೊತ್ತಾಗಿದೆ. ಗೃಹ ಇಲಾಖೆ ಪರಿಶೀಲಿಸಿದ ನಂತರವೇ ಅದು ರಾಷ್ಟ್ರಪತಿಗಳ ಅಂಕಿತಕ್ಕೆ ಹೋಗುವುದು. ಆದರೆ, ಈ ಪ್ರಕ್ರಿಯೆ ಇನ್ನೂ ನಡೆದಿಲ್ಲ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>