<p>ಬೆಂಗಳೂರು: ಗೋ ಹತ್ಯೆ ನಿಷೇಧ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕುವಂತೆ ಸೋಮವಾರ ನಡೆದ ಕರ್ನಾಟಕ ಗೋ ರಕ್ಷಣಾ ಸಮಿತಿಯ ಉದ್ಘಾಟನಾ ಸಮಾರಂಭದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು.<br /> <br /> ಮುಖ್ಯಮಂತ್ರಿ ಸೇರಿದಂತೆ ಸಮಾರಂಭಕ್ಕೆ ಆಗಮಿಸಬೇಕಾಗಿದ್ದ ಸ್ವಾಮೀಜಿಗಳು ಹಾಗೂ ಪ್ರಮುಖ ಜನಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ದಯಾನಂದ ಸ್ವಾಮೀಜಿ ಈ ನಿರ್ಣಯ ಪ್ರಕಟಿಸಿದರು.<br /> <br /> ಇದಕ್ಕೂ ಮುನ್ನ ಕಾರ್ಪೊರೇಷನ್ ವೃತ್ತದಿಂದ ಪುರಭವನದವರೆಗೆ ಗೋ ಮೆರವಣಿಗೆ ನಡೆಯಿತು. ವಿವಿಧ ಕಲಾ ತಂಡಗಳ ಮೆರವಣಿಗೆ ಗಮನಸೆಳೆಯಿತು. <br /> <br /> ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ, ಕರ್ನಾಟಕ ಗೋ ರಕ್ಷಣಾ ಸಮಿತಿಯ ಅಧ್ಯಕ್ಷ ಡಿ. ಶಿವಕುಮಾರ್, ಕೋಶಾಧ್ಯಕ್ಷ ಮಾಗಡಿ ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಪ್ರಫುಲ್ಲಾ ಶ್ರೀನಿವಾಸ್, ಸಮಾಜ ಸೇವಕ ವಿಮಲ್ ಭಂಡಾರಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಗೋ ಹತ್ಯೆ ನಿಷೇಧ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕುವಂತೆ ಸೋಮವಾರ ನಡೆದ ಕರ್ನಾಟಕ ಗೋ ರಕ್ಷಣಾ ಸಮಿತಿಯ ಉದ್ಘಾಟನಾ ಸಮಾರಂಭದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು.<br /> <br /> ಮುಖ್ಯಮಂತ್ರಿ ಸೇರಿದಂತೆ ಸಮಾರಂಭಕ್ಕೆ ಆಗಮಿಸಬೇಕಾಗಿದ್ದ ಸ್ವಾಮೀಜಿಗಳು ಹಾಗೂ ಪ್ರಮುಖ ಜನಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ದಯಾನಂದ ಸ್ವಾಮೀಜಿ ಈ ನಿರ್ಣಯ ಪ್ರಕಟಿಸಿದರು.<br /> <br /> ಇದಕ್ಕೂ ಮುನ್ನ ಕಾರ್ಪೊರೇಷನ್ ವೃತ್ತದಿಂದ ಪುರಭವನದವರೆಗೆ ಗೋ ಮೆರವಣಿಗೆ ನಡೆಯಿತು. ವಿವಿಧ ಕಲಾ ತಂಡಗಳ ಮೆರವಣಿಗೆ ಗಮನಸೆಳೆಯಿತು. <br /> <br /> ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ, ಕರ್ನಾಟಕ ಗೋ ರಕ್ಷಣಾ ಸಮಿತಿಯ ಅಧ್ಯಕ್ಷ ಡಿ. ಶಿವಕುಮಾರ್, ಕೋಶಾಧ್ಯಕ್ಷ ಮಾಗಡಿ ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಪ್ರಫುಲ್ಲಾ ಶ್ರೀನಿವಾಸ್, ಸಮಾಜ ಸೇವಕ ವಿಮಲ್ ಭಂಡಾರಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>