<p><strong>ಶಿವಮೊಗ್ಗ:</strong> `ನನಗೆ ಗೌರವ ಇಲ್ಲದ ಮೇಲೆ, ಜನರ ಪ್ರೀತಿ-ವಿಶ್ವಾಸಕ್ಕೆ ಚ್ಯುತಿ ಬಂದಿದೆ ಎಂದು ಅನ್ನಿಸಿದ ಮೇಲೆ ರಾಜಕೀಯ ಕ್ಷೇತ್ರದಲ್ಲಿ ಇನ್ನೂ ಮುಂದುವರಿಯಬೇಕಾ? ಎಂಬ ಚಿಂತನೆ ನಡೆಸುತಿದ್ದೇನೆ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.<br /> <br /> ನಗರದ ಡಾ.ಅಂಬೇಡ್ಕರ್ ಭವನದಲ್ಲಿ ಭಾನುವಾರ ವೀರಶೈವ ಲಿಂಗಾಯತ ಪಂಚಮಸಾಲಿ ನಗರ ಮತ್ತು ತಾಲ್ಲೂಕು ಸಮಿತಿ ಹಮ್ಮಿಕೊಂಡಿದ್ದ ಚೈತನ್ಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಜನರ ನಂಬಿಕೆಯ ಪ್ರೀತಿ-ವಿಶ್ವಾಸಕ್ಕೆ ಧಕ್ಕೆ ಬಂದ ಮೇಲೆ ಅಂತಹ ಕ್ಷೇತ್ರದಲ್ಲಿ ಇರಬಾರದು. ಇದ್ದರೆ ಗೌರವ ಇರುವುದಿಲ್ಲ ಎಂದು ಆವೇಶಭರಿತರಾಗಿ ಹೇಳಿದ ಅವರು, `ಜನರು ತಮಗೆ ನೀಡಿದ ಅಧಿಕಾರವನ್ನು, ಅತ್ಯಂತ ಕಾಳಜಿಯಿಂದ ನಿರ್ವಹಿಸಿ, ಯಾರಿಗೂ ಎಂದಿಗೂ ಕುಂದುಂಟಾಗದಂತೆ, ಎಲ್ಲ ವರ್ಗಗಳ ಶ್ರೇಯೋಭಿವೃದ್ಧಿಗೆ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಆದರೂ ಸಹ ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ~ ಎಂದು ದೂರಿದರು.<br /> <br /> ಇಡೀ ದೇಶದಲ್ಲಿಯೇ ಇಲ್ಲಿಯವರೆಗೆ ಯಾವ ಮುಖ್ಯಮಂತ್ರಿಯೂ ಕಂಡರಿಯದಷ್ಟು, ಅನುಭವಿಸದಷ್ಟು, ಕಷ್ಟಗಳನ್ನು ತಾವು ಅನುಭವಿಸಿದ್ದು. ತಮ್ಮ ವಿರುದ್ಧ ಅನೇಕ ಆರೋಪ ಮಾಡಿ, ವಿನಾ ಕಾರಣ ಅಪರಾಧಿಯನ್ನಾಗಿಸಿ, ಜೈಲಿಗೆ ಕಳುಹಿಸಿದರು ಎಂದು ಹೇಳಿದರು.<br /> <br /> ಈಗಲೂ ಕೂಡ, ತಮ್ಮ ವಿರುದ್ಧ ನಿರಂತರ ಟೀಕೆ ನಡೆಯುತ್ತಿದ್ದು, ಅವೆಲ್ಲವನ್ನು ಎದುರಿಸಿಕೊಂಡು, ಸಹಿಸಿಕೊಂಡು ಕಾರ್ಯನಿರ್ವಹಣೆ ಮಾಡುತ್ತಿದ್ದೇನೆ. ತಾವು ಮುಖ್ಯಮಂತ್ರಿ ಆದ ಸಂದರ್ಭ ಯಾವುದೇ ಅಧಿಕಾರದ ದರ್ಪ, ಮದ ತಮಗಿರಲಿಲ್ಲ. ಸಾಮಾನ್ಯರಲ್ಲಿ ಸಾಮಾನ್ಯನಾಗಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಿದ್ದೇನೆ ಎಂದು ಸೂಚ್ಯವಾಗಿ ತಿಳಿಸಿದರು.<br /> <br /> ಹರಿಹರ ವೀರಶೈವ ಲಿಂಗಾಯಿತ ಪಂಚಮಸಾಲಿ ಮಠಾಧೀಶ ಸಿದ್ದಲಿಂಗೇಶ್ವರ ಸ್ವಾಮೀಜಿ, ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಮತ್ತಿತರರು ಇದ್ದರು.</p>.<p><strong>ವಾಸ್ತವ ನುಡಿದರೆ ಹುಚ್ಚನೇ?</strong><br /> ರಾಜಕೀಯದಲ್ಲಿ ನಡೆದ ವಾಸ್ತವ ಸ್ಥಿತಿಗಳ ಕುರಿತು ಮಾತನಾಡಿದರೆ, ನನಗೆ ಮಾನಸಿಕ ಅಸ್ವಸ್ಥ ಎಂಬ ಹಣೆಪಟ್ಟಿ ಕಟ್ಟುತ್ತಾರೆ ಎಂದು ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>ಯಡಿಯೂರಪ್ಪ ಅವರು ಮಾನಸಿಕ ಅಸ್ವಸ್ಥತೆಗೆ ತುತ್ತಾಗಿದ್ದಾರೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅವರು ಮಾತನಾಡಿದರು.<br /> <br /> ಸಿದ್ದರಾಮಯ್ಯ ಹೆಸರು ಪ್ರಸ್ತಾಪಿಸದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ತಮಗೂ ಕೂಡ ಅವರು ಬಳಸಿದ ಭಾಷೆಯನ್ನು ಉಪಯೋಗಿಸಲು ಬರುತ್ತದೆ ಎಂಬುದನ್ನು ಅವರು ಅರಿತುಕೊಳ್ಳಬೇಕು ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> `ನನಗೆ ಗೌರವ ಇಲ್ಲದ ಮೇಲೆ, ಜನರ ಪ್ರೀತಿ-ವಿಶ್ವಾಸಕ್ಕೆ ಚ್ಯುತಿ ಬಂದಿದೆ ಎಂದು ಅನ್ನಿಸಿದ ಮೇಲೆ ರಾಜಕೀಯ ಕ್ಷೇತ್ರದಲ್ಲಿ ಇನ್ನೂ ಮುಂದುವರಿಯಬೇಕಾ? ಎಂಬ ಚಿಂತನೆ ನಡೆಸುತಿದ್ದೇನೆ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.<br /> <br /> ನಗರದ ಡಾ.ಅಂಬೇಡ್ಕರ್ ಭವನದಲ್ಲಿ ಭಾನುವಾರ ವೀರಶೈವ ಲಿಂಗಾಯತ ಪಂಚಮಸಾಲಿ ನಗರ ಮತ್ತು ತಾಲ್ಲೂಕು ಸಮಿತಿ ಹಮ್ಮಿಕೊಂಡಿದ್ದ ಚೈತನ್ಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಜನರ ನಂಬಿಕೆಯ ಪ್ರೀತಿ-ವಿಶ್ವಾಸಕ್ಕೆ ಧಕ್ಕೆ ಬಂದ ಮೇಲೆ ಅಂತಹ ಕ್ಷೇತ್ರದಲ್ಲಿ ಇರಬಾರದು. ಇದ್ದರೆ ಗೌರವ ಇರುವುದಿಲ್ಲ ಎಂದು ಆವೇಶಭರಿತರಾಗಿ ಹೇಳಿದ ಅವರು, `ಜನರು ತಮಗೆ ನೀಡಿದ ಅಧಿಕಾರವನ್ನು, ಅತ್ಯಂತ ಕಾಳಜಿಯಿಂದ ನಿರ್ವಹಿಸಿ, ಯಾರಿಗೂ ಎಂದಿಗೂ ಕುಂದುಂಟಾಗದಂತೆ, ಎಲ್ಲ ವರ್ಗಗಳ ಶ್ರೇಯೋಭಿವೃದ್ಧಿಗೆ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಆದರೂ ಸಹ ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ~ ಎಂದು ದೂರಿದರು.<br /> <br /> ಇಡೀ ದೇಶದಲ್ಲಿಯೇ ಇಲ್ಲಿಯವರೆಗೆ ಯಾವ ಮುಖ್ಯಮಂತ್ರಿಯೂ ಕಂಡರಿಯದಷ್ಟು, ಅನುಭವಿಸದಷ್ಟು, ಕಷ್ಟಗಳನ್ನು ತಾವು ಅನುಭವಿಸಿದ್ದು. ತಮ್ಮ ವಿರುದ್ಧ ಅನೇಕ ಆರೋಪ ಮಾಡಿ, ವಿನಾ ಕಾರಣ ಅಪರಾಧಿಯನ್ನಾಗಿಸಿ, ಜೈಲಿಗೆ ಕಳುಹಿಸಿದರು ಎಂದು ಹೇಳಿದರು.<br /> <br /> ಈಗಲೂ ಕೂಡ, ತಮ್ಮ ವಿರುದ್ಧ ನಿರಂತರ ಟೀಕೆ ನಡೆಯುತ್ತಿದ್ದು, ಅವೆಲ್ಲವನ್ನು ಎದುರಿಸಿಕೊಂಡು, ಸಹಿಸಿಕೊಂಡು ಕಾರ್ಯನಿರ್ವಹಣೆ ಮಾಡುತ್ತಿದ್ದೇನೆ. ತಾವು ಮುಖ್ಯಮಂತ್ರಿ ಆದ ಸಂದರ್ಭ ಯಾವುದೇ ಅಧಿಕಾರದ ದರ್ಪ, ಮದ ತಮಗಿರಲಿಲ್ಲ. ಸಾಮಾನ್ಯರಲ್ಲಿ ಸಾಮಾನ್ಯನಾಗಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಿದ್ದೇನೆ ಎಂದು ಸೂಚ್ಯವಾಗಿ ತಿಳಿಸಿದರು.<br /> <br /> ಹರಿಹರ ವೀರಶೈವ ಲಿಂಗಾಯಿತ ಪಂಚಮಸಾಲಿ ಮಠಾಧೀಶ ಸಿದ್ದಲಿಂಗೇಶ್ವರ ಸ್ವಾಮೀಜಿ, ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಮತ್ತಿತರರು ಇದ್ದರು.</p>.<p><strong>ವಾಸ್ತವ ನುಡಿದರೆ ಹುಚ್ಚನೇ?</strong><br /> ರಾಜಕೀಯದಲ್ಲಿ ನಡೆದ ವಾಸ್ತವ ಸ್ಥಿತಿಗಳ ಕುರಿತು ಮಾತನಾಡಿದರೆ, ನನಗೆ ಮಾನಸಿಕ ಅಸ್ವಸ್ಥ ಎಂಬ ಹಣೆಪಟ್ಟಿ ಕಟ್ಟುತ್ತಾರೆ ಎಂದು ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>ಯಡಿಯೂರಪ್ಪ ಅವರು ಮಾನಸಿಕ ಅಸ್ವಸ್ಥತೆಗೆ ತುತ್ತಾಗಿದ್ದಾರೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅವರು ಮಾತನಾಡಿದರು.<br /> <br /> ಸಿದ್ದರಾಮಯ್ಯ ಹೆಸರು ಪ್ರಸ್ತಾಪಿಸದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ತಮಗೂ ಕೂಡ ಅವರು ಬಳಸಿದ ಭಾಷೆಯನ್ನು ಉಪಯೋಗಿಸಲು ಬರುತ್ತದೆ ಎಂಬುದನ್ನು ಅವರು ಅರಿತುಕೊಳ್ಳಬೇಕು ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>