<p><strong>ಗೌರಿಬಿದನೂರು:</strong>ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ಅತ್ಯಗತ್ಯ. ಬದಲಾವಣೆಗೆ ತಕ್ಕಂತೆ ವಿದ್ಯಾರ್ಥಿಗಳು ಹೊಂದಿಕೊಳ್ಳಬೇಕು ಎಂದು ಎಸಿಸಿ ಕಾರ್ಖಾನೆ ವ್ಯವಸ್ಥಾಪಕ ರಾಜೀವ್ ತಿಳಿಸಿದರು.<br /> <br /> ತಾಲ್ಲೂಕಿನ ತೊಂಡೇಬಾವಿ ಸ್ವಾಮಿ ಶಿವಾನಂದ ಪ್ರೌಢಶಾಲೆಗೆ ಎಸಿಸಿ ಕಾರ್ಖಾನೆ 4.5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಇ-ತರಬೇತಿ ಕೊಠಡಿಗಳನ್ನು ಶಾಲೆಯ ಆಡಳಿತ ಮಂಡಳಿಗೆ ಗುರುವಾರ ಹಸ್ತಾಂತರಿಸಿ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಸತ್ಪ್ರಜೆಗಳಾಗಬೇಕು ಎಂದರು.<br /> <br /> ಶಾಲೆಯ ಮುಖ್ಯ ಶಿಕ್ಷಕ ಮೀರ್ ಅಸೀಫ್ ಹುಸೇನ್ ಎಸಿಸಿ ಕಾರ್ಖಾನೆಗೆ ಕೃತಜ್ಞತೆ ಸಲ್ಲಿಸಿದರು. ಎಸಿಸಿ ಹಾಗೂ ಎಸ್ಇಎಆರ್ಡಿಎಸ್ ಸಂಸ್ಥೆಗಳ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಎಲೆಕ್ಟ್ರಿಷಿಯನ್ ಟೂಲ್ ಕಿಟ್ ಉಚಿತವಾಗಿ ನೀಡಲಾಯಿತು.<br /> <br /> ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಬ್ರಹ್ಮರಾಜ್, ಕಾರ್ಖಾನೆಯ ಸಿಬ್ಬಂದಿ ಎನ್.ಜಿ. ಸುಂದರ್ರಾಜ್, ರಾಮು, ಮೊಹಮದ್ ಖಾಜಾ, ಮನೋಜ್ಕುಮಾರ ವಂಶಿ, ರಷೀದ್, ನಜೀರ್, ಎಸ್ಟಿಡಿ ರಾಮಣ್ಣ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong>ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ಅತ್ಯಗತ್ಯ. ಬದಲಾವಣೆಗೆ ತಕ್ಕಂತೆ ವಿದ್ಯಾರ್ಥಿಗಳು ಹೊಂದಿಕೊಳ್ಳಬೇಕು ಎಂದು ಎಸಿಸಿ ಕಾರ್ಖಾನೆ ವ್ಯವಸ್ಥಾಪಕ ರಾಜೀವ್ ತಿಳಿಸಿದರು.<br /> <br /> ತಾಲ್ಲೂಕಿನ ತೊಂಡೇಬಾವಿ ಸ್ವಾಮಿ ಶಿವಾನಂದ ಪ್ರೌಢಶಾಲೆಗೆ ಎಸಿಸಿ ಕಾರ್ಖಾನೆ 4.5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಇ-ತರಬೇತಿ ಕೊಠಡಿಗಳನ್ನು ಶಾಲೆಯ ಆಡಳಿತ ಮಂಡಳಿಗೆ ಗುರುವಾರ ಹಸ್ತಾಂತರಿಸಿ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಸತ್ಪ್ರಜೆಗಳಾಗಬೇಕು ಎಂದರು.<br /> <br /> ಶಾಲೆಯ ಮುಖ್ಯ ಶಿಕ್ಷಕ ಮೀರ್ ಅಸೀಫ್ ಹುಸೇನ್ ಎಸಿಸಿ ಕಾರ್ಖಾನೆಗೆ ಕೃತಜ್ಞತೆ ಸಲ್ಲಿಸಿದರು. ಎಸಿಸಿ ಹಾಗೂ ಎಸ್ಇಎಆರ್ಡಿಎಸ್ ಸಂಸ್ಥೆಗಳ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಎಲೆಕ್ಟ್ರಿಷಿಯನ್ ಟೂಲ್ ಕಿಟ್ ಉಚಿತವಾಗಿ ನೀಡಲಾಯಿತು.<br /> <br /> ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಬ್ರಹ್ಮರಾಜ್, ಕಾರ್ಖಾನೆಯ ಸಿಬ್ಬಂದಿ ಎನ್.ಜಿ. ಸುಂದರ್ರಾಜ್, ರಾಮು, ಮೊಹಮದ್ ಖಾಜಾ, ಮನೋಜ್ಕುಮಾರ ವಂಶಿ, ರಷೀದ್, ನಜೀರ್, ಎಸ್ಟಿಡಿ ರಾಮಣ್ಣ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>