<p><strong>ಶಿರಾ:</strong> ಗ್ಯಾಸ್ ಟ್ಯಾಂಕರ್ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಆತಂಕ ಸೃಷ್ಟಿಯಾಗಿದ್ದ ಘಟನೆ ಶಿರಾ– ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶನಿವಾರ ನಡೆಯಿತು.<br /> <br /> ಮಂಗಳೂರಿನಿಂದ ಆಂಧ್ರದ ಅನಂತಪುರಕ್ಕೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಲಾರಿ ಕ್ಯಾಬಿನ್ನಲ್ಲಿ ಕಳ್ಳಂಬೆಳ್ಳ ಟೋಲ್ ದಾಟಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.<br /> <br /> ಗ್ಯಾಸ್ ತುಂಬಿದ್ದ ಲಾರಿಯನ್ನು ಕೂಡಲೆ ರಸ್ತೆ ಬದಿಗೆ ನಿಲ್ಲಿಸಿದ ಚಾಲಕ ಸದಾಶಿವಂ ಮತ್ತು ಕ್ಲೀನರ್, ಪೊಲೀಸರಿಗೆ ಸುದ್ದಿ ತಲುಪಿಸಿದ್ದಾರೆ. ಕಳ್ಳಂಬೆಳ್ಳ ಪೊಲೀಸರು ರಸ್ತೆಯ ಇಕ್ಕೆಲಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿ, ಅಗ್ನಿಶಾಮಕ ದಳಕ್ಕೆ ವಿಷಯ ಮುಟ್ಟಿಸಿದರು.<br /> ಅಗ್ನಿಶಾಮಕ ದಳದ ಸಿಬ್ಬಂದಿ ಹೆಚ್ಚಿನ ಅನಾಹುತಕ್ಕೆ ಅವಕಾಶ ನೀಡದಂತೆ ಬೆಂಕಿ ನಂದಿಸಿದರು. ಲಾರಿ ಮುಂಭಾಗ ಸುಟ್ಟಿದೆ. ಅಪಾಯ ಇಲ್ಲ ಎಂದು ಖಚಿತ ಪಡಿಸಿಕೊಂಡ ನಂತರ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> <strong>ಇಬ್ಬರು ಸಾವು</strong><br /> ಶಿರಾ ತಾಲ್ಲೂಕಿನ ಸೀಬಿ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಲಾರಿ ಮತ್ತು ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ.<br /> <br /> ಭೂತಕಾಟನಹಳ್ಳಿ ರವಿ ಕುಮಾರ್ (22) ಹಾಗೂ ಹಿರಿಯೂರು ತಾಲ್ಲೂಕಿನ ಗೌಡಪಾಳ್ಯದ ಧನಂಜಯ(23) ಬೈಕಿನಲ್ಲಿ ತುಮಕೂರಿನಿಂದ ಶಿರಾಗೆ ಬರುತ್ತಿದ್ದ ವೇಳೆ ಮುಂದಿನಿಂದ ಬಂದ ಲಾರಿ ಅಪ್ಪಳಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.<br /> <br /> <strong>ನಿಧಿ ಆಸೆಗೆ ವಿಗ್ರಹ ಭಂಗ ಯತ್ನ</strong><br /> ನಿಧಿ ಆಸೆಗೆ ದುಷ್ಕರ್ಮಿಗಳು ದೇವರ ವಿಗ್ರಹ ಭಂಗಗೊಳಿಸಿದ ಘಟನೆ ಶಿರಾ ತಾಲ್ಲೂಕಿನ ಕೊಟ್ಟ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ನಡೆದಿದೆ.<br /> <br /> ಗ್ರಾಮದಿಂದ ಮದಲೂರಿಗೆ ತೆರಳುವ ರಸ್ತೆ ಪಕ್ಕದ ಕೆರೆ ಕಟ್ಟೆಗೆ ಹೊಂದಿಕೊಂಡಂತೆ ಇದ್ದ ಗಣಪತಿ ದೇವಾಲಯದಲ್ಲಿ ಘಟನೆ ನಡೆದಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.<br /> <br /> ನೂರಾರು ವರ್ಷಗಳ ಇತಿಹಾಸವಿರುವ ಗಣಪತಿ ದೇವಾಲಯದಲ್ಲಿ ನಿಧಿ ಇರಬಹುದು ಅಥವಾ ಗಣಪತಿ ವಿಗ್ರಹ ಮಾರಲು ಬಯಸಿರುವ ದುಷ್ಕರ್ಮಿಗಳು ವಿಗ್ರಹ ಕದಲಿಸುವ ವಿಫಲ ಪ್ರಯತ್ನ ನಡೆಸಿದ್ದಾರೆ.<br /> <br /> ಗಣಪತಿ ಹೊಟ್ಟೆ ಮೇಲೆ ಹಾರೆಯಿಂದ ಮೀಟಿದ ಗುರುತು ಕಂಡು ಬಂದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ಗ್ಯಾಸ್ ಟ್ಯಾಂಕರ್ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಆತಂಕ ಸೃಷ್ಟಿಯಾಗಿದ್ದ ಘಟನೆ ಶಿರಾ– ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶನಿವಾರ ನಡೆಯಿತು.<br /> <br /> ಮಂಗಳೂರಿನಿಂದ ಆಂಧ್ರದ ಅನಂತಪುರಕ್ಕೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಲಾರಿ ಕ್ಯಾಬಿನ್ನಲ್ಲಿ ಕಳ್ಳಂಬೆಳ್ಳ ಟೋಲ್ ದಾಟಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.<br /> <br /> ಗ್ಯಾಸ್ ತುಂಬಿದ್ದ ಲಾರಿಯನ್ನು ಕೂಡಲೆ ರಸ್ತೆ ಬದಿಗೆ ನಿಲ್ಲಿಸಿದ ಚಾಲಕ ಸದಾಶಿವಂ ಮತ್ತು ಕ್ಲೀನರ್, ಪೊಲೀಸರಿಗೆ ಸುದ್ದಿ ತಲುಪಿಸಿದ್ದಾರೆ. ಕಳ್ಳಂಬೆಳ್ಳ ಪೊಲೀಸರು ರಸ್ತೆಯ ಇಕ್ಕೆಲಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿ, ಅಗ್ನಿಶಾಮಕ ದಳಕ್ಕೆ ವಿಷಯ ಮುಟ್ಟಿಸಿದರು.<br /> ಅಗ್ನಿಶಾಮಕ ದಳದ ಸಿಬ್ಬಂದಿ ಹೆಚ್ಚಿನ ಅನಾಹುತಕ್ಕೆ ಅವಕಾಶ ನೀಡದಂತೆ ಬೆಂಕಿ ನಂದಿಸಿದರು. ಲಾರಿ ಮುಂಭಾಗ ಸುಟ್ಟಿದೆ. ಅಪಾಯ ಇಲ್ಲ ಎಂದು ಖಚಿತ ಪಡಿಸಿಕೊಂಡ ನಂತರ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> <strong>ಇಬ್ಬರು ಸಾವು</strong><br /> ಶಿರಾ ತಾಲ್ಲೂಕಿನ ಸೀಬಿ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಲಾರಿ ಮತ್ತು ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ.<br /> <br /> ಭೂತಕಾಟನಹಳ್ಳಿ ರವಿ ಕುಮಾರ್ (22) ಹಾಗೂ ಹಿರಿಯೂರು ತಾಲ್ಲೂಕಿನ ಗೌಡಪಾಳ್ಯದ ಧನಂಜಯ(23) ಬೈಕಿನಲ್ಲಿ ತುಮಕೂರಿನಿಂದ ಶಿರಾಗೆ ಬರುತ್ತಿದ್ದ ವೇಳೆ ಮುಂದಿನಿಂದ ಬಂದ ಲಾರಿ ಅಪ್ಪಳಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.<br /> <br /> <strong>ನಿಧಿ ಆಸೆಗೆ ವಿಗ್ರಹ ಭಂಗ ಯತ್ನ</strong><br /> ನಿಧಿ ಆಸೆಗೆ ದುಷ್ಕರ್ಮಿಗಳು ದೇವರ ವಿಗ್ರಹ ಭಂಗಗೊಳಿಸಿದ ಘಟನೆ ಶಿರಾ ತಾಲ್ಲೂಕಿನ ಕೊಟ್ಟ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ನಡೆದಿದೆ.<br /> <br /> ಗ್ರಾಮದಿಂದ ಮದಲೂರಿಗೆ ತೆರಳುವ ರಸ್ತೆ ಪಕ್ಕದ ಕೆರೆ ಕಟ್ಟೆಗೆ ಹೊಂದಿಕೊಂಡಂತೆ ಇದ್ದ ಗಣಪತಿ ದೇವಾಲಯದಲ್ಲಿ ಘಟನೆ ನಡೆದಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.<br /> <br /> ನೂರಾರು ವರ್ಷಗಳ ಇತಿಹಾಸವಿರುವ ಗಣಪತಿ ದೇವಾಲಯದಲ್ಲಿ ನಿಧಿ ಇರಬಹುದು ಅಥವಾ ಗಣಪತಿ ವಿಗ್ರಹ ಮಾರಲು ಬಯಸಿರುವ ದುಷ್ಕರ್ಮಿಗಳು ವಿಗ್ರಹ ಕದಲಿಸುವ ವಿಫಲ ಪ್ರಯತ್ನ ನಡೆಸಿದ್ದಾರೆ.<br /> <br /> ಗಣಪತಿ ಹೊಟ್ಟೆ ಮೇಲೆ ಹಾರೆಯಿಂದ ಮೀಟಿದ ಗುರುತು ಕಂಡು ಬಂದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>