<p><strong>ಹುಬ್ಬಳ್ಳಿ:</strong> ಗೋಹತ್ಯೆಯ ಸಂಪೂರ್ಣ ನಿಷೇಧವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೂ ಕರ್ನಾಟಕದ ರಾಜ್ಯಪಾಲರು ಮಸೂದೆಗೆ ಒಪ್ಪಿಗೆ ನೀಡದೆ ರಾಜಕೀಯ ಮಾಡುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ವಕೀಲ ಜಸರಾಜ್ ಶ್ರೀಮಲ್ ಟೀಕಿಸಿದರು.<br /> <br /> ಕರ್ನಾಟಕ ಸರ್ಕಾರದ ಗೋವಂಶ-ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಮಸೂದೆಗೆ ರಾಷ್ಟ್ರಪತಿಗಳ ಅಂಕಿತಕ್ಕೆ ಆಗ್ರಹಿಸಿ ಗೋವಂಶ, ಜಾನುವಾರು ಹತ್ಯೆ ಮುಕ್ತ ಕರ್ನಾಟಕ ನಿರ್ಮಾಣ ಸಂಘಟನೆಗಳ ಒಕ್ಕೂಟ, ಸೋಮವಾರ ಹಳೇಹುಬ್ಬಳ್ಳಿಯ ಪಿಂಜರಾಪೋಳ ಸಂಸ್ಥೆಯ ಮೈದಾನದಲ್ಲಿ ಆಯೋಜಿಸಿದ್ದ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು.<br /> <br /> ಮಧ್ಯಪ್ರದೇಶ ಹಾಗೂ ಗುಜರಾತ್ ರಾಜ್ಯಗಳಲ್ಲಿ ಗೋ ಹತ್ಯೆ ನಿಷೇಧ ಮಸೂದೆಗೆ ಅಲ್ಲಿಯ ರಾಜ್ಯಪಾಲರು ಒಪ್ಪಿಗೆಯನ್ನು ನೀಡಿದ್ದಾರೆ. ಗೋಹತ್ಯೆ ನಿಷೇಧ ಕಾನೂನಿಗೆ ಸಂವಿಧಾನಕ್ಕೆ ಮಾನ್ಯತೆಯೂ ಇದೆ ಎಂದು ಅವರು ಹೇಳಿದರು.<br /> <br /> ‘ಗೋ ಹತ್ಯೆ ನಿಷೇಧ ಮಸೂದೆ ಮಂಡಿಸುವ ಮೂಲಕ ರಾಜ್ಯ ಸರ್ಕಾರ ಧೈರ್ಯ ಪ್ರದರ್ಶಿಸಿದೆ. ಆದರೆ, ತಾವೊಬ್ಬ ಬ್ರಾಹ್ಮಣ ಹಾಗೂ ಗೋವು ಭಕ್ತ ಎಂದು ಹೇಳಿಕೊಳ್ಳುವ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಮಾತ್ರ ತಾವು ಗೋ ಹಂತಕ ಎನ್ನುವುದನ್ನು ಸಾಬೀತುಪಡಿಸಿದ್ದಾರೆ’ ಎಂದು ಪ್ರಮೋದ್ ಮುತಾಲಿಕ್ ಟೀಕಿಸಿದರು.<br /> <br /> ಮಸೂದೆಗೆ ರಾಷ್ಟ್ರಪತಿಗಳ ಅಂಕಿತಕ್ಕೆ ಆಗ್ರಹಿಸಿ ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ದಯಾನಂದ ಸ್ವಾಮೀಜಿ ತಿಳಿಸಿದರು.ಹುಬ್ಬಳ್ಳಿ ಪಿಂಜರಾಪೋಳದ ಮಹಾಪೋಷಕ ಮೇಘರಾಜ ಕವಾಡ, ಕರ್ನಾಟಕ ರಾಜ್ಯ ರೈತ ಸಂಘದ ಗುರುನಾಥ ಮಾದಾಪುರ, ಆರ್ಎಸ್ಎಸ್ನ ಸುಭಾಸ ಸಿಂಗ್ ಜಮಾದಾರ, ಪ್ರೀತಿ ಬೆಹನ್ ಮೊದಲಾದವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಗೋಹತ್ಯೆಯ ಸಂಪೂರ್ಣ ನಿಷೇಧವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೂ ಕರ್ನಾಟಕದ ರಾಜ್ಯಪಾಲರು ಮಸೂದೆಗೆ ಒಪ್ಪಿಗೆ ನೀಡದೆ ರಾಜಕೀಯ ಮಾಡುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ವಕೀಲ ಜಸರಾಜ್ ಶ್ರೀಮಲ್ ಟೀಕಿಸಿದರು.<br /> <br /> ಕರ್ನಾಟಕ ಸರ್ಕಾರದ ಗೋವಂಶ-ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಮಸೂದೆಗೆ ರಾಷ್ಟ್ರಪತಿಗಳ ಅಂಕಿತಕ್ಕೆ ಆಗ್ರಹಿಸಿ ಗೋವಂಶ, ಜಾನುವಾರು ಹತ್ಯೆ ಮುಕ್ತ ಕರ್ನಾಟಕ ನಿರ್ಮಾಣ ಸಂಘಟನೆಗಳ ಒಕ್ಕೂಟ, ಸೋಮವಾರ ಹಳೇಹುಬ್ಬಳ್ಳಿಯ ಪಿಂಜರಾಪೋಳ ಸಂಸ್ಥೆಯ ಮೈದಾನದಲ್ಲಿ ಆಯೋಜಿಸಿದ್ದ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು.<br /> <br /> ಮಧ್ಯಪ್ರದೇಶ ಹಾಗೂ ಗುಜರಾತ್ ರಾಜ್ಯಗಳಲ್ಲಿ ಗೋ ಹತ್ಯೆ ನಿಷೇಧ ಮಸೂದೆಗೆ ಅಲ್ಲಿಯ ರಾಜ್ಯಪಾಲರು ಒಪ್ಪಿಗೆಯನ್ನು ನೀಡಿದ್ದಾರೆ. ಗೋಹತ್ಯೆ ನಿಷೇಧ ಕಾನೂನಿಗೆ ಸಂವಿಧಾನಕ್ಕೆ ಮಾನ್ಯತೆಯೂ ಇದೆ ಎಂದು ಅವರು ಹೇಳಿದರು.<br /> <br /> ‘ಗೋ ಹತ್ಯೆ ನಿಷೇಧ ಮಸೂದೆ ಮಂಡಿಸುವ ಮೂಲಕ ರಾಜ್ಯ ಸರ್ಕಾರ ಧೈರ್ಯ ಪ್ರದರ್ಶಿಸಿದೆ. ಆದರೆ, ತಾವೊಬ್ಬ ಬ್ರಾಹ್ಮಣ ಹಾಗೂ ಗೋವು ಭಕ್ತ ಎಂದು ಹೇಳಿಕೊಳ್ಳುವ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಮಾತ್ರ ತಾವು ಗೋ ಹಂತಕ ಎನ್ನುವುದನ್ನು ಸಾಬೀತುಪಡಿಸಿದ್ದಾರೆ’ ಎಂದು ಪ್ರಮೋದ್ ಮುತಾಲಿಕ್ ಟೀಕಿಸಿದರು.<br /> <br /> ಮಸೂದೆಗೆ ರಾಷ್ಟ್ರಪತಿಗಳ ಅಂಕಿತಕ್ಕೆ ಆಗ್ರಹಿಸಿ ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ದಯಾನಂದ ಸ್ವಾಮೀಜಿ ತಿಳಿಸಿದರು.ಹುಬ್ಬಳ್ಳಿ ಪಿಂಜರಾಪೋಳದ ಮಹಾಪೋಷಕ ಮೇಘರಾಜ ಕವಾಡ, ಕರ್ನಾಟಕ ರಾಜ್ಯ ರೈತ ಸಂಘದ ಗುರುನಾಥ ಮಾದಾಪುರ, ಆರ್ಎಸ್ಎಸ್ನ ಸುಭಾಸ ಸಿಂಗ್ ಜಮಾದಾರ, ಪ್ರೀತಿ ಬೆಹನ್ ಮೊದಲಾದವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>