<p><strong>ಬೆಂಗಳೂರು:</strong> ಗೋಹತ್ಯೆ ನಿಷೇಧ ಮಸೂದೆಗೆ ಸಣ್ಣ ತಿದ್ದುಪಡಿ ತರುವಂತೆ ರಾಷ್ಟ್ರಪತಿಯವರು ಸೂಚಿಸಿದ್ದು, ಅದರಂತೆ ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.</p>.<p>`ನಾಗರಿಕ ಸೇವಾ ಖಾತರಿ ಕಾಯ್ದೆ~ (ಸಕಾಲ) ಅನುಷ್ಠಾನಕ್ಕೆ ಸೋಮವಾರ ಚಾಲನೆ ನೀಡಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕಾರಕ್ಕಾಗಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಕಳುಹಿಸಲಾಗಿತ್ತು. `ಜಾನುವಾರು~ ಎಂಬ ಪದದ ಅರ್ಥಕ್ಕೆ ಸಂಬಂಧಿಸಿದಂತೆ ಸಣ್ಣ ತಿದ್ದುಪಡಿಯೊಂದನ್ನು ಮಾಡುವಂತೆ ಸೂಚಿಸಿ ರಾಷ್ಟ್ರಪತಿಯವರು ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಿದ್ದುಪಡಿ ಮಸೂದೆ ಮಂಡನೆ ಮಾಡಲಾಗುವುದು~ ಎಂದರು.</p>.<p>ಕನಕಪುರದಲ್ಲಿ ವ್ಯಾಪಕ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, `ಈ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖಾ ವರದಿ ಕೈಸೇರಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು~ ಎಂದು ತಿಳಿಸಿದರು.</p>.<p>ಗೋಹತ್ಯೆ ನಿಷೇಧ ಮಸೂದೆ ವಾಪಸಾಗಿರುವುದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಕಾನೂನು ಸಚಿವ ಎಸ್. ಸುರೇಶ್ಕುಮಾರ್, `ರಾಷ್ಟ್ರಪತಿಯವರು ಮಸೂದೆಯನ್ನು ವಾಪಸ್ ಕಳುಹಿಸಿದ ಬಳಿಕ `ಜಾನುವಾರು~ ಎಂಬ ಪದದ ಅರ್ಥ ಕುರಿತು ಸರ್ಕಾರ ವಿವರಣೆ ನೀಡಿದೆ. ಮಾರ್ಚ್ 22ರಂದೇ ಸ್ಪಷ್ಟನೆ ನೀಡಿದ್ದು, ಕೇಂದ್ರದ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗೋಹತ್ಯೆ ನಿಷೇಧ ಮಸೂದೆಗೆ ಸಣ್ಣ ತಿದ್ದುಪಡಿ ತರುವಂತೆ ರಾಷ್ಟ್ರಪತಿಯವರು ಸೂಚಿಸಿದ್ದು, ಅದರಂತೆ ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.</p>.<p>`ನಾಗರಿಕ ಸೇವಾ ಖಾತರಿ ಕಾಯ್ದೆ~ (ಸಕಾಲ) ಅನುಷ್ಠಾನಕ್ಕೆ ಸೋಮವಾರ ಚಾಲನೆ ನೀಡಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕಾರಕ್ಕಾಗಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಕಳುಹಿಸಲಾಗಿತ್ತು. `ಜಾನುವಾರು~ ಎಂಬ ಪದದ ಅರ್ಥಕ್ಕೆ ಸಂಬಂಧಿಸಿದಂತೆ ಸಣ್ಣ ತಿದ್ದುಪಡಿಯೊಂದನ್ನು ಮಾಡುವಂತೆ ಸೂಚಿಸಿ ರಾಷ್ಟ್ರಪತಿಯವರು ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಿದ್ದುಪಡಿ ಮಸೂದೆ ಮಂಡನೆ ಮಾಡಲಾಗುವುದು~ ಎಂದರು.</p>.<p>ಕನಕಪುರದಲ್ಲಿ ವ್ಯಾಪಕ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, `ಈ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖಾ ವರದಿ ಕೈಸೇರಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು~ ಎಂದು ತಿಳಿಸಿದರು.</p>.<p>ಗೋಹತ್ಯೆ ನಿಷೇಧ ಮಸೂದೆ ವಾಪಸಾಗಿರುವುದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಕಾನೂನು ಸಚಿವ ಎಸ್. ಸುರೇಶ್ಕುಮಾರ್, `ರಾಷ್ಟ್ರಪತಿಯವರು ಮಸೂದೆಯನ್ನು ವಾಪಸ್ ಕಳುಹಿಸಿದ ಬಳಿಕ `ಜಾನುವಾರು~ ಎಂಬ ಪದದ ಅರ್ಥ ಕುರಿತು ಸರ್ಕಾರ ವಿವರಣೆ ನೀಡಿದೆ. ಮಾರ್ಚ್ 22ರಂದೇ ಸ್ಪಷ್ಟನೆ ನೀಡಿದ್ದು, ಕೇಂದ್ರದ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>