<p><strong>ಯಲಹಂಕ</strong>: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಜಕ್ಕೂರು ಗ್ರಾಮದ ಶ್ರೀರಾಮ, ಮುನೇಶ್ವರಸ್ವಾಮಿ, ಅಕ್ಕಯಮ್ಮ ದೇವಾಲಯ ಸೇವಾ ಟ್ರಸ್ಟ್ ಆಶ್ರಯದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಗ್ರಾಮದೇವರುಗಳ ಉತ್ಸವ ಗುರುವಾರ ವಿಜೃಂಭಣೆಯಿಂದ ನೆರವೇರಿತು.<br /> <br /> ಬೆಳಿಗ್ಗೆ 10 ಗಂಟೆಗೆ ದೇವಾಲಯದಿಂದ ಹೊರಟ ಮೆರಣಿಗೆ, ಜಕ್ಕೂರು ಕೆರೆಯಲ್ಲಿ ಗಂಗೆ ಪೂಜೆ ನೆರವೇರಿಸಿ, ಅಲ್ಲಿಂದ ಬನ್ನಿ ಮಂಟಪಕ್ಕೆ ತೆರಳಿ, ಬನ್ನಿ ಮರಕ್ಕೆ ಪೂಜೆಯನ್ನು ಸಲ್ಲಿಸಲಾಯಿತು. <br /> <br /> ನಂತರ ನವ್ಯನಗರ, ಸ್ನೇಹನಗರ ಹಾಗೂ ಜಕ್ಕೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆಯು ಸಂಜೆ 4ರ ಹೊತ್ತಿಗೆ ದೇವಾಲಯ ತಲುಪಿತು.<br /> <br /> ಚಿಕ್ಕಮಗಳೂರಿನ ಶ್ವೇತಾ ಮತ್ತು ತಂಡದವರ ವೀರಗಾಸೆ ನೃತ್ಯ ಹಾಗೂ ತಮಟೆ ವಾದ್ಯಗಳು ಮೆರವಣಿಗೆಗೆ ವಿಶೇಷ ಮೆರುಗು ನೀಡಿ ನೋಡುಗರನ್ನು ಆಕರ್ಷಿಸಿದವು.<br /> <br /> ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷ ರವಿಕುಮಾರ್, ಮಹಿಳಾ ಸಂಘದ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಜಯಮ್ಮ ರವಿಕುಮಾರ್, ಕಾರ್ಯದರ್ಶಿ ಶ್ರೀದೇವಿ, ಪ್ರಧಾನ ಅರ್ಚಕರಾದ ಜೆ.ರಾಮ ಚಂದ್ರರಾವ್ ಹಾಗೂ ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಜಕ್ಕೂರು ಗ್ರಾಮದ ಶ್ರೀರಾಮ, ಮುನೇಶ್ವರಸ್ವಾಮಿ, ಅಕ್ಕಯಮ್ಮ ದೇವಾಲಯ ಸೇವಾ ಟ್ರಸ್ಟ್ ಆಶ್ರಯದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಗ್ರಾಮದೇವರುಗಳ ಉತ್ಸವ ಗುರುವಾರ ವಿಜೃಂಭಣೆಯಿಂದ ನೆರವೇರಿತು.<br /> <br /> ಬೆಳಿಗ್ಗೆ 10 ಗಂಟೆಗೆ ದೇವಾಲಯದಿಂದ ಹೊರಟ ಮೆರಣಿಗೆ, ಜಕ್ಕೂರು ಕೆರೆಯಲ್ಲಿ ಗಂಗೆ ಪೂಜೆ ನೆರವೇರಿಸಿ, ಅಲ್ಲಿಂದ ಬನ್ನಿ ಮಂಟಪಕ್ಕೆ ತೆರಳಿ, ಬನ್ನಿ ಮರಕ್ಕೆ ಪೂಜೆಯನ್ನು ಸಲ್ಲಿಸಲಾಯಿತು. <br /> <br /> ನಂತರ ನವ್ಯನಗರ, ಸ್ನೇಹನಗರ ಹಾಗೂ ಜಕ್ಕೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆಯು ಸಂಜೆ 4ರ ಹೊತ್ತಿಗೆ ದೇವಾಲಯ ತಲುಪಿತು.<br /> <br /> ಚಿಕ್ಕಮಗಳೂರಿನ ಶ್ವೇತಾ ಮತ್ತು ತಂಡದವರ ವೀರಗಾಸೆ ನೃತ್ಯ ಹಾಗೂ ತಮಟೆ ವಾದ್ಯಗಳು ಮೆರವಣಿಗೆಗೆ ವಿಶೇಷ ಮೆರುಗು ನೀಡಿ ನೋಡುಗರನ್ನು ಆಕರ್ಷಿಸಿದವು.<br /> <br /> ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷ ರವಿಕುಮಾರ್, ಮಹಿಳಾ ಸಂಘದ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಜಯಮ್ಮ ರವಿಕುಮಾರ್, ಕಾರ್ಯದರ್ಶಿ ಶ್ರೀದೇವಿ, ಪ್ರಧಾನ ಅರ್ಚಕರಾದ ಜೆ.ರಾಮ ಚಂದ್ರರಾವ್ ಹಾಗೂ ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>