<p><strong>ಸಂತೇಮರಹಳ್ಳಿ: </strong>ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರ ಖಂಡಿಸಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಕಚೇರಿಗೆ ಬೀಗ ಜಡಿಯಲು ಮುಂದಾದರು. <br /> ಸ್ಥಳಕ್ಕೆ ಆಗಮಿಸಿದ ಜಿ.ಪಂ. ಸಹಾಯಕ ಕಾರ್ಯದರ್ಶಿ ಪಿ.ಜಿ. ವೇಣುಗೋಪಾಲ್ ಪ್ರತಿಭಟ ನಾಕಾರ ರೊಂದಿಗೆ ಮಾತುಕತೆ ನಡೆಸಿದರು. <br /> <br /> ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಕಚೇರಿಗೆ ಸರಿಯಾಗಿ ಬರುತ್ತಿಲ್ಲ. ಸಾರ್ವಜನಿಕರ ಸಮಸ್ಯೆ ಕೇಳುತ್ತಿಲ್ಲ. ಗ್ರಾಮದಲ್ಲಿ ಕುಡಿಯುವ ನೀರು, ಚರಂಡಿ, ಬೀದಿದೀಪದ ಸಮಸ್ಯೆಯಿದ್ದು, ಗಮನಹರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. <br /> <br /> ಸಮಸ್ಯೆ ಗಮನಕ್ಕೆ ತರಲು ಸದಸ್ಯರು ಭೇಟಿ ನೀಡುತ್ತಿಲ್ಲ. 2.70 ಲಕ್ಷ ರೂ ದುರುಪಯೋಗವಾಗಿದೆ. ಶೌಚಾಲಯಗಳಿಗೆ ಅನಧಿಕೃತವಾಗಿ ಬಿಲ್ ಪಾವತಿಸಲಾಗಿದೆ. ಸಾಕಷ್ಟು ಅವ್ಯವಹಾರ ನಡೆದಿದ್ದು, ಕೂಡಲೇ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.</p>.<p>ವೇಣುಗೋಪಾಲ್ ಮಾತನಾಡಿ, ‘ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳ ಲಾಗುವುದು’ ಎಂದು ಹೇಳಿದರು. <br /> <br /> ಜಿ.ಪಂ. ಸದಸ್ಯ ಬಿ.ಪಿ. ಪುಟ್ಟಬುದ್ಧಿ, ಮುಖಂಡ ಸಿದ್ದಲಿಂಗಸ್ವಾಮಿ, ತಾ.ಪಂ. ಮಾಜಿ ಸದಸ್ಯ ಡಿ.ಪಿ. ಪ್ರಕಾಶ್, ಗ್ರಾ.ಪಂ. ಮಾಜಿ ಅಧ್ಯಕ್ಷ ಕಿಟ್ಟಪ್ಪ, ಚಿನ್ನಸ್ವಾಮಿ, ನಾಗರಾಜಪ್ಪ, ಡಿ.ಪಿ. ರಾಜು, ಸೋಮಣ್ಣ ಹಾಜರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ: </strong>ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರ ಖಂಡಿಸಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಕಚೇರಿಗೆ ಬೀಗ ಜಡಿಯಲು ಮುಂದಾದರು. <br /> ಸ್ಥಳಕ್ಕೆ ಆಗಮಿಸಿದ ಜಿ.ಪಂ. ಸಹಾಯಕ ಕಾರ್ಯದರ್ಶಿ ಪಿ.ಜಿ. ವೇಣುಗೋಪಾಲ್ ಪ್ರತಿಭಟ ನಾಕಾರ ರೊಂದಿಗೆ ಮಾತುಕತೆ ನಡೆಸಿದರು. <br /> <br /> ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಕಚೇರಿಗೆ ಸರಿಯಾಗಿ ಬರುತ್ತಿಲ್ಲ. ಸಾರ್ವಜನಿಕರ ಸಮಸ್ಯೆ ಕೇಳುತ್ತಿಲ್ಲ. ಗ್ರಾಮದಲ್ಲಿ ಕುಡಿಯುವ ನೀರು, ಚರಂಡಿ, ಬೀದಿದೀಪದ ಸಮಸ್ಯೆಯಿದ್ದು, ಗಮನಹರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. <br /> <br /> ಸಮಸ್ಯೆ ಗಮನಕ್ಕೆ ತರಲು ಸದಸ್ಯರು ಭೇಟಿ ನೀಡುತ್ತಿಲ್ಲ. 2.70 ಲಕ್ಷ ರೂ ದುರುಪಯೋಗವಾಗಿದೆ. ಶೌಚಾಲಯಗಳಿಗೆ ಅನಧಿಕೃತವಾಗಿ ಬಿಲ್ ಪಾವತಿಸಲಾಗಿದೆ. ಸಾಕಷ್ಟು ಅವ್ಯವಹಾರ ನಡೆದಿದ್ದು, ಕೂಡಲೇ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.</p>.<p>ವೇಣುಗೋಪಾಲ್ ಮಾತನಾಡಿ, ‘ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳ ಲಾಗುವುದು’ ಎಂದು ಹೇಳಿದರು. <br /> <br /> ಜಿ.ಪಂ. ಸದಸ್ಯ ಬಿ.ಪಿ. ಪುಟ್ಟಬುದ್ಧಿ, ಮುಖಂಡ ಸಿದ್ದಲಿಂಗಸ್ವಾಮಿ, ತಾ.ಪಂ. ಮಾಜಿ ಸದಸ್ಯ ಡಿ.ಪಿ. ಪ್ರಕಾಶ್, ಗ್ರಾ.ಪಂ. ಮಾಜಿ ಅಧ್ಯಕ್ಷ ಕಿಟ್ಟಪ್ಪ, ಚಿನ್ನಸ್ವಾಮಿ, ನಾಗರಾಜಪ್ಪ, ಡಿ.ಪಿ. ರಾಜು, ಸೋಮಣ್ಣ ಹಾಜರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>