<p>ಸಂತೇಮರಹಳ್ಳಿ: `ಗ್ರಾಮಗಳಲ್ಲಿ ಶ್ರಮದಾನ ಮೂಲಕ ಅಭಿವೃದ್ಧಿಗೆ ಒತ್ತು ನೀಡಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ~ ಎಂದು ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಬಿ.ಪಿ. ಪುಟ್ಟಬುದ್ಧಿ ತಿಳಿಸಿದರು. <br /> <br /> ಸಮೀಪದ ಮೂಡಲಅಗ್ರಹಾರ ಗ್ರಾಮದಲ್ಲಿ ಈಚೆಗೆ ಯಳಂದೂರು ಬಿಳಿಗಿರಿ ಪ್ರಥಮದರ್ಜೆ ಕಾಲೇಜಿನಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಗ್ರಾಮಗಳಲ್ಲಿ ಶಿಬಿರಾರ್ಥಿಗಳು ಸ್ವಚ್ಛತೆ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಶಿಕ್ಷಣದಿಂದ ವಂಚಿತರಾದವರನ್ನು ಗುರುತಿಸಿ ತಿಳಿವಳಿಕೆ ನೀಡಬೇಕು. ಕೋಮುಸೌಹಾರ್ದ ಮೂಡಿಸಲು ಶಿಬಿರಗಳು ಸಹಕಾರಿಯಾಗಬೇಕು. ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಭಾಗವಹಿಸಿದಾಗ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬಹುದು. ಜತೆಗೆ, ಗ್ರಾಮೀಣರ ಬದುಕು ಅರಿಯಲು ಸಹಕಾರಿಯಾಗಲಿದೆ ಎಂದರು. <br /> <br /> ಜಾತಿಯತೆ, ಭ್ರಷ್ಟಾಚಾರದ ವಿರುದ್ಧ ಅರಿವು ಮೂಡಿಸಬೇಕಿದೆ. ಅಣ್ಣಾ ಹಜಾರೆ ಅವರನ್ನು ಯುವಕರು ಬೆಂಬಲಿದ್ದರಿಂದಲೇ ಕೇಂದ್ರ ಸರ್ಕಾರ ನಡುಗಿತು. ಆದ್ದರಿಂದ ಸಮಾಜ ಸುಧಾರಿಸುವಲ್ಲಿ ಯುವಕರ ಪಾತ್ರ ಮಹತ್ತರವಾದುದು ಎಂದರು.<br /> <br /> ಪ್ರಾಂಶುಪಾಲ ಪುಷ್ಪಕುಮಾರ್ ಮಾತನಾಡಿ, ಗಾಂಧೀಜಿ ಅವರ ಕನಸು ನನಸು ಮಾಡಲು ಯುವಕರು ಮುಂದಾಗಬೇಕು. ದೇಶದ ಸಮಸ್ಯೆ ಅರ್ಥಮಾಡಿಕೊಂಡು ಹೋರಾಟ ಮಾಡಬೇಕಿದೆ. ರಾಷ್ಟ್ರೀಯ ಸೇವಾ ಯೋಜನೆ ಮೂಲಕ ಸಮಾಜದಲ್ಲಿರುವ ಅಸಮಾನತೆ ಹೋಗಲಾಡಿಸಬೇಕು ಎಂದು ಸಲಹೆ ನೀಡಿದರು. <br /> <br /> ಸರಳತೆ, ಸಮಾನತೆ, ಸ್ವಾತಂತ್ರ್ಯದ ಅರ್ಥವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಸಮಾಜದ ಪ್ರತಿಯೊಂದು ಸಮಸ್ಯೆಗೂ ಶಿಕ್ಷಣದ ಕೊರತೆಯೇ ಕಾರಣ. ಈ ಹಿನ್ನೆಲೆಯಲ್ಲಿ ಗ್ರಾಮೀಣರಿಗೆ ಶಿಕ್ಷಣದ ಮಹತ್ವದ ಬಗ್ಗೆ ತಿಳಿಹೇಳಬೇಕು ಎಂದರು. <br /> <br /> ಕಾರ್ಯಕ್ರಮದಲ್ಲಿ ದೇಮಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಶೈಲಜಾ, ಮುಖ್ಯಶಿಕ್ಷಕಿ ಜಯಮ್ಮ, ಎಸ್ಡಿಎಂಸಿ ಅಧ್ಯಕ್ಷ ನಾಗೇಂದ್ರಮೂರ್ತಿ, ಮುಖಂಡರಾದ ಟಿ.ಕೆ. ರಂಗಯ್ಯ, ಗುರುಸಿದ್ದಶೆಟ್ಟಿ, ಶಾಂತಪ್ಪ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂತೇಮರಹಳ್ಳಿ: `ಗ್ರಾಮಗಳಲ್ಲಿ ಶ್ರಮದಾನ ಮೂಲಕ ಅಭಿವೃದ್ಧಿಗೆ ಒತ್ತು ನೀಡಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ~ ಎಂದು ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಬಿ.ಪಿ. ಪುಟ್ಟಬುದ್ಧಿ ತಿಳಿಸಿದರು. <br /> <br /> ಸಮೀಪದ ಮೂಡಲಅಗ್ರಹಾರ ಗ್ರಾಮದಲ್ಲಿ ಈಚೆಗೆ ಯಳಂದೂರು ಬಿಳಿಗಿರಿ ಪ್ರಥಮದರ್ಜೆ ಕಾಲೇಜಿನಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಗ್ರಾಮಗಳಲ್ಲಿ ಶಿಬಿರಾರ್ಥಿಗಳು ಸ್ವಚ್ಛತೆ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಶಿಕ್ಷಣದಿಂದ ವಂಚಿತರಾದವರನ್ನು ಗುರುತಿಸಿ ತಿಳಿವಳಿಕೆ ನೀಡಬೇಕು. ಕೋಮುಸೌಹಾರ್ದ ಮೂಡಿಸಲು ಶಿಬಿರಗಳು ಸಹಕಾರಿಯಾಗಬೇಕು. ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಭಾಗವಹಿಸಿದಾಗ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬಹುದು. ಜತೆಗೆ, ಗ್ರಾಮೀಣರ ಬದುಕು ಅರಿಯಲು ಸಹಕಾರಿಯಾಗಲಿದೆ ಎಂದರು. <br /> <br /> ಜಾತಿಯತೆ, ಭ್ರಷ್ಟಾಚಾರದ ವಿರುದ್ಧ ಅರಿವು ಮೂಡಿಸಬೇಕಿದೆ. ಅಣ್ಣಾ ಹಜಾರೆ ಅವರನ್ನು ಯುವಕರು ಬೆಂಬಲಿದ್ದರಿಂದಲೇ ಕೇಂದ್ರ ಸರ್ಕಾರ ನಡುಗಿತು. ಆದ್ದರಿಂದ ಸಮಾಜ ಸುಧಾರಿಸುವಲ್ಲಿ ಯುವಕರ ಪಾತ್ರ ಮಹತ್ತರವಾದುದು ಎಂದರು.<br /> <br /> ಪ್ರಾಂಶುಪಾಲ ಪುಷ್ಪಕುಮಾರ್ ಮಾತನಾಡಿ, ಗಾಂಧೀಜಿ ಅವರ ಕನಸು ನನಸು ಮಾಡಲು ಯುವಕರು ಮುಂದಾಗಬೇಕು. ದೇಶದ ಸಮಸ್ಯೆ ಅರ್ಥಮಾಡಿಕೊಂಡು ಹೋರಾಟ ಮಾಡಬೇಕಿದೆ. ರಾಷ್ಟ್ರೀಯ ಸೇವಾ ಯೋಜನೆ ಮೂಲಕ ಸಮಾಜದಲ್ಲಿರುವ ಅಸಮಾನತೆ ಹೋಗಲಾಡಿಸಬೇಕು ಎಂದು ಸಲಹೆ ನೀಡಿದರು. <br /> <br /> ಸರಳತೆ, ಸಮಾನತೆ, ಸ್ವಾತಂತ್ರ್ಯದ ಅರ್ಥವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಸಮಾಜದ ಪ್ರತಿಯೊಂದು ಸಮಸ್ಯೆಗೂ ಶಿಕ್ಷಣದ ಕೊರತೆಯೇ ಕಾರಣ. ಈ ಹಿನ್ನೆಲೆಯಲ್ಲಿ ಗ್ರಾಮೀಣರಿಗೆ ಶಿಕ್ಷಣದ ಮಹತ್ವದ ಬಗ್ಗೆ ತಿಳಿಹೇಳಬೇಕು ಎಂದರು. <br /> <br /> ಕಾರ್ಯಕ್ರಮದಲ್ಲಿ ದೇಮಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಶೈಲಜಾ, ಮುಖ್ಯಶಿಕ್ಷಕಿ ಜಯಮ್ಮ, ಎಸ್ಡಿಎಂಸಿ ಅಧ್ಯಕ್ಷ ನಾಗೇಂದ್ರಮೂರ್ತಿ, ಮುಖಂಡರಾದ ಟಿ.ಕೆ. ರಂಗಯ್ಯ, ಗುರುಸಿದ್ದಶೆಟ್ಟಿ, ಶಾಂತಪ್ಪ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>